ದಕ್ಷಿಣ ಕನ್ನಡ | ಆ್ಯಪ್ ಆಧಾರಿತ ಸಮೀಕ್ಷೆ ಕೈಬಿಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

Date:

Advertisements

ಮಕ್ಕಳು ಮತ್ತು ಗರ್ಭಿಣಿಯರ ದತ್ತಾಂಶ ಸಂಗ್ರಹಿಸಲು ನಡೆಸುತ್ತಿರುವ ಮೊಬೈಲ್ ಆ್ಯಪ್ ಆಧಾರಿತ ‘ಹೆಲ್ತ್ ಅಂಡ್ ನ್ಯೂಟ್ರಿಷನ್ ಸರ್ವೇ’ (ಎಚ್ಎನ್ಎಸ್)ಯನ್ನು ಕೈಬಿಡುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಒತ್ತಾಯಿಸಿದೆ.

ಮಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಘದ ಕಾರ್ಯಕರ್ತತೆ ಭೇಟಿ ಮಾಡಿ, ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಶೋಭಾ, “ಪಿಎಚ್‌ಸಿ ಮತ್ತು ಸಿಎಚ್‌ಸಿ ಅಧಿಕಾರಿಗಳ ಸಮನ್ವಯದೊಂದಿಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಒಗ್ಗೂಡಿ ಸಮೀಕ್ಷೆ ನಡೆಸಬೇಕಾಗಿದೆ. ಆದರೆ, ಅಂಗನವಾಡಿ ಕಾರ್ಯಕರ್ತೆಯರು ಸಮೀಕ್ಷೆ ನಡೆಸದ ಕಾರಣ ಆಶಾ ಕಾರ್ಯಕರ್ತೆಯರ ಮೇಲಿನ ಹೊರೆ ಹೆಚ್ಚಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ಆಶಾ ಕಾರ್ಯಕರ್ತೆಯರು ಹೊಸದಾಗಿ ಸೇರ್ಪಡೆಯಾಗಿರುವ ಎಚ್ಎನ್ಎಸ್ ಜೊತೆಗೆ ಕುಷ್ಠರೋಗ, ಲಾರ್ವಾ ಮತ್ತು ರೋಗನಿರೋಧಕತೆಯ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದಾರೆ” ಎಂದು ಅವರು ಹೇಳಿದರು.

“ಒಂದು ಮನೆಯನ್ನು ಕವರ್ ಮಾಡಲು ಕನಿಷ್ಠ 30 ನಿಮಿಷಗಳನ್ನು ತೆಗೆದುಕೊಳ್ಳುವ ಸಮೀಕ್ಷೆಯ ಸಮಯದಲ್ಲಿ ಆಶಾ ಕಾರ್ಯಕರ್ತರು ಗ್ರಾಮೀಣ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಅನೇಕ ಆಶಾ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್‌ಗಳ ಬಳಕೆಯ ಪರಿಚಯವಿಲ್ಲ. ಹಾಗಾಗಿ ಡೇಟಾವನ್ನು ಅಪ್‌ಲೋಡ್ ಮಾಡಲು ಕಷ್ಟಪಡುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಸರ್ಕಾರದ ಶಿಫಾರಸ್ಸಿನಂತೆ ವಿದ್ಯುತ್ ದರ ಹೆಚ್ಚಳವಾಗಿದೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

“ಇಂಟರ್ನೆಟ್ ಡೇಟಾ ಪ್ಯಾಕ್‌ಗಳನ್ನು ಖರೀದಿಸಲು ಆಶಾ ಕಾರ್ಯಕರ್ತೆಯರಿಗೆ ಯಾವುದೇ ಪ್ರತ್ಯೇಕ ಭತ್ಯೆ ನೀಡುವುದಿಲ್ಲ. ಅಲ್ಲದೆ, ರೋಗಿಗಳು ಮತ್ತು ವೈದ್ಯರ ನಡುವೆ ಇ-ಸಂಜೀವಿನಿ ಟೆಲಿ ಸಮಾಲೋಚನೆಗೆ ಅನುಕೂಲವಾಗುವಂತೆ ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕಾರ್ಯವನ್ನೂ ನೀಡಲಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X