ದಕ್ಷಿಣ ಕನ್ನಡ | ಖಾಸಗಿ ಬಸ್‌ಗಳಿಂದ 10 ಸಾವು; ವಿದ್ಯಾರ್ಥಿಗಳ ಪ್ರತಿಭಟನೆ

Date:

ಖಾಸಗಿ ಬಸ್‌ಗಳ ವೇಗ, ಬೇಜವ್ದಾರಿ, ಪೈಪೋಟಿ ಸಂಚಾರದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಹಲವರು ಬಲಿಯಾಗುತ್ತಿದ್ದಾರೆ. ಈ ಒಂದು ವರ್ಷದಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ. ಖಾಸಗಿ ಬಸ್‌ಗಳ ಈ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕೆಂದು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ್ದಾರೆ.

ಮೂಡಬಿದರೆ ಬಳಿಯ ಹಂಡೇಲು ಬಳಿ ಇರುವು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸೋಮವಾರ ಸಂಜೆ ಬೈಕ್‌ಗೆ ಖಾಸಗಿ ಬಸ್‌ ಢಿಕ್ಕಿ ಹೊಡೆದು, ವಿದ್ಯಾರ್ಥಿ ಕಾರ್ತಿಕ್‌ ಸಾವನ್ನಪ್ಪಿದ್ದಾರೆ. ಘಟನೆಯಿಂದ ಆಕ್ರೋಶಗೊಂಡಿರುವ ಹಲವಾರು ಕಾಲೇಜುಗಳ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಪೋಲೀಸ್‌ ವೃತ್ತ ನಿರೀಕ್ಷಕ ನಿರಂಜನ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಖಾಸಗಿ ಬಸ್‌ಗಳ ವಿರುದ್ಧ ಕಿಡಿಕಾರಿರುವ ಪ್ರತಿಭಟನಾಕಾರರು, “ಬೇಜವ್ದಾರಿಯಿಂದ ಬಸ್‌ ಚಲಾಯಿಸುವ ಚಾಲಕರು ಮತ್ತು ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೃತ ವಿದ್ಯಾರ್ಥಿ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಆ ಮೂಲೆಯಲ್ಲಿ ಆಗಾಗ ಆಕ್ಸಿಡೆಂಟ್ ಆಗುತ್ತಿರುತ್ತದೆ.. ತುಂಬಾ ಅಪಾಯಕಾರಿ ತಿರುವು ಇದೆ.. ರಸ್ತೆಯನ್ನು ಸ್ವಲ್ಪ ವಿಸ್ತರಿಸಿದಲ್ಲಿ ಅಪಘಾತಗಳು ಕಡಿಮೆಯಾಗುತ್ತದೆ..

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...

ಕರ್ನಾಟಕ ಬಂದ್ | ದಾವಣಗೆರೆ: ತಮಿಳುನಾಡಿ ನೀರು ಹರಿಸದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರ ಮತ್ತು ಕಾವೇರಿ ನಿರ್ವಹಣಾ...

ಹಾವೇರಿ | ಕಾವೇರಿ ನೀರು ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲಿ

ರಾಜ್ಯ ಸರ್ಕಾರ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯ ವಿವಿಧ ಸಂಘಟನೆಗಳ...