ದಕ್ಷಿಣ ಕನ್ನಡ | ಪತ್ರಿಕಾ ದಿನಾಚರಣೆ: ಮೋಗ್ಲಿಂಗ್ ಸ್ಮರಣೆ

Date:

Advertisements

ಕನ್ನಡದ ಮೊದಲ ಪತ್ರಿಕೆ ಮಂಗಳೂರ ಸಮಾಚಾರದ ಸಂಪಾದಕರಾಗಿದ್ದ ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರ ಹೆಸರಿನಲ್ಲಿ ಮಂಗಳೂರಿನ ಪ್ರಮುಖ ರಸ್ತೆಗೆ ಅವರ ಹೆಸರು ಹಾಗೂ ಅವರ ಹೆಸರಿನಲ್ಲಿ ವೃತ್ತವೊಂದನ್ನು ನಿರ್ಮಿಸುವಂತೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾನಿ ಆಳ್ವಾರಿಸ್ ಒತ್ತಾಯಿಸಿದರು.

ಸೋಮವಾರ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಹರ್ಮನ್ ಮೋಗ್ಲಿಂಗ್ ಸ್ಮರಣೆಯ ಕಾರ್ಯಕ್ರಮವನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಮ್ಮಿಕೊಂಡಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್, “ಹರ್ಮನ್ ಮೋಗ್ಲಿಂಗ್ ಅವರು ಮಂಗಳೂರ ಸಮಾಚಾರ ಪತ್ರಿಕೆಯನ್ನು ಆರಂಭಿಸುವ ಮೂಲಕ ನೈಜ ಪತ್ರಿಕಾ ಧರ್ಮದ ಅಡಿಪಾಯ ಹಾಕಿದ್ದರು, ಇವತ್ತಿನ ಕಾಲ ಸಂದರ್ಭದಲ್ಲಿ ಪತ್ರಿಕಾ ಧರ್ಮವನ್ನು ಪಾಲಿಸುವ ಬಗ್ಗೆ ಬದ್ಧತೆಯಿಂದ ಮಾಧ್ಯಮ ಸಂಸ್ಥೆಗಳು ಮತ್ತು ಪತ್ರಕರ್ತರು ಕಾರ್ಯನಿರ್ವಹಿಸಬೇಕಾಗಿದೆ” ಎಂದು ಹೇಳಿದರು.

Advertisements

ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ.ಎಚ್.ಎಮ್.ವಾಟ್ಸನ್ ಅವರು ಮಾತನಾಡಿ, “ಕಿಟೆಲ್, ಮೋಗ್ಲಿಂಗ್, ಬ್ರಿಗೆಲ್, ಗುಂಡರ್ಟ್ ಮೊದಲಾದ ಯುಗ ಪ್ರವರ್ತಕರ ನೆನಪಿನಲ್ಲಿ ಬಾಸೆಲ್ ಮಿಷನ್ ಮ್ಯೂಸಿಯಂ ಆರಂಭಿಸುವ ಉದ್ದೇಶ ಇದೆ” ಎಂದು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವ ಅಧ್ಯಕ್ಷ ಹರೀಶ್ ಬಂಟ್ವಾಳ್ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರಧಾನ ಕಾರ್ಯದರ್ಶಿ ಕೆನ್ಯೂಟ್ ಪಿಂಟೋ ಕಾರ್ಯಕ್ರಮ ನಿರ್ವಹಿಸಿದರು, ಕಾರ್ಯದರ್ಶಿ ಗಿರಿಧರ್ ಶೆಟ್ಟಿ ವಂದಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X