ದಕ್ಷಿಣ ಕನ್ನಡ | ಖಾಸಗಿ ಕ್ಲಿನಿಕ್, ಆಸ್ಪತ್ರೆಗಳ ನೋಂದಣಿ ಕಡ್ಡಾಯ; ‘ಅನರ್ಹರು ಲೈಂಗಿಕ ಸಮಸ್ಯೆಗಳಿಗೆ ಪರಿಹಾರ ನೀಡುವಂತಿಲ್ಲ’  

Date:

Advertisements
ವೈದ್ಯಕೀಯ ವ್ಯವಸ್ಥೆಗೆ ಸಂಬಂಧಿಸಿದ ಯಾವುದೇ ಸೇವೆಗಳನ್ನು ನೀಡುವ ವ್ಯಕ್ತಿ ಮತ್ತು ಸಂಸ್ಥೆಗಳು ಆರೋಗ್ಯ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.
“ಡೆಂಟಲ್, ಆಯುಷ್, ಹೋಮಿಯೋಪತಿ, ಫಿಸಿಯೋಥೆರಿಪಿ, ನ್ಯಾಚುರೋಪತಿ ಸೇರಿದಂತೆ ವ್ಯೆದ್ಯಕೀಯ ಸೇವೆ ನೀಡುವ ಪ್ರತಿಯೊಂದು ಕ್ಲಿನಿಕ್, ಆಸ್ಪತ್ರೆ ಮತ್ತು ವ್ಯಕ್ತಿಗಳು, ಪ್ರಯೋಗಾಲಯ, ಪರೀಕ್ಷಾ ಕೇಂದ್ರಗಳು, ಅಲ್ಟ್ರಾಸೌಂಡ್ ಸಂಸ್ಥೆಗಳು ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನೆ ಕಾಯ್ದೆ(ಕೆಪಿಎಂಇಎ) ಅಡಿ ನೋಂದಣಿಗೊಳ್ಳಬೇಕಿದೆ. ನೋಂದಣಿ ಆಗದೆ ಕಾರ್ಯ ನಡೆಸುತ್ತಿರುವ ಕ್ಲಿನಿಕ್, ಆಸ್ಪತ್ರೆ ಸಂಸ್ಥೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಲೈಂಗಿಕ ಸಮಸ್ಯೆ ಪರಿಹಾರ ಕೇಂದ್ರ: ಲೈಂಗಿಕ ಸಮಸ್ಯೆಗಳಿಗೆ ಪರಿಹಾರ ನೀಡುವ ಹೆಸರಿನಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುವ ಕೇಂದ್ರಗಳನ್ನು ಮುಚ್ಚಿಸಲು ಕಾರ್ಯಾಚರಣೆ ನಡೆಸಲಾಗುವುದು. ಲೈಂಗಿಕ ಸಮಸ್ಯೆಗಳ ಚಿಕಿತ್ಸೆ, ಆರೋಗ್ಯ ವ್ಯವಸ್ಥೆಯಡಿ ಬರುತ್ತದೆ. ಲೈಂಗಿಕ ಸಮಸ್ಯೆಗಳನ್ನು ಪರಿಹರಿಸುವ ಅಥವಾ ಚಿಕಿತ್ಸೆ ನೀಡುವ ಕೇಂದ್ರಗಳು ಆರೋಗ್ಯ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿಗೊಳ್ಳಬೇಕಿದ್ದು, ಚಿಕಿತ್ಸೆ ನೀಡುವ ವ್ಯಕ್ತಿಗಳು ಸೂಕ್ತ ಅರ್ಹತೆ ಪಡೆದಿರಬೇಕಿದೆ. ಯಾವುದೇ ಅರ್ಹತೆ ಇಲ್ಲದೆ ಅನಧಿಕೃತ ವ್ಯಕ್ತಿಗಳು ಲೈಂಗಿಕ ಸಮಸ್ಯಗಳಿಗೆ ಪರಿಹಾರ ಅಥವಾ ಚಿಕಿತ್ಸೆ ಕೊಡಲು ಅವಕಾಶವಿಲ್ಲ” ಎಂದು ತಿಳಿಸಿದರು.
ಜನನ ಪೂರ್ವ ಲಿಂಗ ನಿರ್ಣಯ: “ಜಿಲ್ಲೆಯಲ್ಲಿರುವ ಎಲ್ಲ ಸ್ಕ್ಯಾನಿಂಗ್ ಕೇಂದ್ರಗಳು ಕಡ್ಡಾಯವಾಗಿ ಆರೋಗ್ಯ ಇಲಾಖೆಯಿಂದ ಲೈಸನ್ಸ್ ಪಡೆದಿರಬೇಕು. ಸ್ಕ್ಯಾನಿಂಗ್ ಕೇಂದ್ರಗಳು ಹೊಸ ಯಂತ್ರ ಖರೀದಿಸಲು ಮತ್ತು ಹಳೆ ಯಂತ್ರ ಬದಲಾಯಿಸಲು ಇಲಾಖೆಯ ಅನುಮತಿ ಪಡೆಯಬೇಕು” ಎಂದು ಡಾ.ದೀಪಾ ಪ್ರಭು ತಿಳಿಸಿದರು.
“ಜನನ ಪೂರ್ವ ಲಿಂಗಪತ್ತಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ. ಯಾವುದೇ ಸ್ಕ್ಯಾನಿಂಗ್ ಕೇಂದ್ರಗಳು  ಭ್ರೂಣಲಿಂಗ ಪತ್ತೆ ನಡೆಸಿದರೆ ಅಂತಹ ಕೇಂದ್ರಗಳನ್ನು ಮುಚ್ಚಿಸಲು ಕ್ರಮ ಕೈಗೂಳ್ಳಲಾಗುವುದು” ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಲಿಂಗಾನುಪಾತ 1000 ಪುರುಷರಿಗೆ 963 ಮಹಿಳೆಯರು ಇದ್ದಾರೆ. ಭ್ರೂಣಲಿಂಗ ಪತ್ತೆ ತಡೆಯಲು ಜಾಗೃತಿ ಮೂಡಿಸಲು ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಿತ್ತಿಪತ್ರ ರಚಿಸುವ ಸ್ಪರ್ಧೆ ನಡೆಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಜಿಲ್ಲಾ ಸಮಿತಿ ಅಧ್ಯಕ್ಷೆ ಡಾ. ವತ್ಸಲಾ ಕಾಮತ್ ಅಧ್ಯಕ್ಷತೆ ವಹಿಸಿದ್ದರು, ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಸದಸ್ಯರುಗಳಾದ ಡಾ. ಅನಂತರಾಜ ಭಟ್, ಡಾ.ರವಿಚಂದ್ರ, ಡಾ.ಚಿದಾನಂದ, ಡಾ.ಶೆಲ್ಲಿ ಥಾಮಸ್, ಡಾ. ರೀಟಾ ನೊರೋನ್ಹಾ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಗುಲ್ಜಾರ್ ಮತ್ತಿತ್ತರರು ಸಭೆಯಲ್ಲಿ ಇದ್ದರು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X