ದ.ಕ.| ಜೈಲಿನಲ್ಲಿ ಹಣಕ್ಕಾಗಿ ವಿಚಾರಣಾಧೀನ ಕೈದಿ ಮೇಲೆ ಹಲ್ಲೆ

Date:

Advertisements

ಮಂಗಳೂರು ನಗರದ ಕೊಡಿಯಾಲ ಬೈಲಿನ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಇತರೆ ಕೈದಿಗಳು ಬೆದರಿಕೆ ಹಾಕಿ ಫೋನ್ ಪೇ ಮೂಲಕ ರೂ.20 ಸಾವಿರ ವರ್ಗಾಯಿಸಿಕೊಂಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬರ್ಕೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಉಳ್ಳಾಲ ಠಾಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಿಥುನ್ ಎಂಬಾತ ವಿಚಾರಣಾಧೀನ ಕೈದಿಯಾಗಿ ಜೈಲಿಗೆ ಸೇರಿದ್ದಾನೆ. ಹೊರಗಿನ ದ್ವೇಷಕ್ಕೆ ಸಂಬಂಧಿಸಿ ವಿಚಾರಣಾಧೀನ ಕೈದಿಗಳಾದ ಧನುಷ್ ಭಂಡಾರಿ, ಸಚಿನ್ ತಲಪಾಡಿ ಕೊಠಡಿ 5ರಲ್ಲಿ ಬಂಧಿಯಾಗಿರುವ ದಿಲೇಶ್ ಮತ್ತು ಲಾಯಿ ವೇಗಸ್‌ಗೆ ಮಿಥುನ್ ಮೇಲೆ ಹಲ್ಲೆ ಮಾಡುವಂತೆ ಸೂಚನೆ ನೀಡಿರುತ್ತಾರೆ.

ಇದನ್ನೂ ಓದಿ:‌ ಕೇಂದ್ರದಿಂದ ಮಂಗಳೂರಿಗೆ 100 ಎಲೆಕ್ಟ್ರಿಕ್ ಬಸ್‌: ಸಂಸದ ಕ್ಯಾ.ಬ್ರಿಜೇಶ್ ಚೌಟ

Advertisements

ಜು.9ರಂದು ಕಾರಾಗೃಹದ ಸಿಬಂದಿಗಳ ಕಣ್ಣು ತಪ್ಪಿಸಿ ಮಿಥುನ್ ಮೇಲೆ ಹಲ್ಲೆ ನಡೆಸಿ ರೂ. 50 ಸಾವಿರ ನೀಡಬೇಕು ಇಲ್ಲಾಂದ್ರೆ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾರೆ. ಇದರಿಂದ ಭಯಗೊಂಡ ಮಿಥುನ್ ಕಾರಾಗೃಹದ ಬಂದಿಗಳ ಫೋನ್ ಬೂತ್‌ನಿಂದ ಪತ್ನಿಗೆ ಕರೆ ಮಾಡಿ, ಸಚಿನ್ ಕೊಟ್ಟಿರುವ ಎರಡು ಫೋನ್ ಪೇ ನಂಬರ್‌ಗಳಿಗೆ ತಲಾ ರೂ.10 ಸಾವಿರ ಹಾಕುವಂತೆ ತಿಳಿಸಿರುತ್ತಾನೆ.

ಜು. 12ರಂದು ಜೈಲಿಗೆ ಸಹಾಯಕ ಪೊಲೀಸ್ ಆಯುಕ್ತರು ಹಾಗೂ ಬರ್ಕೆ ಠಾಣೆಯ ಅಧಿಕಾರಿಗಳು ತಪಾಸಣೆಗೆಂದು ಭೇಟಿ ನೀಡಿದ ಸಂದರ್ಭದಲ್ಲಿಈ ವಿಚಾರವನ್ನು ಮಿಥುನ್ ಲಿಖಿತವಾಗಿ ತಿಳಿಸಿದ್ದಾನೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X