ದಕ್ಷಿಣ ಕನ್ನಡ | ಮೊಬೈಲ್‌ ನೋಡುತ್ತಾ ಬಸ್‌ ಚಾಲನೆ; ಚಾಲಕನ ಪರವಾನಗಿ ರದ್ದತಿಗೆ ಕ್ರಮ

Date:

Advertisements

ಒಂದು ಕೈಯಲ್ಲಿ ಸ್ಟೇರಿಂಗ್‌ ಹಿಡಿದು ಇನ್ನೊಂದು ಕೈಯಲ್ಲಿ ಹಿಡಿದಿದ್ದ ಮೊಬೈಲ್ ನೋಡಿಕೊಂಡೇ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನು ಬಸ್ ಪ್ರಯಾಣಿಕರೊಬ್ಬರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಿಂದ ತಲಪಾಡಿ ನಡುವೆ ಓಡಾಟ ನಡೆಸುವ 42 ರೂಟ್ ಸಂಖ್ಯೆಯ “ಸೈಂಟ್ ಆಂಟನಿ‌” ಸಿಟಿ ಬಸ್ಸಿನ ಚಾಲಕ ನಿರ್ಲಕ್ಷ್ಯದಿಂದ ಬಸ್ಸು ಚಲಾಯಿಸಿರುವ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನದ ವೇಳೆ ಪ್ರಯಾಣಿಕರಿಂದ ತುಂಬಿದ್ದ ಬಸ್ಸು ಮಂಗಳೂರಿನಿಂದ ತಲಪಾಡಿಗೆ ಸಾಗುತ್ತಿದ್ದ ವೇಳೆ ಚಾಲಕ ಮೊಬೈಲ್ ನೋಡಿಕೊಂಡು ಒಂದೇ ಕೈಯಲ್ಲಿ ಸ್ಟೇರಿಂಗ್ ತಿರುಗಿಸಿ ಬಸ್ ಚಲಾಯಿಸಿರುವುದು ಕಂಡುಬಂದಿದೆ.

ಬಸ್ಸಿನ ಎದುರಿನ ಕ್ಯಾಬಿನ್ ಸೀಟಿನಲ್ಲಿ ಕುಳಿತುಕೊಂಡಿದ್ದ ಪ್ರಯಾಣಿಕರೊಬ್ಬರು ಚಾಲಕನ ನಡೆಯಿಂದ ಕುಪಿತಗೊಂಡಿದ್ದು, ಜಪ್ಪಿನಮೊಗರುವಿಗೆ ಬಸ್ ತಲುಪಿದಾಗ ತನ್ನ ಮೊಬೈಲಲ್ಲಿ ಅಜಾಗರೂಕತೆಯ ಚಾಲನೆಯ ವಿಡಿಯೋ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. 

Advertisements

ಚಾಲಕನನ್ನು ನಂಬಿಯೇ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಾರೆ. ಪ್ರಯಾಣಿಕರ ನಂಬಿಕಸ್ಥ ಚಾಲಕನೇ ಈ ರೀತಿ ಯಾರ ಗೊಡವೆ ಇಲ್ಲದೆ ಮೊಬೈಲ್ ನೋಡಿಕೊಂಡು ಬಸ್ ಚಲಾಯಿಸುವಾಗ ಹೆಚ್ಚು ಕಡಿಮೆಯಾದರೆ ಯಾರು ಹೊಣೆ?. ಚಾಲನೆಯಲ್ಲಿ ಮೊಬೈಲ್ ಬಳಸಿದರೆ ಅಂಥವರ ಡ್ರೈವಿಂಗ್ ಲೈಸೆನ್ಸ್ ರದ್ದು ಪಡಿಸುವ ಹಕ್ಕು ಆರ್‌ಟಿಒ ಅಧಿಕಾರಿಗಳಿಗೆ ಇದೆ. ಇಂತಹ ಬೇಜವ್ದಾರಿ ಚಾಲಕರ ಡ್ರೈವಿಂಗ್ ಲೈಸನ್ಸ್ ರದ್ದು ಪಡಿಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

“ತಪ್ಪಿತಸ್ಥ ಬಸ್ ಚಾಲಕನ್ನು ಈಗಾಗಲೇ ಗುರುತಿಸಿದ್ದು, ಅವರ ವಿರುದ್ಧ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಅವರ ಡಿಎಲ್ ರದ್ದುಗೊಳಿಸಲು ಆರ್‌ಟಿಒಗೆ ಕಳುಹಿಸಲಾಗುವುದು” ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಹಿತಿ‌ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X