ದಕ್ಷಿಣ ಕನ್ನಡ | ಮೂರು ವಾಹನಗಳಲ್ಲಿ ಅಕ್ರಮ ಗೋವು ಸಾಗಾಟ; ಬಿಜೆಪಿ ಕಾರ್ಯಕರ್ತರು ಸೇರಿ ನಾಲ್ವರ ಬಂಧನ

Date:

Advertisements

ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದು, ಇವರು ಸಕ್ರಿಯ ಬಿಜೆಪಿ ಕಾರ್ಯಕರ್ತರು ಎನ್ನಲಾಗಿದೆ. ಗೋವುಗಳ ಅಕ್ರಮ ಸಾಗಾಟಕ್ಕೆ ಬಳಸಿದ್ದ ಮೂರು ವಾಹನ, 6 ದನ ಮತ್ತು 2 ಹೋರಿ ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಹಿನ್ನೆಲೆ: ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಧರ್ಮಸ್ದಳ ಠಾಣೆಯ ಎಸ್‌ಐ ಅನಿಲ್ ಕುಮಾರ್ ನೇತೃತ್ವದ ತಂಡ ಜುಲೈ 12ರ ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ರಾತ್ರಿ 8-45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

Advertisements

ವಾಹನದಲ್ಲಿ ಆರು ದನಗಳು, ಎರಡು ಹೋರಿಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ತುಂಬಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿರುವುದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಕರ್ತವ್ಯ ಲೋಪ; ಮೂವರು ಪಿಡಿಒಗಳ ಅಮಾನತು

ವಶಕ್ಕೆ ಪಡೆದ ಜಾನುವಾರುಗಳ ಅಂದಾಜು ಮೌಲ್ಯ ₹65,000 ಹಾಗೂ ವಾಹನಗಳ ಅಂದಾಜು ಮೌಲ್ಯ ₹7 ಲಕ್ಷ ಸೇರಿದಂತೆ ಒಟ್ಟು ಸೊತ್ತುಗಳ ಅಂದಾಜು ಮೊತ್ತ ₹7.65 ಲಕ್ಷ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X