ಖಾಸಗಿ ಬಸ್ಗಳ ವೇಗ, ಬೇಜವ್ದಾರಿ, ಪೈಪೋಟಿ ಸಂಚಾರದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಹಲವರು ಬಲಿಯಾಗುತ್ತಿದ್ದಾರೆ. ಈ ಒಂದು ವರ್ಷದಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ. ಖಾಸಗಿ ಬಸ್ಗಳ ಈ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕೆಂದು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ್ದಾರೆ.
ಮೂಡಬಿದರೆ ಬಳಿಯ ಹಂಡೇಲು ಬಳಿ ಇರುವು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸೋಮವಾರ ಸಂಜೆ ಬೈಕ್ಗೆ ಖಾಸಗಿ ಬಸ್ ಢಿಕ್ಕಿ ಹೊಡೆದು, ವಿದ್ಯಾರ್ಥಿ ಕಾರ್ತಿಕ್ ಸಾವನ್ನಪ್ಪಿದ್ದಾರೆ. ಘಟನೆಯಿಂದ ಆಕ್ರೋಶಗೊಂಡಿರುವ ಹಲವಾರು ಕಾಲೇಜುಗಳ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಪೋಲೀಸ್ ವೃತ್ತ ನಿರೀಕ್ಷಕ ನಿರಂಜನ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಖಾಸಗಿ ಬಸ್ಗಳ ವಿರುದ್ಧ ಕಿಡಿಕಾರಿರುವ ಪ್ರತಿಭಟನಾಕಾರರು, “ಬೇಜವ್ದಾರಿಯಿಂದ ಬಸ್ ಚಲಾಯಿಸುವ ಚಾಲಕರು ಮತ್ತು ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೃತ ವಿದ್ಯಾರ್ಥಿ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.
ಆ ಮೂಲೆಯಲ್ಲಿ ಆಗಾಗ ಆಕ್ಸಿಡೆಂಟ್ ಆಗುತ್ತಿರುತ್ತದೆ.. ತುಂಬಾ ಅಪಾಯಕಾರಿ ತಿರುವು ಇದೆ.. ರಸ್ತೆಯನ್ನು ಸ್ವಲ್ಪ ವಿಸ್ತರಿಸಿದಲ್ಲಿ ಅಪಘಾತಗಳು ಕಡಿಮೆಯಾಗುತ್ತದೆ..