ಕಲಬುರಗಿ | ದೇಶದ ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಂಸ್ಕೃತಿಕ ಚಳುವಳಿ ಅಗತ್ಯ: ಡಾ.ರಮೇಶ್ ಲಂಡನಕರ್

Date:

“ದೇಶದ ಇಂದಿನ ಸಾಂಸ್ಕೃತಿಕ, ವೈಚಾರಿಕ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಂಸ್ಕೃತಿಕ ಚಳುವಳಿ ಅತ್ಯವಶ್ಯಕ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ರಮೇಶ ಲಂಡನಕರ್ ತಿಳಿಸಿದರು.

- Advertisement -

ನೇತಾಜಿ ಸುಭಾಷಚಂದ್ರ ಬೋಸ್ ಸ್ಮರಣ ಸಮಿತಿ, ಆವಿಷ್ಕಾರ ವೇದಿಕೆ, ಎಐಡಿಎಸ್‌ಓ, ಎಐಡಿವೈಓ, ಎಐಎಮ್ಎಸ್‌ಎಸ್ ಜಂಟಿಯಾಗಿ ಕಲಬುರಗಿ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಂಡಿರುವ “ಸಾಂಸ್ಕೃತಿಕ ಜನೋತ್ಸವ” ಕಾರ್ಯಕ್ರಮದ ಎರಡನೇ ದಿನ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ನೇತಾಜಿ ಸುಭಾಶ್ಚಂದ್ರ ಬೋಸ್‌ರವರ ವಿಚಾರಧಾರೆ-ಅವರ ಸಮರಶೀಲ ಹೋರಾಟವು ಅತ್ಯಂತ ಪ್ರಸ್ತುತವಾಗಿದೆ. ಇಂದಿನ ರಾಜಕೀಯ-ಸಾಮಾಜಿಕ-ಆರ್ಥಿಕ ಹಾಗೂ ಸಾಂಸ್ಕೃತಿಕ ಸಮಸ್ಯೆಗಳಿಗೆ ಪರಿಹಾರವನ್ನು ನೇತಾಜಿಯವರ ರಾಜೀರಹಿತ ಹೋರಾಟದಲ್ಲಿ ಕಾಣಬಹುದಾಗಿದೆ” ಎಂದು ಹೇಳಿದರು.

“ಒಂದೆಡೆ ಬ್ರಿಟಿಷರ ಆಳ್ವಿಕೆಯಡಿಯಲ್ಲಿ ದೇಶದ ಜನತೆಯು ಅತ್ಯಂತ ಶೋಷಣೆಗೊಳಗಾಗಿದ್ದರು. ಇನ್ನೊಂದೆಡೆ ಕಂದಾಚಾರ, ಮೌಢ್ಯತೆ ಹಾಗೂ ಜಡತ್ವ ತುಂಬಿತ್ತು. ಇಂತಹ ಸಂದರ್ಭದಲ್ಲಿ ನೇತಾಜಿಯವರು ಕಟ್ಟಿದಂತಹ ಸಮರಶೀಲ ಹೋರಾಟವು ಸ್ವಾತಂತ್ರ್ಯ ಸಂಗ್ರಾಮದ ದಿಕ್ಕನ್ನೇ ಬದಲಾಯಿಸಿ, ಜನರಲ್ಲಿ ಹೊಸ ಹುಮ್ಮಸ್ಸು ಕನಸು ನೀಡಿತು. ನೇತಾಜಿಯವರ ಸ್ವತಂತ್ರ ಭಾರತವು ಬಡತನಮುಕ್ತ, ಮಾನವನಿಂದ ಮಾನವನ ಶೋಷಣಾಮುಕ್ತ ಸಮಸಮಾಜ ನಿರ್ಮಾಣದ ಕನಸಿತ್ತು. ಆದರೆ ಅವರ ಕನಸು ಕನಸಾಗಿಯೇ ಉಳಿದಿದ್ದು, ಈಗ ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದು ಹೇಳಿದರು.

“ಇಂದಿನ ಶಿಕ್ಷಣವು ವೈಜ್ಞಾನಿಕ ಹಾಗೂ ಧರ್ಮ ನಿರಪೇಕ್ಷವಾಗಿಲ್ಲದಿರುವುದರಿಂದ ಇಂದಿನ ಯುವಪೀಳಿಗೆ ಯಾವುದೇ ಆದರ್ಶ-ತಾತ್ವಿಕತೆ ಇಲ್ಲದೇ ಸೊರಗುತ್ತಿದೆ. ಸಮಾಜದಲ್ಲಿ ನೀತಿ, ನೈತಿಕತೆ ಹಾಗೂ ಸಾಂಸ್ಕೃತಿಕ ಅಧಃಪತನದಿಂದಾಗಿ ವಿದ್ಯಾರ್ಥಿ-ಯುವ ಸಮೂಹವು ಕವಲು ಸ್ಥಿತಿಯಲ್ಲಿದೆ. ಹಾಗಾಗಿ, ಇಂದು ಸಮಾಜವನ್ನು ಅಮೂಲಾಗ್ರವಾಗಿ ಬದಲಾಯಿಸಬೇಕೆಂದರೆ ಜನರ ಮನೋಭೂಮಿಕೆಯನ್ನು ಹದಗೊಳಿಸುವುದಕ್ಕಾಗಿ ಸಾಂಸ್ಕೃತಿಕ ಚಳುವಳಿ ಅತ್ಯವಶ್ಯಕ. ಹಾಗಾಗಿಕಲಬುರಗಿ ಜನತೆಯು ಸೇರಿಕೊಂಡು ಪ್ರತಿ ವರ್ಷ ನಡೆಸುತ್ತಿರುವ ಸಾಂಸ್ಕೃತಿಕ ಜನೋತ್ಸವ ಬಹುಮುಖ್ಯವಾದುದು” ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಎಐಎಮ್ಎಸ್ಎಸ್ ಜಿಲ್ಲಾ ಕಾರ್ಯದರ್ಶಿಗಳಾದ ಡಾ. ಸೀಮಾ ದೇಶಪಾಂಡೆ ಮಾತನಾಡಿ, “ನೇತಾಜಿರವರು ಲಿಂಗಭೇದ ಮಾಡದೇ ಸಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಕೈಗೆ ಬಂದೂಕು ನೀಡಿ, ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿಸಿದ್ದು ಕ್ರಾಂತಿಕಾರಿ ನಡೆಯೆಂದು ಹೇಳುತ್ತಾ, ನೇತಾಜಿಯವರ ಕನಸಿನ ಭಾರತವನ್ನು ನಿರ್ಮಾಣ ಮಾಡುವುದರಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾದದು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ತ್ಯಾಗ-ಸ್ಫೂರ್ತಿಯ ಸಂಕೇತ ರಮಾಬಾಯಿ ಅಂಬೇಡ್ಕ‌ರ್: ಮಿಲಿಂದ್ ಸಾಗರ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ತುಳಜಾರಾಮ ರವರು ವಹಿಸಿಕೊಂಡಿದ್ದರು. ಉದ್ಘಾಟನಾ ಕಾರ್ಯಕ್ರಮದ ನಂತರ ಡೊಳ್ಳಿನ ಪದಗಳು, ಕೊಳಲು ವಾದನ, ನೃತ್ಯ, ಕಾವ್ಯ-ಕುಂಚ-ನೃತ್ಯ, ಖವ್ವಾಲಿ, ಹಾಗೂ ಪ್ರೇತಾತ್ಮಗಳು ನಾಟಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...