ದ.ಕ. | ಹೊಂಡ ಗುಂಡಿಗಳಿಗೆ ಬಿದ್ದು ವಾಹನ ಸವಾರರು ಮೃತಪಟ್ಟರು ಜನಪ್ರತಿನಿಧಿಗಳಿಗೆ ಲೆಕ್ಕವಿಲ್ಲ: ಡಿವೈಎಫ್ಐ

Date:

Advertisements

ಬೈಕಂಪಾಡಿ ಕೈಗಾರಿಕಾ ವಲಯದ ಹೆದ್ದಾರಿ ಸಂಪರ್ಕಿಸುವ ರಸ್ತೆ ಸೇರಿದಂತೆ ಬಹುತೇಕ ಒಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಕೂಡಲೇ ಹೊಂಡ ಗುಂಡಿ ಮುಚ್ಚಿ ರಸ್ತೆ ದುರಸ್ತಿಗೊಳಿಸಲು ಒತ್ತಾಯಿಸಿ, ನಾಗರಿಕರು ಮತ್ತು ಆಟೋ ರಿಕ್ಷಾ ಚಾಲಕರು ಡಿವೈಎಫ್ಐ ಬೈಕಂಪಾಡಿ ಘಟಕದ ನೇತೃತ್ವದಲ್ಲಿ ಬೈಕಂಪಾಡಿ ಕ್ರಾಸ್ ಬಳಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಮಂಗಳೂರು | ಇಲಾಖಾಧಿಕಾರಿಗಳ ಹರಸಾಹಸ, ದಡ ಸೇರಿದ ಜೋಡಿ ಕಾಡಾನೆಗಳು

ಪ್ರತಿಭಟನೆ ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡಿ, ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ನೆಲ ಜಲವನ್ನು ತ್ಯಾಗ ಮಾಡಿದ ಜನರನ್ನೇ ಮೂಲಭೂತ ಸೌಕರ್ಯಕ್ಕಾಗಿ ಹೋರಾಟ ಮಾಡುವ ದುಸ್ಥಿತಿಗೆ ತಂದು ನಿಲ್ಲಿಸಿದೆ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿ ಮರೆತಿದ್ದಾರೆ. ನಮ್ಮ ಕ್ಷೇತ್ರದ ಶಾಸಕರು ಅಸೆಂಬ್ಲಿ ಅಧಿವೇಶನದಲ್ಲಿ ತನ್ನ ಕ್ಷೇತ್ರದ ಬಗ್ಗೆ ಮಾತನಾಡುತ್ತಿಲ್ಲ. ವಾಹನ ಸವಾರರು ರಸ್ತೆ ಹೊಂಡ ಗುಂಡಿಗೆ ಬಿದ್ದು ಸಾಯುತ್ತಿದ್ದರು ಅವರಿಗೆ ಅದರ ಬಗ್ಗೆ ಚಿಂತೆ ಇಲ್ಲ. ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುವ ಬಡ ರಿಕ್ಷಾ, ಟೆಂಪೋ ಚಾಲಕರ ನೋವುಗಳು ಜನಪ್ರತಿನಿಧಿಗಳಿಗೆ ಅರ್ಥವಾಗುತ್ತಿಲ್ಲ. ಮುಂದಿನ 15 ದಿನದೊಳಗೆ ರಸ್ತೆ ದುರಸ್ತಿ ಆಗದಿದ್ದಲ್ಲಿ ಸಾರ್ವಜನಿಕರನ್ನು ಸಂಘಟಿಸಿ ಕೆಐಎಡಿಬಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisements

ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿದಾಗ ಪೊಲೀಸರು ರಸ್ತೆ ನಿರ್ಲಕ್ಷ್ಯ ಮಾಡಿದ ಇಲಾಖೆಗಳ ಅಧಿಕಾರಿಗಳ ಮೇಲೆ ಕೇಸು ದಾಖಲಿಸಬೇಕು ಎಂದು ಆಗ್ರಹಿಸಿದರು.

ಡಿವೈಎಫ್ಐ ಸುರತ್ಕಲ್ ವಲಯ ಕಾರ್ಯದರ್ಶಿ ಶ್ರೀನಾಥ್ ಕುಲಾಲ್ ಮಾತನಾಡಿದರು. ಈ ಸಂದರ್ಭದಲ್ಲಿ ಬೈಕಂಪಾಡಿ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ನವೀನ್ ಬೈಕಂಪಾಡಿ, ಪೂವಪ್ಪ ದೇವಾಡಿಗ, ಮೋನಪ್ಪ, ಲತೀಫ್ ಅಂಗರಗುಂಡಿ, ಶಾಫಿ, ಶಬ್ಬೀರ್, ಮುಸ್ತಫಾ ಎಸ್.ಎಂ ಫಾರೂಕ್ ದೇಶ್ ಪ್ರೇಮಿ, ಟೆಂಪೋ ಚಾಲಕರ ಸಂಘದ ನಾಯಕರಾದ ಫೈವ್ ಸ್ಟಾರ್ ಖಾದರ್, ರಹೀಮ್, ಹೈದರ್, ಅಬ್ದುಲ್ ಕಾದರ್, ಬಸ್ ಮಾಲಕರ ಸಂಘದ ಇಚ್ಛಾಲಿ ಎಸ್. ಎಂ,ಡಿವೈಎಫ್ಐ ಮುಖಂಡರಾದ ಬಿ.ಕೆ ಮಕ್ಸೂದ್, ತೌಸೀಫ್ ಅಂಗರಗುಂಡಿ, ಶಕೀಲ್, ನಿಜಾಮ್, ಮುಸ್ತಫಾ, ನವಾಜ್ ಕುಳಾಯಿ, ಇಕ್ಬಾಲ್ ಜೋಕಟ್ಟೆ, ಸಾದಿಕ್ ಮೂಲ್ಕಿ, ಅನ್ಸಾರ್, ಫರಾನ್,ಸೈಫಲ್, ಸಾಬಿತ್,ಜಿಯಾದ್, ನಿಶಾನ್ ಎಂ.ಕೆ, ನಾಸಿರ್, ರಫೀಕ್ ನೌಫಾನ್, ರಾಝಿಕ್, ಎನ್.ಎಫ್.ಸಿ ಕ್ರಿಕೆಟರ್ಸ್ ಪ್ರಮುಖರಾದ  ಸಲೀಮ್, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

ವಿಜಯಪುರ | ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತಿಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಿರುಗೇಟು

ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಆಗಿಲ್ಲ....

Download Eedina App Android / iOS

X