ದಕ್ಷಿಣ ಕನ್ನಡ | ನೀರಿಗೆ ಹಾಹಾಕಾರ; ಮುಚ್ಚಿದ ಕಾಲೇಜುಗಳು, ಶುರುವಾದ ಆನ್‌ಲೈನ್ ತರಗತಿಗಳು

Date:

Advertisements

ಬೇಸಿಗೆ ಮುಗಿದು, ಮಳೆಗಾಲ ಆರಂಭವಾಗುತ್ತಿದೆ. ಬೇಸಿಗೆಯಲ್ಲಿಯೂ ಹವಾಮಾನ ಬದಲಾವಣೆಯಿಂದ ಕೆಲವೆಡೆ ಭಾರೀ ಮಳೆಯಾಗಿದೆ. ಇದೆಲ್ಲದರ ನಡುವೆಯೂ ಕರಾವಳಿ ಪ್ರದೇಶ ಮಾತ್ರ ನೀರಿಲ್ಲದೆ ಬಳಲುತ್ತಿದೆ. ನೀರಿನ ಸಮಸ್ಯೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಲವು ಕಾಲೇಜುಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುತ್ತಿದೆ.

ಮಂಗಳೂರಿಗೆ ನೀರು ಒದಗಿಸುವ ತುಂಬೆ ಅಣೆಕಟ್ಟು ಬರಿದಾಗುತ್ತಿದೆ. ನಂದಿನಿ ನದಿ ಒಣಗಿದೆ. ಹೀಗಾಗಿ, ನಗರಕ್ಕೆ ಅಗತ್ಯವಿರುವಷ್ಟು ನೀರು ಪೂರೈಕೆ ಮಾಡಲಾಗದೆ ಮಂಗಳೂರು ಮಹಾನಗರ ಪಾಲಿಕೆ ಹೆಣಗಾಡುತ್ತಿದೆ. ಪ್ರತಿ ದಿನ ನಲ್ಲಿಗಳಲ್ಲಿ ನೀರು ಹರಿಸುತ್ತಿದ್ದ ಪಾಲಿಕೆ, ಈಗ ಎರಡು-ಮೂರು ದಿನಗಳಿಗೊಮ್ಮೆ ನೀರು ಪೂರೈಸುತ್ತಿದೆ. ಈ ವಾರದಲ್ಲಿ ನಂದಿನಿ ನದಿಯ ತಟದಲ್ಲಿ ಮಳೆಯಾಗದಿದ್ದರೆ, ನಗರಕ್ಕೆ ನೀರಿನ ಹಾಹಾಕಾರ ಎದುರಾಗುವ ಭೀತಿಯಲ್ಲಿ ನಗರವಾಸಿಗಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕರಾವಳಿ ಭಾಗದಲ್ಲಿ ನೀರಿನ ಅಭಾವ; ಹಲವು ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥನೆ

Advertisements

ಮಂಗಳೂರು ನಗರದಲ್ಲಿರುವ ಹಂಪನಕಟ್ಟೆ ಕಾಲೇಜು, ಕುಂಟಿಕಾನದ ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ನೀರಿಗೆ ಅಭಾವ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ರದ್ದು ಮಾಡಿದ್ದು, ಆನ್‌ಲೈನ್‌ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ.

ಜಿಲ್ಲೆಯ ನೂರಾರು ಶಾಲಾ-ಕಾಲೇಜುಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿಯೂ ನೀರಿಗೆ ಹಾಹಾಕಾರ ಶುರುವಾಗಿದೆ. ಆಸ್ಪತ್ರೆಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X