ಚಿಕ್ಕಬಳ್ಳಾಪುರ | ಭಾರತೀಯ ಮೂಲ ಕಲೆಯ ಪೋಷಣೆ ಶ್ಲಾಘನೀಯ:‌ ಹೈಕೋರ್ಟ್ ವಕೀಲ ಪಾವಗಡ ಶ್ರೀರಾಮ್

Date:

Advertisements

‌ಭಾರತೀಯ ಮೂಲ ಕಲೆಗಳು ಅಳಿವಿನಂಚಿಗೆ ಸರಿಯುತ್ತಿರುವ ಇಂದಿನ ಡಿಜಿಟಲ್‌ ಯುಗದಲ್ಲಿ ಜನಪದ ಕಲೆಗಳ ಪೋಷಣೆ ನಿಜಕ್ಕೂ ಶ್ಲಾಘನೀಯ ಎಂದು ಹೈಕೋರ್ಟ್‌ ವಕೀಲ ಪಾವಗಡ ಶ್ರೀರಾಮ್‌ ಹೇಳಿದರು.

ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್‌ ಭವನದಲ್ಲಿ ಯಶ್ವಂತ್‌ ಅಕಾಡೆಮಿ ಆಫ್‌ ಕಲ್ಚರಲ್‌ ಫಿಲಂ ಸೈನ್ಸ್‌ ಅಂಡ್‌ ರೀಸರ್ಚ್‌ ಇನ್ಸ್ಟಿಟ್ಯೂಟ್‌ ಗುರುವಾರ ಆಯೋಜಿಸಿದ್ದ ಸಾಂಸ್ಕೃತಿಕ ಸುಗ್ಗಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿಎಂ ರವಿಕುಮಾರ್ ಮಾತನಾಡಿ, ಇಲಾಖೆ ವತಿಯಿಂದ ಜನಪದ ಕಲೆ ಮತ್ತು ಜನಪದ ಕಲಾವಿದರಿಗೆ ಸಿಗುವಂತ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕಲಾವಿದರು ಮತ್ತು ಕಲೆಯನ್ನು ಪೋಷಿಸುವ ಸಂಸ್ಥೆಗಳು ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

Advertisements

ಜಿಪಂ ಮಾಜಿ ಸದಸ್ಯ ಕೆ.ಸಿ ರಾಜಿಕಾಂತ್ ಮಾತನಾಡಿ, ಚಿಕ್ಕಬಳ್ಳಾಪುರ ಕಲೆಗಳ ತವರೂರು ಮತ್ತು ಕಲಾವಿದರ ಬೀಡಾಗಿದೆ. ಇಂತಹ ಕಲಾವಿದರಿಗೆ ಸೂಕ್ತ ವೇದಿಕೆಗಳನ್ನ ಕೊಡುವ ರೀತಿಯಲ್ಲಿ ಈ ಸಂಸ್ಥೆಯು ಕೆಲಸ ಮಾಡುತ್ತಿದ್ದು, ಕಲಾವಿದರು ಈ ಸಂಸ್ಥೆಗೆ ಆಭಾರಿಯಾಗಿರಬೇಕು ಎಂದು ಹೇಳಿದರು.

ಇಂದಿನ ಕಾಲದಲ್ಲಿ ಜನಪದಕ್ಕೆ ಯಾವುದೇ ಮಾನ್ಯತೆ ಮತ್ತು ಪ್ರೋತ್ಸಾಹ ಸಿಗದೇ ಅನೇಕ ಬಡ ಜನಪದ ಕಲಾವಿದರು ಕಲೆಯನ್ನು ಮರೆತು ತಮ್ಮ ಜೀವನೋಪಾಯಕ್ಕಾಗಿ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದು ಕಲೆಗೆ ಆಗುತ್ತಿರುವ ಅವಮಾನ. ಇಂತಹ ಸ್ಥಿತಿಯಲ್ಲಿ ಯಶ್ವಂತ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಜನಪದ ನೃತ್ಯ, ಕಂಸಾಳೆ, ಯಕ್ಷಗಾನ, ಜನಪದ ಗಾಯನ, ಪಟಕುಣಿತ ಮುಂತಾದ ನೃತ್ಯ ಪ್ರಕಾರಗಳು ಪ್ರದರ್ಶನಗೊಂಡವು.

ಕಾರ್ಯಕ್ರಮದಲ್ಲಿ ಎಸ್.ಎಸ್.ಡಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಜಿ.ಸಿ ವೆಂಕಟರಮಣಪ್ಪ, ಮಂಚನಬಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಮಧು ವಿ, ಸಮಾಜ ಸೇವಕರಾದ ಮಂಡಿಕಲ್ ಕುಪೇಂದ್ರ, ಎಂಬೋಸ್ದ್ ಸಿಇಓ ರೂಹಿದ್, ಮಾನವ ಹಕ್ಕುಗಳ ಜಿಲ್ಲಾಧ್ಯಕ್ಷರಾದ ಟಿ ಆರ್ ಕೃಷ್ಣಪ್ಪ, ಕನ್ನಡ ಪರ ಹೋರಾಟಗಾರ ಮತ್ತು ರಾಜ್ಯ ಮುಖಂಡರಾದ ತಿಪ್ಪೇನಹಳ್ಳಿ ಪಿ ನಾರಾಯಣಸ್ವಾಮಿ, ನಮ್ಮ ಕರ್ನಾಟಕ ಅಹಿಂದ ಜನಪದ ವೇದಿಕೆಯ ಅಧ್ಯಕ್ಷರಾದ ಕೃಷ್ಣಚಾರಿ, ಹಿರಿಯ ಸಾಹಿತಿಗಳು ಮತ್ತು ಸಮಾಜದ ಹೋರಾಟಗಾರರಾದ ಪ್ರೆಸ್ ಸುಬ್ರಾಯಪ್ಪ, ಕರ್ನಾಟಕ ರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ನಾರಾಯಣಸ್ವಾಮಿ ಎನ್.ಎಂ, ಯುವ ಮುಖಂಡರು ಡಾಕ್ಟರ್ ಬಿ ವಿ ಆನಂದ್ (ಅನು),ವಕೀಲರಾಗಿರುವ ಎಸ್ ಡಿ ನರಸಿಂಹಮೂರ್ತಿ ಮತ್ತು ಹಲವಾರು ಕಲಾವಿದರು ಹಾಗೂ ಕನ್ನಡ ಅಭಿಮಾನಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X