ಬಾಗೇಪಲ್ಲಿ | ಬಿರುಗಾಳಿ ಸಹಿತ ಮಳೆ, 2 ಎಕರೆ ಹೀರೆಕಾಯಿ ಬೆಳೆ ನೆಲಸಮ; ರೈತ ಕಂಗಾಲು

Date:

Advertisements

ಬಿರುಗಾಳಿ ಸಹಿತವಾಗಿ ಸುರಿದ ಬಾರೀ ಮಳೆಗೆ 2 ಎಕರೆ ಭೂಮಿಯಲ್ಲಿ ಬೆಳೆದಿದ್ದ ಹೀರೆಕಾಯಿ ಬೆಳೆ ನೆಲಸಮವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಹೋಬಳಿಯ ಕನಗಮಾಕಲಪಲ್ಲಿ ಗ್ರಾಮದ ರೈತ ಮುರುಳಿ ಎಂಬುವರು ತಮ್ಮ ಎರಡು ಎಕರೆ ಭೂಮಿಯಲ್ಲಿ ಹೀರೆಕಾಯಿ ಬೆಳೆ ಬೆಳೆದಿದ್ದರು. ಒಂದೂವರೆ ತಿಂಗಳಿಂದ ನೀರು, ಗೊಬ್ಬರ ನೀಡಿ ಬೆಳೆದಿದ್ದ ಬೆಳೆ ಮಳೆಯ ಹೊಡೆತಕ್ಕೆ ಸಿಲುಕಿ ನೆಲಕಚ್ಚಿದೆ.

ಇನ್ನೆರಡು ದಿನಗಳಲ್ಲಿ ಬೆಳೆ ಕಟಾವು ಮಾಡಬೇಕಿತ್ತು. ಅಷ್ಟರಲ್ಲಿ ಏಕಾಏಕಿಯಾಗಿ ಜೋರಾದ ಗಾಳಿ ಮಳೆ ಸುರಿದಿದ್ದು, 2 ಎಕರೆಯಲ್ಲಿ ಬೆಳೆದಿದ್ದ ಸಂಪೂರ್ಣ ಬೆಳೆ ನಷ್ಟವಾಗಿದೆ. ಕಷ್ಟ ಬೆಳೆದು ಬೆಳೆ ಈ ರೀತಿ ನಷ್ಟವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದತಾಗಿದೆ ಎಂದು ರೈತ ಮುರುಳಿ ಕಂಗಾಲಾಗಿದ್ದಾರೆ.

Advertisements

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಪುತ್ಥಳಿ ವಿವಾದ; ಕೆಂಪೇಗೌಡರನ್ನು ಅಪಮಾನಿಸಿದರೆ ತಕ್ಕ ಪಾಠ: ನಿರ್ಮಾಪಕ ಉಮಾಪತಿ

ಈ ಕುರಿತು ಈದಿನ ಡಾಟ್‌ ಕಾಮ್‌ ಜತೆಗೆ ಮಾತನಾಡಿದ ರೈತ ಸಂಘ ರಾಜ್ಯ ಸಂಚಾಲಕ ಲಕ್ಷ್ಮಣ್‌ ರೆಡ್ಡಿ, ರೈತರು ಬೆಳೆದಿದ್ದ ಬೆಳೆ ಮಳೆ, ಗಾಳಿಯಿಂದ ನೆಲಸಮವಾಗಿದೆ. ಸಾಲ ಮಾಡಿ ಬೆಳೆ ಬೆಳೆಯುವ ರೈತರಿಗೆ ಇದು ದೊಡ್ಡ ಆಘಾತ. ಈ ರೀತಿ ನಷ್ಟ ಅನುಭವಿಸುವ ರೈತರಿಗೆ ಇಲಾಖೆಯಿಂದ ಸೂಕ್ತ ಪರಿಹಾರ ದೊರೆಯುವಂತಾಗಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X