ದಕ್ಷಿಣ ಕನ್ನಡ | ಮಂಗಳೂರಿಗೆ ಎರಡು ದಿನ ನೀರಿನ ಪೂರೈಕೆ ಸ್ಥಗಿತ

Date:

Advertisements

ಮಂಗಳೂರಿಗೆ ನೀರು ಒದಗಿಸುವ ಏಕೈಕ ಜಲಮೂಲ ತುಂಬೆ ಅಣೆಕಟ್ಟೆ ಬರಿದಾಗುತ್ತಿರುವ ಕಾರಣ, ಎರಡು ದಿನಗಳ ಕಾಲ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಯೋಜಿಸಿದೆ.

ಹವಾಮಾನ ಇಲಾಖೆಯು ಜೂನ್‌ 4ರಂದು ರಾಜ್ಯಕ್ಕೆ ಮುಂಗಾರು ಮಾರುತಗಳು ಆಗಮಿಸಲಿವೆ ಎಂದು ಹೇಳಿದೆ. ಆದರೂ, ನೀರಿನ ಕೊರತೆಯನ್ನು ನಿಭಾಯಿಸಲು ಮತ್ತು ಕೆಲವೆಡೆ ಅಗತ್ಯ ಪೈಪ್‌ಲೈನ್‌ ಮರುಜೋಡಣೆ ಕಾಮಗಾರಿ ನಡೆಸಲು ಎರಡು ದಿನಗಳ ಕಾಲ ನೀರಿನ ಪೂರೈಕೆಯನ್ನು ನಿಲ್ಲಿಸಲು ನಿರ್ಧರಿಸಿದೆ.

ಈ ಬಗ್ಗೆ ಗುರುವಾರ ಸುತ್ತೋಲೆ ಹೊರಡಿಸಿರುವ ಎಂಸಿಸಿ, “ಜೂನ್ 4ರ ಬೆಳಿಗ್ಗೆ 6 ರಿಂದ ಜೂನ್ 6ರ ಬೆಳಿಗ್ಗೆ 6ರವರೆಗೆ ನಗರದಲ್ಲಿ ನೀರು ಸರಬರಾಜು ಸಂಪೂರ್ಣ ವ್ಯತ್ಯಯವಾಗಲಿದೆ” ಎಂದು ಹೇಳಿದೆ.

Advertisements

ಈ ಎರಡು ದಿನಗಳಲ್ಲಿ, ತುಂಬೆ ಅಣೆಕಟ್ಟೆಯ ಬೆಂದೂರ್‌ವೆಲ್ ಸ್ಟ್ರೆಚ್‌ನಲ್ಲಿ 1,000 ಎಂಎಂ ಪೈಪ್‌ಲೈನ್ ಮತ್ತು ಕೊಟ್ಟಾರ ಚೌಕಿಯಲ್ಲಿ 900 ಎಂಎಂ ಪೈಪ್‌ಲೈನ್ಅನ್ನು ಬದಲಾಯಿಸಿಲು ಎಂಸಿಸಿ ಯೋಜಿಸಿದೆ.

ತುಂಬೆ ಅಣೆಕಟ್ಟಿನ ನೀರಿನ ಮಟ್ಟವು ಗರಿಷ್ಠ ಸಂಗ್ರಹಕ್ಕಿಂತ 2.2 ಮೀಟರ್‌ಗೆ ಇಳಿದಿದೆ. ಅಣೆಕಟ್ಟೆಯ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಪೂರ್ವ ತುಂತುರು ಮಳೆಯಿಂದಾಗಿ ತುಂಬೆ ಬ್ಯಾರೇಜ್‌ನ ಮೇಲ್ಭಾಗದ ನೀರಿನ ಮಟ್ಟ ಹೆಚ್ಚಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X