ದಕ್ಷಿಣ ಕನ್ನಡ | ತಡೆಬೇಲಿ ಕಳವಿಗೆ ಯತ್ನಿಸಿದ ಆರೋಪಿ ಬಂಧನ

Date:

Advertisements

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಷ್ಟ್ರೀಯ ಹೆದ್ದಾರಿ 37ರ ಬಿಳಿನೆಲೆ ಸೇತುವೆ ಬಳಿ ನಿರ್ಮಿಸಲಾಗಿದ್ದ ಹಳೆಯ ತಡೆಬೇಲಿಯನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದೆ.

ಕಡಬದ ಕೊಡಿಂಬಾಳದ ಕಾಶಿಂ ಎಂಬಾತ ಬಂಧಿತ ಆರೋಪಿ. ಲೋಕೋಪಯೋಗಿ ಇಲಾಖೆಯ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಆರೋಪಿ ರಸ್ತೆಯ ತಡೆಬೇಲಿಯನ್ನೇ ಕಳವು ಮಾಡಲು ಯತ್ನಿಸಿದ್ದ. ಪ್ರಸ್ತುತ ಟೆಂಡರ್ ಪ್ರಕ್ರಿಯೆಯಲ್ಲಿದ್ದ ತಡೆಬೇಲಿಯು ಹಳೆಯದಾಗಿದ್ದು, ಅದನ್ನು ವಾಹನದಲ್ಲಿ ಸಾಗಿಸಲು ಪ್ರಯತ್ನಿಸಿದ್ದ. ಈ ಸಮಯದಲ್ಲಿ ಸ್ಥಳೀಯ ಲೋಕೋಪಯೋಗಿ ಇಲಾಖೆ ಸಿಬ್ಬಂದಿ ಗಣೇಶ್ ಅನಿಲ ಎಂಬುವವರು ಸ್ಥಳಕ್ಕೆ ಧಾವಿಸಿ, ಶಂಕಿತ ಚಾಲಕನನ್ನು ವಿಚಾರಣೆ ನಡೆಸಿದಾಗ, ಆತ ಕಳವು ಮಾಡುವ ವಿಚಾರ ತಿಳಿದುಬಂದಿದೆ. ನಂತರ ಆತನನ್ನು ಕಡಬ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಅಕ್ರಮವಾಗಿ ಮರ ಕಡಿದು ಸಾಗಾಟಕ್ಕೆ ಯತ್ನ; ಮೂವರ ಬಂಧನ

ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ತೀವ್ರತೆಗೆ ಅನುಗುಣವಾಗಿ, ಪೊಲೀಸರು ಸ್ಥಳಕ್ಕೆ ಧಾವಿಸದಿದ್ದಲ್ಲಿ ಅಥವಾ ತನಿಖೆಗೆ ನಿರಾಕರಿಸಿದರೆ, ಇದನ್ನು ಕ್ರಿಮಿನಲ್ ಪ್ರೊಸೀಸರ್ ಕೋಡ್(ಸಿಆರ್​​ಪಿಸಿ) ಸೆಕ್ಷನ್ 157 (ಎ) ಅಥವಾ (ಬಿ) ಅಥವಾ 176 ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (ಬಿಎನ್‌ಎಸ್ಎಸ್) ಅಡಿಯಲ್ಲಿ ದಾಖಲಿಸಬಹುದೆಂದು ಕಾನೂನು ತಜ್ಞರು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X