ಟೀಕೆಗಳು ಅಳಿಯುತ್ತವೆ; ಅಭಿವೃದ್ಧಿ ಕೆಲಸಗಳು ಉಳಿಯುತ್ತವೆ: ಶಾಸಕ ಯಶವಂತರಾಯಗೌಡ

Date:

Advertisements

ಟೀಕೆಗಳು ಅಳಿಯುತ್ತವೆ, ನಾವು ಕೈಗೊಂಡ ಅಭಿವೃದ್ಧಿ ಕೆಲಸಗಳು ಜನಮಾನಸದಲ್ಲಿ ಉಳಿಯುತ್ತವೆ ಎಂಬ ಸಿದ್ದಾಂತದೊಂದಿಗೆ ರಾಜಕಾರಣ ಮಾಡುತ್ತಿದ್ದೇನೆ. ಯಾರು ಸಮರ್ಥರು ಎಂಬುದನ್ನು ಜನ ನಿರ್ಧರಿಸುತ್ತಾರೆ. ಇಂಡಿ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಕೈಗೊಂಡು ಜನರ ಹೃದಯಕ್ಕೆ ಹತ್ತಿರವಾಗಿದ್ದೇನೆ. ಹೀಗಾಗಿ ಟೀಕೆಗಳಿಗೆ ನಾನು ಉತ್ತರ ಕೊಡಲ್ಲ ಎಂದು ಶಾಸಕ ಯಶವಂತರಾಯ ಗೌಡ ಪಾಟೀಲ ಹೇಳಿದರು.

ವಿಜಯಪುರ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಂಜುಂಡಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದ ತಾಲೂಕು ಎನಿಸಿಕೊಂಡಿದ್ದ ಇಂಡಿಯನ್ನು ಅಭಿವೃದ್ಧಿ ಹೊಂದಿದ ತಾಲೂಕಾಗಿ ಪರಿವರ್ತಿಸಲಾಗಿದೆ. ಭೀಮಶಂಕರ ಸಹಕಾರ ಸಕ್ಕರೆ ಕಾರ್ಖಾನೆ ಆರಂಭ, ಕೆರೆ ತುಂಬುವ ಯೋಜನೆ, ನಿಂಬೆ ಅಭಿವೃದ್ಧಿ ಮಂಡಳಿ, ನಿಂಬೆ ಜಿಐ ಟ್ಯಾಗ್, ಸರಕಾರಿ ಕಚೇರಿಗಳ ಆರಂಭ, ಕುಡಿಯುವ ನೀರಿನ ಯೋಜನೆ ಸೇರಿದಂತೆ ಇಂಡಿ ಕ್ಷೇತ್ರದಲ್ಲಿ ಜನರಿಗೆ ನೀಡಿದ ವಾಗ್ದಾನದಂತೆ ನಡೆದುಕೊಂಡಿದ್ದೇನೆ. ರೇವಣಸಿದ್ದೇಶ್ವರ ಏತ ನೀರಾವರಿ ಭೂಮಿ ಪೂಜೆ ಸಂದರ್ಭ ನಾನು ರಾಜಕಾರಣ ಮಾಡಿಲ್ಲ. ನಮ್ಮ ಭಾಗಕ್ಕೆ ನೀರಾವರಿ ಆಗುತ್ತದೆಂದು ಮುಕ್ತ ಮನಸ್ಸಿನಿಂದ ಭಾಗವಹಿಸಿದ್ದೆ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಲ್ಲ. ಬೇರೆಯವರು ಕೂಡ ಮಾಡಬಾರದು” ಎಂದು ಹೇಳಿದರು.

“ಜುಲೈ 14 ರಂದು ಇಂಡಿಯಲ್ಲಿ ನಡೆಯುತ್ತಿರುವುದು ಸರ್ಕಾರದ ಕಾರ್ಯಕ್ರಮ. ಶಿಷ್ಟಾಚಾರದ ಜೊತೆಗೆ ಸಂಸದರು ಸೇರಿದಂತೆ ಎಲ್ಲರೂ ಬನ್ನಿ ಎಂದು ಮಾಧ್ಯಮ ಮೂಲಕ ಆಹ್ವಾನಿಸುವೆ. ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಒಬ್ಬ ಅಧಿಕಾರಿಯೂ ಇರಲಿಲ್ಲ. ಯಾರೇ ಅಭಿವೃದ್ಧಿ ಕೆಲಸ ಕೈಗೊಂಡರು ಕ್ರೆಡಿಟ್ ಕೊಡುವ ಸ್ವಚ್ಛ ಮನಸ್ಸು ನನ್ನದು. ನಮ್ಮ ಜನರಿಗೆ ಕೆಲಸ ಆಗಬೇಕು ಅಷ್ಟೇ. ನಿತಿನ್ ಗಡ್ಕರಿ ಅವರ ರಸ್ತೆ ಅಭಿವೃದ್ಧಿ ಕಾರ್ಯವನ್ನು ಶ್ಲಾಘಸಿದ್ದೇನೆ” ಎಂದರು.

Advertisements

ಇದನ್ನೂ ಓದಿ: ವಿಜಯಪುರ | ವಿದ್ಯಾರ್ಥಿನಿಯರ ವಸತಿ ನಿಲಯ ಮಂಜೂರಾತಿಗೆ ಆಗ್ರಹ

“ಕಾಲುವೆ ಯೋಜನೆಗೆ ರಾಜ್ಯ ಸರ್ಕಾರ ಕೂಡ ಶೇ 40 ರಷ್ಟು ಅನುದಾನ ಕೊಡುತ್ತದೆ. ಸಿಡಬ್ಲ್ಯೂಸಿ ಬಗ್ಗೆ ನಮ್ಮ ಅಧಿಕಾರಿಗಳು ಕೂಡ ಭಾಗವಹಿಸಿದ್ದರು. ರಾಜ್ಯ ಸರ್ಕಾರ ಆದಷ್ಟು ಬೇಗ ಡಿಪಿಆರ್ ಸಿದ್ದಪಡಿಸಿ ಕಳಿಸಲಾಗಿದೆ ಎಂದು ತಿಳಿಸಿದರು. ಗೋಳಗುಮ್ಮಟ ವಿಶ್ವ ಪರಂಪರೆ ಪಟ್ಟಿಗೆ ಸೇರಿಸಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬಹುದಿತ್ತು. ಗೋವಿಂದ ಕಾರಗೋಳ ಅವರು ವಿಮಾನ ನಿಲ್ದಾಣ ಮಾಡಿದ್ದಾರೆ. ಈಗ ಕೇಂದ್ರದಿಂದ ಪರಿಸರದ ಅನುಮತಿ ಕೊಡಸಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X