ದಕ್ಷಿಣ ಕನ್ನಡ | 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಕೃಷಿ ಇಲಾಖೆಯ ಉಪನಿರ್ದೇಶಕಿ

Date:

Advertisements

ಕೃಷಿ ಇಲಾಖೆಯ ಸಸಿ ನೆಡುವ ಕಾರ್ಯಕ್ರಮಕ್ಕೆ 50 ಲಕ್ಷ ರೂ. ಮೌಲ್ಯದ ಗಿಡಗಳನ್ನು ನೆಟ್ಟಿರುವ ಬಿಲ್ ಪಾವತಿ ಮಾಡಲು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆಯ ಉಪನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿ. ನಿವೃತ್ತಿ ಅರಣ್ಯ ಅಧಿಕಾರಿ ಪರಮೇಶ್ವರ್ ಎನ್‌ ಪಿ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತರು ದಾಳಿ ಮಾಡಿದ್ದು, ಲಂಚ ಸ್ವೀಕರಿಸುವಾಗಲೇ ಭಾರತಮ್ಮನನ್ನು ಶನಿವಾರ ಬಂಧಿಸಿದ್ದಾರೆ.

ಸದ್ಯ ಇಲಾಖೆಯಿಂದ ನಿವೃತ್ತರಾಗಿರುವ ಪರಮೇಶ್ವರ್ ಎನ್‌ ಪಿ ಅವರು ಕರ್ತವ್ಯದ ವೇಳೆ 2022-23 ಮತ್ತು 2023-24ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ ‘ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ’ ಯೋಜನೆಯಡಿ ಸಜಿಪ ಮುನ್ನೂರು, ಸಜಿಪ ಮೂಡ, ಸಜಿಪ ಪಡು, ಸಜಿಪ ನಡು, ಕುರ್ನಾಡು, ನರಿಂಗಾನ ಬಾಳೆಪುಣಿ, ಮಂಜನಾಡಿ ಗ್ರಾಮಗಳ ಸಾರ್ವಜನಿಕರರಿಗೆ ಸರ್ಕಾರದ ವತಿಯಿಂದ 50 ಲಕ್ಷ ರೂ. ಮೌಲ್ಯದ ಹಲವು ಜಾತಿಯ ಅರಣ್ಯ ಮತ್ತು ತೋಟಗಾರಿಕಾ ಸಸಿಗಳನ್ನು ಉಚಿತವಾಗಿ ಸರಬರಾಜು ಮತ್ತು ನಾಟಿ ಕಾಮಗಾರಿ ಮಾಡಿಸಿದ್ದರು.

Advertisements

ತೋಟಗಾರಿಕಾ ಸಸಿಗಳನ್ನು ಕಣ್ಣನ್ ನರ್ಸರಿ ಮಾಲಕ ಧೋರಿ, ಶಬರೀಶ್ ನರ್ಸರಿಯ ಭೈರೇಗೌಡ ಮುಂತಾದವರಿಂದ ಈ ಸಸಿಗಳನ್ನು ಪಡೆಯಲಾಗಿತ್ತು. ಅವರಿಗೆ ನೀಡಬೇಕಾದ 18 ಲಕ್ಷ ರೂ. ಮತ್ತು ಅರಣ್ಯ ಗುತ್ತಿಗೆದಾರರಿಂದ ನಾಟಿ ಮಾಡಿಸಿದ್ದ 32 ಲಕ್ಷ ರೂ. ಕೊಡಲು ಬಾಕಿಯಿತ್ತು.

ಈ ನರ್ಸರಿಯ ಮಾಲೀಕರು ಮತ್ತು ಗುತ್ತಿಗೆದಾರರಿಗೆ ಕೊಡಲು ಬಾಕಿಯಿದ್ದ 50 ಲಕ್ಷ ರೂ.ನಗದನ್ನು ನೀಡಲು ಪರಮೇಶ್ವರ್ ಎನ್‌ ಪಿ ಅವರು ಅಕ್ಟೋಬರ್‌ 4 ರಂದು ಕೃಷಿ ಇಲಾಖೆಯ ಉಪನಿರ್ದೇಶಕಿ ಭಾರತಮ್ಮರನ್ನು ಭೇಟಿ ಮಾಡಿ ಹೇಳಿದ್ದರು. ʼಬಿಲ್‌ನ ಮೊತ್ತ ಪಾವತಿಸಬೇಕಾದರೆ ತನಗೆ ಶೇ.15ರಷ್ಟು ಕಮೀಷನ್ ನೀಡಬೇಕು. ಇಲ್ಲದಿದ್ದರೆ ಬಿಲ್ ಪಾವತಿ ಮಾಡುವುದಿಲ್ಲʼ ಎಂದು ಭಾರತಮ್ಮ ಹೇಳಿರುವುದಾಗಿ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೆಚ್ಚಳ; ಎಮ್. ವೆಂಕಟೇಶ್ ಕಳವಳ

ಅಕ್ಟೋಬರ್‌ 20ರಂದು ಉಪನಿರ್ದೇಶಕರ ಕಚೇರಿಗೆ ತೆರಳಿ ಬಿಲ್ ಬಗ್ಗೆ ಮಾತನಾಡಿದಾಗ 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಮುಂದಿಟ್ಟರು ಎನ್ನಲಾಗಿದೆ. ಅದರಂತೆ ಅಕ್ಟೋಬರ್ 21ರಂದು ಕಚೇರಿಯಲ್ಲಿ 1 ಲಕ್ಷ ರೂ.‌ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಹಾಗೆಯೇ ಸಾಕ್ಷಿ ಸಹಿತ ಉಪನಿರ್ದೇಶಕಿಯನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್‌ಪಿ ಸಿ ಎ ಸೈಮನ್, ಡಿವೈಎಸ್‌ಪಿಗಳಾದ ಕಲಾವತಿ ಮತ್ತು ಚಲುವರಾಜು ಬಿ, ಇನ್ಸ್‌ಪೆಕ್ಟರ್ ಸುರೇಶ್ ಕುಮಾರ್ ಪಿ ಇದ್ದರು.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X