ದಕ್ಷಿಣ ಕನ್ನಡ | ಎರಡು ದಿನ ಬಿರುಸಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Date:

Advertisements

ಕರ್ನಾಟಕ ಕರಾವಳಿಯ ಹಲವೆಡೆ ಶುಕ್ರವಾರ (ಆಗಸ್ಟ್ 18) ಸಂಜೆಯ ಬಳಿಕ ಗುಡುಗು ಸಹಿತ ಮಳೆಯಾಗಿದ್ದು, ಮತ್ತೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಶುಕ್ರವಾರ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಳೆಯ ಮುನ್ಸೂಚನೆಯನ್ನೂ ನೀಡಿತ್ತು.

ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯಲ್ಲಿ ಅಲ್ಲಲ್ಲಿ ಶನಿವಾರ ಮತ್ತು ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಮುದ್ರದಲ್ಲೂ ಅಲೆಗಳು ಏಳುವ ಸಾಧ್ಯತೆ ಇದ್ದು, ಸೆಕೆಂಡಿಗೆ 0.4 ಮೀಟರ್‌ನಿಂದ 1 ಮೀಟರ್ ವರೆಗೆ ಅಲೆಗಳು ಅಬ್ಬರಿಸಲಿವೆ. ಸಾಮಾನ್ಯವಾಗಿ ಸೆಕೆಂಡಿಗೆ 05-43 ಸೆಂ ಮೀ ಎತ್ತರದೊಂದಿಗೆ ಅಲೆಗಳು ಬರುತ್ತವೆ. ಅಲ್ಲದೆ, ಗುಡುಗು, ಮಿಂಚಿನೊಂದಿಗೆ ಸುಮಾರು 30ರಿಂದ 40 ಕಿ ಮೀ ವೇಗದಲ್ಲಿ (ಗಂಟೆಗೆ) ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಸಿಎಜಿ ವರದಿಯ ಬಗ್ಗೆ ತನಿಖೆ ನಡೆಸುವ ತಾಕತ್ತು ಮೋದಿಗೆ ಇದೆಯಾ?: ಸಿದ್ದರಾಮಯ್ಯ ಸವಾಲು

ಈಗಾಗಲೇ ಎರಡು ವಾರಗಳಿಂದ ಮಳೆ ಕಡಿಮೆಯಾಗಿ ಬಿಸಿಲಿನ ತಾಪಕ್ಕೆ ಜನರು ಕಂಗೆಟ್ಟಿದ್ದರು. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಧಾರಾ ಉಡುಪಿ ಜಿಲ್ಲೆಯ ಸ್ವರ್ಣಾ ನದಿ ಸೇರಿದಂತೆ ಕರಾವಳಿಯಲ್ಲಿ ನದಿಗಳು ತುಂಬಿ ಹರಿಯುವ ಸನ್ನಿವೇಶ ನಿರ್ಮಾಣ ಆಗಿರಲಿಲ್ಲ. ಬದಲಾಗಿ ಸ್ಥಳೀಯವಾಗಿ ಹೇಳಲಾಗುವ ಆಟಿ (ಆಷಾಢ) ತಿಂಗಳ ಕೊನೆಯ ದಿನಗಳಲ್ಲೂ ಧಾರಾಕಾರ ಮಳೆ ಸುರಿದಿರಲಿಲ್ಲ. ಭವಿಷ್ಯದ ಕುರಿತು ಸ್ಥಳೀಯ ರೈತರು ಆತಂಕಕ್ಕೀಡಾಗಿದ್ದರು. ಈ ಮಧ್ಯೆ ಶುಕ್ರವಾರ ಸಂಜೆಯ ಬಳಿಕ ಕೆಲವೆಡೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X