ದಕ್ಷಿಣ ಕನ್ನಡ | ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಕುಡಿಯುವ ನೀರು ವ್ಯವಸ್ಥೆಗೆ ಕೂಡಲೇ ಕ್ರಮವಹಿಸಿ: ಜಿಲ್ಲಾಧಿಕಾರಿ

Date:

ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಸಿದ ಸಫಾಯಿ ಕರ್ಮಚಾರಿ ಅಥವಾ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಮಂಗಳೂರು ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಾದ ಪುರಸಭೆ ಹಾಗೂ ಪಟ್ಟಣ ಪಂಚಾಯತ್‍ಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರಿಗೆ ಸಮವಸ್ತ್ರ ಬದಲಾಯಿಸಲು, ಊಟ ಉಪಹಾರಕ್ಕೆ ಹಾಗೂ ವಿಶ್ರಾಂತಿಗಾಗಿ ಕೊಠಡಿ ನೀಡಬೇಕು. ಮುಖ್ಯವಾಗಿ ಅವರಿಗೆ ಕುಡಿಯುವ ನೀರು ಒದಗಿಸಬೇಕು. ಇದಕ್ಕೆ ಶಾಶ್ವತವಾದ ವ್ಯವಸ್ಥೆಯನ್ನು ಮಾಡಬೇಕು. ಅದಕ್ಕೂ ಮುನ್ನ ತಾತ್ಕಾಲಿಕವಾಗಿ ಈ ವ್ಯವಸ್ಥೆ ಕಲ್ಪಿಸಬೇಕು” ಎಂದು ಸೂಚಿಸಿದರು.

ಪೌರ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲೇ ಕೊಂಡೊಯ್ಯುವಲು ಅನುಕೂಲವಾಗುವಂತ ಉತ್ತಮ ಪೌಚ್ ಮಾದರಿಯ ನೀರಿನ ಬಾಟಲ್‌ಗಳನ್ನು ವ್ಯವಸ್ಥೆ ಮಾಡಿಕೊಡುವಂತೆ ಅವರು ತಿಳಿಸಿದರು.

“ಪೌರಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದ 371 ಹುದ್ದೆಗಳಿಗೆ 336 ಅರ್ಜಿಗಳು ಬಂದಿವೆ. ಇದರಲ್ಲಿ 207 ಜನರ ನೇಮಕವಾಗಿದೆ. ಉಳಿದವು ಅರ್ನಹತೆಯ ಆಧಾರದಲ್ಲಿ ತಿರಸ್ಕೃತಗೊಂಡಿವೆ” ಎಂದು ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಬೀದ್ ಗಡ್ಯಾಳ್ ಮಾಹಿತಿ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಮಾತನಾಡಿ, “ಯಾವ ಕಾರಣಕ್ಕೆ ಅರ್ಜಿಗಳು ತಿರಸ್ಕೃತಗೊಂಡಿವೆ ಎಂಬುದನ್ನು ಪರಿಶೀಲಿಸಿ ವರದಿ ನೀಡಬೇಕು” ಎಂದು ತಿಳಿಸಿದರು.

ದಲಿತರಿಗೆ ಮೀಸಲಿಟ್ಟಿರುವ ಭೂಮಿ ಕೆಲವೆಡೆ ಅತಿಕ್ರಮಣಕ್ಕೆ ಒಳಗಾಗುತ್ತಿದೆ ಎಂದು ದಲಿತ ಮುಖಂಡರು ಸಭೆಯ ಗಮನಕ್ಕೆ ತಂದಾಗ ಪ್ರತಿಕ್ರಿಸಿದ ಜಿಲ್ಲಾಧಿಕಾರಿಯವರು ಈ ಬಗ್ಗೆ ಕ್ರಮವಹಿಸಿ ಅಂತಹ ಭೂಮಿಗೆ ತಡೆಬೇಲಿ ಹಾಕಿ ಫಲಕ ಅಳವಡಿಸುವಂತೆ ನಿರ್ದೇಶನ ನೀಡಿದರು.

“ಪೌರಕಾರ್ಮಿಕರು ನಿವೃತ್ತಿಯಾಗುವ ದಿನದಂದೇ ಅವರನ್ನು ಬೀಳ್ಕೊಡುವ ಸಮಾರಂಭದಲ್ಲಿ ಅವರಿಗೆ ಸಲ್ಲಬೇಕಾದ ನಿವೃತ್ತಿ ಮೊತ್ತದ ಚೆಕ್ ನೀಡಬೇಕು. ನಿವೃತ್ತಿ ವೇತನಕ್ಕಾಗಿ ಅವರು ಕಚೇರಿಗೆ ಅಲೆಯುವಂತಾಗಬಾರದು. ಅದಕ್ಕಾಗಿ ಮೂರು ತಿಂಗಳ ಮುನ್ನವೇ ಅಧಿಕಾರಿಗಳು ನಿವೃತ್ತಿ ದಾಖಲಾತಿಗಳನ್ನು ಸಿದ್ಧಪಡಿಸಿ ಖಜಾನೆಗೆ ಸಲ್ಲಿಸಬೇಕು. ಜಿಲ್ಲೆಯಲ್ಲಿ ಇದು ಶೇ. 100ರಷ್ಟು ಅನುಷ್ಟಾನಗೊಳ್ಳಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸಿಡಿಲಾಘಾತಕ್ಕೆ ಸುಟ್ಟು ಕರಕಲಾದ ದಿನಸಿ ಅಂಗಡಿ

ಜಿಲ್ಲಾ ಎಸ್‌ಪಿ ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶು ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಮತ್ತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯ ವಿಶ್ವನಾಥ್ ಬಂಟ್ವಾಳ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...