ದಕ್ಷಿಣ ಕನ್ನಡ |‌ ಶವವಿಟ್ಟು ಪ್ರತಿಭಟಿಸಿದ ಬಳಿಕ ಸ್ಮಶಾನಕ್ಕೆ ಭೂಮಿ ನೀಡಿದ ತಹಶೀಲ್ದಾರ್

Date:

ನೆರಿಯ ಗ್ರಾಮದಲ್ಲಿ ಸ್ಮಶಾನ ಭೂಮಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ತಹಶೀಲ್ದಾರ್ ಜಾಗ ಗುರುತಿಸಿದ್ದು, ಗ್ರಾಮ ಪಂಚಾಯಿತಿ ಬಳಿಯೇ ಅಂತ್ಯಕ್ರಿಯೆ ನಡೆಸುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿ ಇಲ್ಲದಿರುವ ಬಗ್ಗೆ ಗ್ರಾಮಸ್ಥರು ಜುಲೈ 14ರಂದು ನೆರಿಯ ಗ್ರಾಮದ ಜನತಾ ಕಾಲೋನಿ ನಿವಾಸಿಗಳು ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಂತ್ಯ ಸಂಸ್ಕಾರ ನಡೆಸಲು 25 ವರ್ಷಗಳ ಹಿಂದೆ ಇಟ್ಟಾಡಿ ಎಂಬ ಕುಂಮ್ಕಿ ಸ್ಥಳದಲ್ಲಿ ಕಾಯ್ದಿರಿಸಿದ್ದ 1.12 ಎಕರೆ ಜಾಗ ಬೇರೊಬ್ಬರ ಸ್ವಾಧೀನದಲ್ಲಿದ್ದು, ಅಲ್ಲಿಗೆ ತೆರಳಲು ಸೂಕ್ತ ರಸ್ತೆಯಿಲ್ಲ. ಅವರ ಮನೆಮುಂದೆ ಮೃತದೇಹ ಕೊಂಡೊಯ್ಯಲು ಮನೆಮಂದಿ ಬಿಡುವುದಿಲ್ಲವೆಂದು ಗಲಭೆ ಎಬ್ಬಿಸಿದರ ಪರಿಣಾಮ ಗ್ರಾಮಸ್ಥರು ನೆರಿಯ ಗ್ರಾಮ ಪಂಚಾಯಿತಿ ಎದುರು ಅಂತ್ಯ ಸಂಸ್ಕಾರ ನಡೆಸಲು ಸಿದ್ಧತೆ ನಡೆಸಿದ್ದರು.

ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಟಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಗ್ರಾಮಸ್ಥರು “ಇಂದೇ ಸ್ಶಾನ ಭೂಮಿಗೆ ಜಾಗ ಗುರುತಿಸಿ ಕೊಡಬೇಕು, ಅದೇ ಜಾಗದಲ್ಲಿ ಮೃತದೇಹದ ಅಂತ್ಯಸಂಸ್ಕಾರ ಮಾಡಲಾಗುವುದು” ಎರಂದು ಪಟ್ಟು ಹಿಡಿದಿದ್ದರು.

ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಪಂಚಾಯತ್ ಬಳಿ ಇರುವ ಜಾಗವನ್ನು ಪರಿಶೀಲಿಸಿ ಸ್ಮಶಾನಕ್ಕೆ ಬೇಕಾಗಿರುವ ಸುಮಾರು 20 ಸೆಂಟ್ಸ್ ಸ್ಥಳ ಗುರುತಿಸಿದ ಬಳಿಕ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂಪಡೆದರು.

ಬಳಿಕ ಅದೇ ಜಾಗದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ವ್ಯವಸ್ಥೆ ಮಾಡುವ ಮೂಲಕ ತಾರಕಕ್ಕೇರಿದ್ದ ನೆರಿಯ ಸ್ಮಶಾನ ಭೂಮಿಗಾಗಿ ನಡೆಸಿದ್ದ ಪ್ರತಿಭಟನೆ ಸುಖಾಂತ್ಯಗೊಂಡಿದೆ.

ಘಟನೆ ಹಿನ್ನೆಲೆ

ಅಂತ್ಯ ಸಂಸ್ಕಾರ ಮಾಡಲು ಸ್ಮಶಾನ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಸಮಸ್ಯೆ ಪರಿಹರಿಸುವಂತೆ ಗ್ರಾಮ ಪಂಚಾಯಿತಿ ಎದುರು ಮೃತದೇಹವಿಟ್ಟು ಆಗ್ರಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿತ್ತು.

“ಕಳೆದ ಹಲವು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವಾರು ಗ್ರಾಮ ಸಭೆಗಳಲ್ಲಿ ಬೇಡಿಕೆ ಇಟ್ಟರೂ ಯಾರು ಗ್ರಾಮಸ್ಥರ ಮನವಿಗೆ ಸ್ಪಂದಿಸುತ್ತಿಲ್ಲ” ಎಂದು ನೆರಿಯದಲ್ಲಿ ಪ್ರತಿಭಟನೆ ನಡೆಸಿದ್ದರು.

“ಒಂದು ವೇಳೆ ಸ್ಪಂದನೆ ಸಿಗದಿದ್ದಲ್ಲಿ ಗ್ರಾಮ ಪಂಚಾಯಿತಿ ಎದುರೇ ಅವರ ಅಂತ್ಯ ಸಂಸ್ಕಾರ ಮಾಡುತ್ತೇವೆ” ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು.

ಮೃತದೇಹವಿಟ್ಟು ಪ್ರತಿಭಟನೆಗೆ ಸಿದ್ಧ

ಜನತಾ ಕಾಲೋನಿ ನಿವಾಸಿಯೊಬ್ಬರು ಜುಲೈ 14 ರಂದು ಮೃತಪಟ್ಟಿದ್ದು, ಅವರ ಮೃತದೇಹವನ್ನು ಗ್ರಾಮ ಪಂಚಾಯಿತಿ ಎದುರು ಇಟ್ಟು ಪ್ರತಿಭಟನೆ ಮಾಡಲು ಗ್ರಾಮಸ್ಥರು ಮುಂದಾದರು. ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಧಿಕಾರಿಗಳು ಮೃತರ ಮನೆಗೆ ಬಂದು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೂ ಇಷ್ಟು ವರ್ಷದ ಬೇಡಿಕೆ ಈಡೇರಿಲ್ಲ. ಸ್ಮಶಾನ ಆಗುವ ತನಕ ಪಂಚಾಯಿತಿಗೆ ಬೀಗ ಹಾಕಿ ಎಂದು ಅಧಿಕಾರಿಗಳನ್ನು ತರಾಟೆಗೆ ತಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಆರೋಪ; ಮಹಾನಗರ ಪಾಲಿಕೆ ಬಿಲ್‌ ಕಲೆಕ್ಟರ್‌ ಅಮಾನತು

“ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ, ಜಾಗ ನಿಗದಿ ಪಡಿಸಬೇಕು. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಪಂಚಾಯಿತಿ ಎದುರು ಅಂತ್ಯ ಸಂಸ್ಕಾರ ನೆರವೇರಿಸುತ್ತೇವೆ” ಎಂದು ಗ್ರಾಮಸ್ಥರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಸುರೇಶ್‌ ಟಿ ಸ್ಥಳಕ್ಕೆ ಬಂದಿದ್ದು, ಸ್ಮಶಾನಕ್ಕೆ ಜಾಗ ಗುರುತಿಸಿ ಅಂತ್ಯ ಸಂಸ್ಕಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...