ದಕ್ಷಿಣ ಕನ್ನಡ | ಮಹಾನಗರ ಪಾಲಿಕೆಯ ಈಜು ಕೊಳದಲ್ಲಿ ಮುಳುಗಿ ಯುವಕ ಸಾವು

Date:

Advertisements

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಲೇಡಿಹಿಲ್ ಬಳಿ ಇರುವ ಮಂಗಳೂರು ನಗರ ಪಾಲಿಕೆಯ ಈಜು ಕೊಳದಲ್ಲಿ ಈಜುಗಾರಿಕೆ ವೇಳೆ ಹರಿಯಾಣ ಮೂಲದ ಅಭಿಷೇಕ್ ಎಂಬ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ನಗರ ಪಾಲಿಕೆಯ ಈ ಈಜುಕೊಳದಲ್ಲಿ ಮಂಗಳವಾರ ಸಂಜೆ ವೇಳೆ ಸಾರ್ವಜನಿಕರಿಗೆ ಈಜಲು ಅವಕಾಶ ಇರುವ ಟಿಕೆಟ್ ಪಡೆದುಕೊಂಡು ಅಭಿಷೇಕ್ ಆನಂದ್ (30) ಈಜುಕೊಳಕ್ಕೆ ಬಂದಿದ್ದರು. ನೀರಿಗಿಳಿದ ಅಭಿಷೇಕ್ ತುಂಬಾ ಹೊತ್ತಿನ ತನಕ ಮೇಲಕ್ಕೆ ಬಾರದಿರುವುದನ್ನು ಈಜುಗಾರರು ಗಮನಿಸಿ ಜೀವರಕ್ಷಕರಿಗೆ ಮಾಹಿತಿ ನೀಡಿದ್ದರು. ಜೀವ ರಕ್ಷಕರು ನೀರಿಗಿಳಿದು 15 ಅಡಿ ಆಳದಲ್ಲಿ ಕುಸಿದು ಬಿದ್ದಿದ್ದ ಅಭಿಷೇಕ್‌ನನ್ನು ಮೇಲೆತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ ವೆನ್ಲಾಕ್ ಸರ್ಕಾರಿ ಆಸ್ಪತ್ರೆ ಕೊಂಡೊಯ್ದರು. ಆಸ್ಪತ್ರೆಗೆ ತರುವಷ್ಟರಲ್ಲಿಯೇ ಯುವಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಾರಂಜಾ ಸಂತ್ರಸ್ತರ ಹೋರಾಟ : ಪರಿಣಿತರ ಉನ್ನತ ಮಟ್ಟದ ಸಭೆ ನಡೆಸಿ ನಿರ್ಣಯ : ಡಿ.ಕೆ.ಶಿವಕುಮಾರ್

Advertisements

ಮೃತ ಯುವಕ ಹರಿಯಾಣ ರಾಜ್ಯದ ಗುರ್ಗಾಂವ್ ಮೂಲದವನಾಗಿದ್ದಾನೆ. ಯುವಕ ಮಂಗಳೂರಿನಲ್ಲಿ ಏನು ಮಾಡುತ್ತಿದ್ದ, ಯಾರ ಜೊತೆಗೆ ಈಜು ಕೊಳಕ್ಕೆ ಬಂದಿದ್ದ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿಲ್ಲ. ಇದೇ ಮೊದಲ ಬಾರಿಗೆ ಈ ಯುವಕ ಇಲ್ಲಿನ ಈಜುಕೊಳಕ್ಕೆ ಬಂದಿರಬೇಕು. ಈತ ಈ ಮೊದಲು ಇಲ್ಲಿ ಬಂದಿರುವುದನ್ನು ಗಮನಿಸಿಲ್ಲವೆಂದು ಈಜುಕೊಳದ ಸಿಬ್ಬಂದಿಗಳು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X