ದಕ್ಷಿಣ ಕನ್ನಡ | ‘ಸಂಸದರ ಈಜು ಕೊಳ’ ಸಮಸ್ಯೆಗೆ ಕೊನೆಗೂ ಪರಿಹಾರ

Date:

Advertisements

ಮಂಗಳೂರು – ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯ ತುಂಬೆಯಲ್ಲಿ ಮಳೆ ನೀರು ನಿಂತು ವಾಹನಗಳ ಸಂಚಾರಕ್ಕೆ ತೊಡಕುಂಟಾಗುತ್ತಿದ್ದ ಒಂದೂವರೆ ದಶಕದ ಸಮಸ್ಯೆಗೆ ಕೊನೆಗೂ ಪರಿಹಾರ ದೊರಕುವಂತಾಗಿದ್ದು, ಮಳೆ ನೀರು ಹರಿದು ಹೋಗಲು ಮೋರಿ ಅಳವಡಿಸುವ ಕಾಮಗಾರಿ ಆರಂಭಗೊಂಡಿದೆ.

ಮಂಗಳೂರು – ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯ ತುಂಬೆ ಗ್ರಾಮದ ಬಿ.ಎ. ಕಾಲೇಜಿನ ಬಳಿಯ ತಿರುವಿನಲ್ಲಿ ಮಳೆ ನೀರು ನಿಂತು ರಸ್ತೆ ಕೊಳದಂತೆ ಆಗುತ್ತಿತ್ತು. ಇದರಿಂದ ವಾಹನಗಳ ಸಂಚಾರಕ್ಕೆ ಭಾರೀ ಸಮಸ್ಯೆ ಉಂಟಾಗುತ್ತಿತ್ತು. ಅಲ್ಲದೆ ಇಲ್ಲಿನ ರಸ್ತೆ ಅಪಾಯಕಾರಿ ತಿರುವು ಆಗಿರುವುದರಿಂದ ವೇಗವಾಗಿ ಬರುವ ವಾಹನಗಳ ಚಾಲಕರು ನೀರು ಕಂಡು ಏಕಾಏಕಿ ಬ್ರೇಕ್ ಹಾಕುವುದರಿಂದ ಸಣ್ಣ ಪುಟ್ಟ ಅಪಘಾತಗಳು ಪದೇ ಪದೇ ಸಂಭವಿಸುತ್ತಿದ್ದವು.

ಇತ್ತೀಚೆಗೆ ತುಂಬೆಯಲ್ಲಿ ನಡೆದ ‘ತುಂಬೆ ಫೆಸ್ಟ್’ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲೂ ಈ ಸಮಸ್ಯೆಯ ಬಗ್ಗೆ ತುಂಬೆ ಗ್ರಾಮದ ಜನರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ದ್ವಿಪಥ ರಸ್ತೆಯಾಗಿದ್ದ ರಾಷ್ಟ್ರೀಯ ಹೆದ್ದಾರಿಯನ್ನು ಸುಮಾರು ಒಂದೂವರೆ ದಶಕಕ್ಕೂ ಹಿಂದೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಗೊಂಡ ಬಳಿಕ ಈ ಸಮಸ್ಯೆ ತಲೆದೋರಿತ್ತು. ಈ ಸಮಸ್ಯೆಯನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ, ಜನ ಪ್ರತಿನಿಧಿಗಳಿಗೆ ಮನವಿಗಳ ಮೇಲೆ ಮನವಿಗಳನ್ನು ನೀಡಿದರೂ ಯಾವುದೇ ಸ್ಪಂದನೆ ದೊರೆಯುತ್ತಿರಲಿಲ್ಲ ಎಂದು ತುಂಬೆಯ ಜನರು ಆಕ್ರೋಶ ವ್ಯಕ್ತಡಿಸಿದ್ದರು.

Advertisements

ಮಳೆ ಪೂರ್ತಿ ಇಡೀ ರಸ್ತೆಯಲ್ಲಿ ಕೊಳದಂತೆ ನೀರು ತುಂಬಿ ವಾಹನಗಳ ಸಂಚಾರಕ್ಕೆ ತೊಡಕುಂಟಾಗುತ್ತಿತ್ತು. ಮನವಿ ನೀಡಿದರೂ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಸ್ಪಂದನೆ ದೊರೆಯದ ಕಾರಣ ಆಕ್ರೋಶಿತ ಗ್ರಾಮಸ್ಥರು ಇಲ್ಲಿ “ಜಿಲ್ಲೆಯ ನಂ.1 ಸಂಸದರ ಈಜು ಕೊಳ ಇದೆ, ನಿಧಾನವಾಗಿ ಚಲಿಸಿ” ಎಂದು ಫ್ಲೆಕ್ಸ್ ಅಳವಡಿಸಿದ್ದರು. ಆ ಬಳಿಕ ಇಲ್ಲಿ ನೀರು ತುಂಬಿದಾಗ ‘ಸಂಸದರ ಈಜು ಕೊಳ’ ಎಂದೇ ಜನರು ಕರೆಯುತ್ತಿದ್ದರು.

ಇದೀಗ ಇಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದ್ದು, ಅದರ ಸಲುವಾಗಿ ರಸ್ತೆಯನ್ನು ಅಗೆದು ಮೋರಿ ಅಳವಡಿಸುವ ಕಾಮಗಾರಿ ಸೋಮವಾರದಿಂದ ಆರಂಭಗೊಂಡಿದೆ. ಸುಮಾರು ಒಂದು ವಾರದ ಒಂದು ವಾರದ ಕಾಮಗಾರಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ  85044  ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ...

ದ.ಕ. | ಲಾರ್ವಾ ತಾಣಗಳು ಕಂಡುಬಂದರೆ ದಂಡ: ಮನಪಾ ಆಯುಕ್ತರ ಸೂಚನೆ

ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ...

ಮಂಗಳೂರು | ಪಿಎಂ ಸ್ವನಿಧಿ ಸಾಲ ಯೋಜನೆ ಮುಂದುವರಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ...

ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಹಿನ್ನೆಲೆಯಲ್ಲಿ...

Download Eedina App Android / iOS

X