ಮಂಗಳೂರು | ಪುರಭವನ ವ್ಯಾಪಾರಿಗಳ ತೆರವು: ಬಡವರ ಜೀವನೋಪಾಯ ಕಸಿದ ಪಾಲಿಕೆಯ ವೈಫಲ್ಯ – ಆಪ್ ಆರೋಪ

Date:

ಮಂಗಳೂರಿನ ಪುರಭವನದ ಬಳಿ ಅನಧಿಕೃತ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವ ಕ್ರಮದ ಹಿನ್ನೆಲೆಯಲ್ಲಿ, ನಗರ ಬಡವರ ಜೀವನೋಪಾಯದ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಧೋರಣೆಯನ್ನು ಆಮ್ ಆದ್ಮಿ ಪಾರ್ಟಿ (AAP) ದಕ್ಷಿಣ ಕನ್ನಡ ಘಟಕ ತೀವ್ರವಾಗಿ ಖಂಡಿಸಿದೆ.

- Advertisement -

ಇತ್ತೀಚೆಗೆ ಪುರಭವನದ ಸುತ್ತಮುತ್ತ ಅನಧಿಕೃತ ವ್ಯಾಪಾರಿಗಳಿಂದ ಉಂಟಾಗಿದ್ದ ನೈರ್ಮಲ್ಯ ಸಮಸ್ಯೆ, ಕಾಲುದಾರಿ ಅತಿಕ್ರಮಣ ಹಾಗೂ ಮಹಿಳೆಯರ ಸುರಕ್ಷತೆ ಕುರಿತ ಸಾರ್ವಜನಿಕ ಆಕ್ರೋಶದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪಾರಿಗಳನ್ನು ತೆರವುಗೊಳಿಸಿತ್ತು. ಆದರೆ, ಈ ಕ್ರಮವು ಸಮಸ್ಯೆಯ ಮೂಲ ಕಾರಣವನ್ನು ಪರಿಹರಿಸುವ ಬದಲು ಬಡ ವ್ಯಾಪಾರಿಗಳ ಜೀವನೋಪಾಯವನ್ನೇ ಕಸಿದುಕೊಂಡಂತಾಗಿದೆ ಎಂದು ಪಕ್ಷ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಬೀದಿ ಬದಿ ವ್ಯಾಪಾರಿಗಳು ನಗರ ಆರ್ಥಿಕ ವ್ಯವಸ್ಥೆಯ ಪ್ರಮುಖ ಭಾಗವಾಗಿದ್ದು, ಕೇಂದ್ರ ಸರ್ಕಾರವೂ ವಿವಿಧ ಯೋಜನೆಗಳ ಮೂಲಕ ಅವರನ್ನು ಸಬಲೀಕರಣಗೊಳಿಸಲು ಕ್ರಮ ಕೈಗೊಳ್ಳುತ್ತಿದೆ. ಆದರೂ, ಮಂಗಳೂರು ಮಹಾನಗರ ಪಾಲಿಕೆ ಸೂಕ್ತ ವ್ಯಾಪಾರ ವಲಯಗಳನ್ನು ಗುರುತಿಸುವಲ್ಲಿ ವಿಫಲವಾಗಿರುವುದರಿಂದ ಸಾವಿರಾರು ಸಣ್ಣ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಪ್ ತಿಳಿಸಿದೆ.

ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರ ನಿಯಂತ್ರಣ) ಕಾಯ್ದೆಯಡಿ ವ್ಯಾಪಾರ ವಲಯಗಳ ಗುರುತು, ಬಯೋಮೆಟ್ರಿಕ್ ಪರವಾನಗಿ ವಿತರಣೆ ಹಾಗೂ ಕಾನೂನುಬದ್ಧ ರಕ್ಷಣೆಗೆ ಸ್ಪಷ್ಟ ಮಾರ್ಗಸೂಚಿಗಳಿದ್ದರೂ, ಅಧಿಕಾರಿಗಳ ಆಡಳಿತಾತ್ಮಕ ನಿರ್ಲಕ್ಷ್ಯ ಮತ್ತು ವಿಳಂಬ ನೀತಿಯಿಂದ ಈ ಪ್ರಕ್ರಿಯೆಗಳು ನೆನೆಗುದಿಗೆ ಬಿದ್ದಿವೆ ಎಂದು ಪಕ್ಷ ದೂರಿದೆ.

ಹಾಗೆಯೇ, ಬೀದಿ ಬದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹಣಕಾಸು ನೆರವು ಹಾಗೂ ಕಲ್ಯಾಣ ಯೋಜನೆಗಳು ಸ್ಥಳೀಯ ಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂಬ ಆರೋಪವೂ ವ್ಯಕ್ತವಾಗಿದೆ.

ಆದ್ದರಿಂದ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತವು ತಕ್ಷಣವೇ ಪ್ರತ್ಯೇಕ ಬೀದಿ ಬದಿ ವ್ಯಾಪಾರ ವಲಯಗಳನ್ನು ಗುರುತಿಸಿ, ಪರವಾನಗಿ ವಿತರಣಾ ಪ್ರಕ್ರಿಯೆಯನ್ನು ಸರಳಗೊಳಿಸಿ, ಅರ್ಹ ವ್ಯಾಪಾರಿಗಳಿಗೆ ಯಾವುದೇ ವಿಳಂಬವಿಲ್ಲದೆ ಲೈಸೆನ್ಸ್ ನೀಡುವ ಮೂಲಕ ಅವರ ಜೀವನೋಪಾಯವನ್ನು ರಕ್ಷಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಘಟಕ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...