ದಕ್ಷಿಣ ಕನ್ನಡ | ಕುಮಾರ ಪರ್ವತ ಚಾರಣಕ್ಕೆ ಅ.3ರಿಂದ ನಿರ್ಬಂಧ

Date:

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರ ಪರ್ವತದಲ್ಲಿ ಚಾರಣ ನಡೆಸಲು ಅಕ್ಟೋಬರ್ 3ರಿಂದ ನಿರ್ಬಂಧ ವಿಧಿಸಲಾಗಿದೆ‌ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮಾಧ್ಯಮದವರೊಂದಿಗೆ ಮಾತನಾಡಿದ ಅಧಿಕಾರಿಗಳು, “ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸ್ತುತದಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಅ.3ರಿಂದ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮಳೆಯ ಪ್ರಮಾಣ ಹೆಚ್ಚಿರುವ ಪರಿಣಾಮ ಕಡಿದಾದ ಬೆಟ್ಟವನ್ನು ಏರಲು ಚಾರಣಿಗರಿಗೆ ಅತಿಯಾದ ಸಂಕಷ್ಟ ಮತ್ತು ಕಷ್ಟವಾಗುತ್ತದೆಂದು ನಿರ್ಧರಿಸಿ ನಿರ್ಬಂಧ ವಿಧಿಸಲಾಗಿದೆ. ಇಲಾಖೆಯ ಈ ಆದೇಶಕ್ಕೆ ಚಾರಣಿಗರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹಕರಿಸಬೇಕು” ಎಂದು ಇಲಾಖೆ ಕೋರಿದೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಹೊಸ ಮದ್ಯದಂಗಡಿ ಪ್ರಸ್ತಾವನೆ ವಿರೋಧಿಸಿ ಮೌನ ಪ್ರತಿಭಟನೆ

“ಬಿರು ಬೇಸಿಗೆ ಮತ್ತು ಅಧಿಕ ಮಳೆಯ ಕಾರಣ ಮೇ ತಿಂಗಳಿನಿಂದ ಸೆಪ್ಟೆಂಬರ್‌ 29ರ ತನಕ ನಿರ್ಬಂಧ ವಿಧಿಸಲಾಗಿತ್ತು. ಶನಿವಾರದಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಮುಕ್ತ ಅವಕಾಶ ನೀಡಲಾಗಿತ್ತು. ಮೊದಲ ದಿನವೇ 750ಕ್ಕೂ ಅಧಿಕ ಚಾರಣಿಗರು ಕುಮಾರ ಪರ್ವತವೇರಲು ಆಗಮಿಸಿದ್ದರು. ಭಾನುವಾರವೂ ಭಾರೀ ಸಂಖ್ಯೆಯ ಚಾರಣಾಸಕ್ತರು ಕುಮಾರಪರ್ವತಕ್ಕೆ ತೆರಳಿದ್ದರು. ಆದರೆ ಈ ದಿನಗಳಲ್ಲಿ ಕುಕ್ಕೆ ಸೇರಿದಂತೆ ಬೆಟ್ಟ ಪ್ರದೇಶದಲ್ಲಿ ಅತ್ಯಧಿಕ ಮಳೆ ಸುರಿದ ಕಾರಣ ಚಾರಣಿಗರಿಗೆ ತೆರಳಲು ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...