ದಕ್ಷಿಣ ಕನ್ನಡ | ‘ಡ್ರಗ್ಸ್ ವಿರೋಧಿ ಜಾಗೃತಿ ಮಾಸ’ ಅಭಿಯಾನಕ್ಕೆ ಚಾಲನೆ

Date:

ಮಾದಕ ದ್ರವ್ಯ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಬೇಕಾಗಿದೆ. ಈ ಹಾವಳಿಯ ಪ್ರಸ್ತುತ ಬಿಕ್ಕಟ್ಟಿನ ಬಗ್ಗೆ ಸಂವೇದನಾಶೀಲರಾಗಿದ್ದರೆ, ನಾವು ಅಪರಾಧಿಗಳಾಗುತ್ತೇವೆ. ಸರ್ಕಾರ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸೇರಿಕೊಂಡು, ಒಂದೇ ಉದ್ದೇಶಕ್ಕಾಗಿ ಕೆಲಸ ಮಾಡಿದಾಗ, ಈ ಹೋರಾಟವನ್ನು ಎದುರಿಸುವುದು ಸುಲಭವಾಗುತ್ತದೆ’ ಎಂದು ಮಂಗಳೂರಿನ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ಹೇಳಿದರು.

- Advertisement -

ಡ್ರಗ್ಸ್‌ಮುಕ್ತ ಧರ್ಮಕ್ಷೇತ್ರವಾಗಿಸುವ ಗುರಿಯೊಂದಿಗೆ ಧರ್ಮಕ್ಷೇತ್ರದ ಪಾಲನಾ ಪರಿಷತ್ ನೇತೃತ್ವದಲ್ಲಿ ನಡೆಯಲಿರುವ ಡ್ರಗ್ಸ್ ವಿರೋಧಿ ಜಾಗೃತಿ ಮಾಸ ಅಭಿಯಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಡ್ರಗ್ಸ್ ಸಂಗ್ರಹದಿಂದ ತುಂಬಿದ ಗಾಜಿನ ಭರಣಿಯನ್ನು ಇನ್ಸಿನರೇಟರ್ ಫೈರ್ ಬಿನ್‌ಗೆ ಖಾಲಿ ಮಾಡಿ ಭರಣಿಯೊಳಗೆ ಮುಳುಗಿರುವ ಮಗುವಿನ ಗೊಂಬೆಯನ್ನು ಮುಕ್ತಗೊಳಿಸುವುದರ ಮೂಲಕ ಸಾಂಕೇತಿಕವಾಗಿ ಅಭಿಯಾನವನ್ನು ಬಿಷಪ್ ಉದ್ಘಾಟಿಸಿದರು.

“ಮಾದಕ ವ್ಯಸನಗಳಿಂದ ಕುಟುಂಬಗಳು, ಯುವಕರು ಮತ್ತು ಮಕ್ಕಳು ಬಳಲುತ್ತಿದ್ದಾರೆ. ಈ ಸಾಮಾಜಿಕ ಸಮಸ್ಯೆಗೆ ಒಮ್ಮನಸ್ಸಿನಿಂದ ಸ್ಪಂದಿಸಬೇಕಿದೆ. ಜಾತಿ, ಧರ್ಮ, ಭಾಷೆಯ ಗಡಿಗಳನ್ನು ಮೀರಿ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಒಟ್ಟಾಗಿ ಕೆಲಸ ಮಾಡೋಣ” ಎಂದು ಬಿಷಪ್ ಕರೆ ನೀಡಿದರು.

“ಡ್ರಗ್ಸ್ ತ್ಯಜಿಸಿ, ಜೀವನ ಆಲಿಂಗಿಸಿ’ ಎಂಬ ಘೋಷವಾಕ್ಯವನ್ನು ಹೊಂದಿರುವ ಅಭಿಯಾನವು, ಧರ್ಮಕ್ಷೇತ್ರದ ಚರ್ಚ್‌ಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೆಪ್ಟೆಂಬರ್ 1ರಿಂದ 30ರವರೆಗೆ ನಡೆಯಲಿದೆ” ಎಂದು ಸಂಚಾಲಕ ಲುವಿ ಜೆ ಪಿಂಟೊ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹೂವಿನಹಡಗಲಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ರೈತ ಸಂಘ ಒತ್ತಾಯ

ಗುರು ಮ್ಯಾಕ್ಸಿಮ್ ನೊರೊನ್ಹಾ, ಪಾಲನಾ ಪರಿಷತ್ ಕಾರ್ಯದರ್ಶಿ ಜಾನ್ ಡಿಸಿಲ್ವ, ಸಂಪರ್ಕಾಧಿಕಾರಿ ರಾಯ್ ಕ್ಯಾಸ್ಟೆಲಿನೊ, ತೆಲೊಕಾ ಅಡಿಕ್ಷನ್ ರಿಕವರಿ ಸೆಂಟರ್‌ನ ಮ್ಯಾನೇಜಿಂಗ್ ಟ್ರಸ್ಟಿ ಕ್ಲಾರಾ ಡಿಕುನ್ಹಾ, ಕುಟುಂಬ ಆಯೋಗದ ಕಾರ್ಯದರ್ಶಿ ಅನಿಲ್ ಆಲ್ಫ್ರೆಡ್ ಡಿಸೋಜ, ಶಿಕ್ಷಣ ಆಯೋಗದ ಕಾರ್ಯದರ್ಶಿ ಆಂಟೋನಿ ಶೇರಾ, ಆರೋಗ್ಯ ಆಯೋಗದ ಕಾರ್ಯದರ್ಶಿ ಅಜಿತ್ ಮಿನೇಜಸ್, ಯುವ ಆಯೋಗದ ಕಾರ್ಯದರ್ಶಿಅಶ್ವಿನ್ ಕಾರ್ಡೋಜಾ, ಸಂಪರ್ಕ ಆಯೋಗದ ಕಾರ್ಯದರ್ಶಿ ಅನಿಲ್ ಐವನ್ ಫರ್ನಾಂಡೀಸ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ರಾಯರೆಡ್ಡಿ ದೇವಭಕ್ತರು, ಪ್ರಾಮಾಣಿಕರು; ಅವರ ಹೇಳಿಕೆಯಲ್ಲಿ ರಾಜಕೀಯ ಹುಡುಕಬೇಡಿ : ಯು.ಟಿ. ಖಾದರ್

ಬಸವರಾಜ ರಾಯರೆಡ್ಡಿ ಅವರು ಅಪಾರ ಜ್ಞಾನಭರಿತ ಹಾಗೂ ಪ್ರಾಮಾಣಿಕ ಶಾಸಕರಾಗಿದ್ದು, ಅವರ...

ಮಂಗಳೂರು | ಸಾರ್ವಜನಿಕರ ಆರೋಗ್ಯಕ್ಕೆ ಆದ್ಯತೆ; ಆಹಾರ ಗುಣಮಟ್ಟ ದೂರುಗಳಿಗೆ ಕ್ಯೂಆರ್ ಕೋಡ್

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೊಟೇಲ್, ರೆಸ್ಟೋರೆಂಟ್, ಆಹಾರ ಮಳಿಗೆಗಳ ಜತೆಗೆ ಪಿಜಿಗಳಲ್ಲೂ...

ಮಂಗಳೂರು | SIRನಲ್ಲಿ BLO ಎಡವಟ್ಟು ; ಹೆಸರು ಮರುಸೇರ್ಪಡೆಗೆ ಕ್ರಮ

ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಜೀವಂತ...

ಮಂಗಳೂರು | ಜೀವಂತ ವ್ಯಕ್ತಿಯನ್ನೇ ಎಸ್‌ಐಆರ್‌ ಕರಡು ಪಟ್ಟಿಯಲ್ಲಿ ‘ಮರಣ’ ಎಂದು ನಮೂದು !

ಬದುಕಿರುವ ವ್ಯಕ್ತಿಯನ್ನು ಎಸ್‌ಐಆರ್‌ ಕರಡು ಪಟ್ಟಿಯಲ್ಲಿ ‘ಮರಣ’ ಎಂದು ನಮೂದಿಸಿರುವ ಘಟನೆ...