ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಂಗಳೂರು ನಗರದ ಕಪಿತಾನಿಯೋ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಮಾರ್ಚ್ 27ರ ಬುಧವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು 432 ಮಂದಿ ವಿದ್ಯಾರ್ಥಿಗಳು 19 ಕೊಠಡಿಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಹಲವು ಕೊಠಡಿಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಯವರು, ನಂತರ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕಾರ್ಯನಿರ್ವಹಣೆಯನ್ನು ವೀಕ್ಷಿಸಿದರು.
ಮಕ್ಕಳಿಗೆ ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರು ಸೇರಿದಂತೆ ಇತರೆ ಸೌಲಭ್ಯಗಳ ಬಗ್ಗೆ ಕೇಂದ್ರದ ಮುಖ್ಯಸ್ಥರೊಂದಿಗೆ ಮಾಹಿತಿ ಪಡೆದುಕೊಂಡು, ಯಾವುದೇ ಲೋಪಕ್ಕೆ ಆಸ್ಪದವಾಗದಂತೆ ಕ್ರಮವಹಿಸುವಂತೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಪರೀಕ್ಷೆ ಬರೆಯಲು ಸಹಾಯಕನಿಲ್ಲದೇ ಪರದಾಡಿದ ವಿಶೇಷ ಚೇತನ ಪರೀಕ್ಷಾರ್ಥಿ
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ಪಟಗಾರ್, ಎಸ್ಎಸ್ಎಲ್ಸಿ ಪರೀಕ್ಷೆಯ ನೋಡಲ್ ಅಧಿಕಾರಿ ವೆಂಕಟೇಶ್ ನಾಯಕ್, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಲೀನಾ ಡಿಸೋಜಾ ಇದ್ದರು.