ದಕ್ಷಿಣ ಕನ್ನಡ | 47,000 ಮಂದಿ ಹಿರಿಯ ಮತದಾರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ

Date:

Advertisements
  • ಹಿರಿಯ ಮತದಾರರು ಮತದಾನ ಕೇಂದ್ರಗಳಿಗೆ ಹೋಗಬೇಕಾಗಿಲ್ಲ: ಜಿಲ್ಲಾಧಿಕಾರಿ
  • ಹಿರಿಯ ಮತದಾರರು ಮನೆಯಿಂದಲೇ ಮತ ಚಲಾಯಿಸಲು ನಮೂನೆ 12ಡಿ ಅವಕಾಶ

ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿರಿಯ ಮತದಾರರು, ವಿಕಲಚೇತನರು ಸೇರಿದಂತೆ 60,934 ಮಂದಿ ಮತದಾರರಿಗೆ ಮನೆಯಲ್ಲೇ ಕುಳಿತು ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಮತದಾರರಿಗೆ ಮೇ 1ರಿಂದ 5ರವರೆಗೆ ಅವರ ಮನೆ ಬಾಗಿಲಿಗೆ ಫಾರ್ಮ್ 12ಡಿ ನೀಡಲಾಗುವುದು, ಇದರಿಂದ ಅವರು ಮೇ 10ರೊಳಗೆ ಮತ ಚಲಾಯಿಸಲು ಸಾಧ್ಯವಾಗುತ್ತದೆ.

ಅರ್ಹ ಮತದಾರರು ನಮೂನೆ ’12ಡಿ’ಗೆ ಸಹಿ ಹಾಕಬೇಕು. ಅವರ ಮನೆಗಳಿಗೆ ಚುನಾವಣಾಧಿಕಾರಿ ಭೇಟಿ ನೀಡಿ ಮೇ 10ರೊಳಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ಒದಗಿಸುತ್ತಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.

“ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ 46,927 ಮಂದಿ ಮತದಾರರು, 14,007 ಮಂದಿ ಪಿಡಬ್ಲ್ಯೂಡಿ ಮತದಾರರಿದ್ದಾರೆ. ಆ ಮತದಾರರ ಅನುಕೂಲಕ್ಕಾಗಿ ಚುನಾವಣಾ ಆಯೋಗವು ವಿನೂತನ ಯೋಜನೆಯನ್ನು ಪರಿಚಯಿಸಿದೆ. ಚುನಾವಣೆಗೆ ಕನಿಷ್ಠ ಐದು ದಿನಗಳ ಮೊದಲು ನಮೂನೆ 12ಡಿ ಅರ್ಜಿಯನ್ನು ಅವರಿಗೆ ನೀಡಲಾಗುವುದು” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಮಹಾನಗರ ಪಾಲಿಕೆ ಬಜೆಟ್ ಮಂಡನೆ ಮುಂದೂಡಿಕೆ

“ಅರ್ಹ ಮತದಾರರು ತಮ್ಮ ಮನೆಗಳಿಂದಲೇ ಮತದಾನದ ಹಕ್ಕನ್ನು ಚಲಾಯಿಸಲು ನಮೂನೆ 12ಡಿ ಅರ್ಜಿ ಅವಕಾಶ ನೀಡುತ್ತದೆ. ಇದರಿಂದ ಅವರು ಮತದಾನ ಕೇಂದ್ರಗಳಿಗೆ ಹೋಗಬೇಕಾಗಿಲ್ಲ. ಅವರು ನಮೂನೆ 12ಡಿಗೆ ಸಹಿ ಹಾಕಿದ ನಂತರ, ವೀಡಿಯೊಗ್ರಾಫರ್ ಮತ್ತು ಪೊಲೀಸ್ ಸೇರಿದಂತೆ ಅಧಿಕಾರಿಗಳ ತಂಡವು ಅವರ ಮನೆಗಳಿಗೆ ಭೇಟಿ ನೀಡಲಿದೆ” ಎಂದು ತಿಳಿಸಿದರು.

“ಹಿರಿಯ ಮತದಾರರು ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರ್ ಸಮ್ಮುಖದಲ್ಲಿ ಮತ ಚಲಾಯಿಸಬಹುದು. ಇಡೀ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡುವಾಗ, ಮತದಾನದ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

“ಒಟ್ಟು 46,927 ಮತದಾರರಲ್ಲಿ 38,294 ಮಂದಿ 80 ವರ್ಷಕ್ಕಿಂತ ಮೇಲ್ಪಟ್ಟವರು, 8,102 ಮಂದಿ 90 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 531 ಮಂದಿ 100 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧ  ಮತದಾರರಿದ್ದಾರೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X