ದಕ್ಷಿಣ ಕನ್ನಡ | ಮದರ್ ತೆರೆಸಾ ಸಂಸ್ಮರಣಾ ದಿನ: ಸೆ.21ರಂದು ವಿಚಾರ ಸಂಕಿರಣ

Date:

Advertisements

‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆ ಪ್ರತಿರೂಪ ಮದರ್ ತೆರೇಸಾ ಸೇವೆ ಸಲ್ಲಿಸಿದ್ದರು. ಅವರ 26ನೇ ಸಂಸ್ಮರಣಾ ದಿನಾಚರಣೆ ಅಂಗವಾಗಿ ಸಪ್ಟೆಂಬರ್ 21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಮದರ್ ತೆರೆಸಾ ವಿಚಾರ ವೇದಿಕೆ ಅಧ್ಯಕ್ಷ ರೊನಾಲ್ಡೊ ಕೆಸ್ಟಲಿನೋ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಮದರ್ ತೆರೇಸಾ ನೆನಪಿನಲ್ಲಿ ‘ವೈವಿಧ್ಯ ಭಾರತದಲ್ಲಿ ಪ್ರೀತಿಯ ಸೆಲೆಗಳು’ ಎಂಬ ವಿಷಯ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ದಿನೇಶ್ ಅಮಿತ್ ಮಟ್ಟು ಉದ್ಘಾಟಿಸಲಿದ್ದಾರೆ” ಎಂದು ಹೇಳಿದ್ದಾರೆ.

“ವಿಚಾರ ಸಂಕಿರಣದಲ್ಲಿ ಸಾಹಿತಿ, ಬರಹಗಾರ ಡಾ.ಕೆ.ಅಶ್ರಫ್ ವಿಚಾರ ಮಂಡನೆ ಮಾಡಲಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಅಶ್ರಫ್ ಕೆ ಅವರು ಪ್ರತಿಕ್ರಿಯೆ ನೀಡಲಿದ್ದಾರೆ” ಎಂದು ತಿಳಿಸಿದ್ದಾರೆ.

Advertisements

“ಪ್ರೀತಿ ಹಾಗೂ ಸೇವೆಯ ಮೂಲಕ ಜಗತ್ತಿನಾದ್ಯಂತ ಕೋಟ್ಯಾಂತರ ಹೃದಯಗಳನ್ನು ಗೆದ್ದ ಜಗತ್ತಿನ ಮಹಾತಾಯಿ ಮದರ್ ತೆರೇಸಾ ಅವರ ಚಿಂತನೆ ಹಾಗೂ ಆದರ್ಶಗಳನ್ನು ಇಂದಿನ ಯುವ ಪೀಳಿಗೆಯ ಮಧ್ಯೆ ಕೊಂಡೊಯ್ಯುವ ಉದ್ದೇಶವಿದೆ. ಅದಕ್ಕಾಗಿ, 2017ರಿಂದ ‘ಸಂತ ಮದರ್ ತೆರೇಸಾ ವಿಚಾರ ವೇದಿಕೆ’ಯು ವಿಚಾರ ಸಂಕಿರಣ, ಸಂವಾದ, ಸೌಹಾರ್ದ ಹಬ್ಬಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳ ಮೂಲಕ ಸರ್ವಧರ್ಮದ ಜನತೆಯ ಪ್ರೀತಿ ವಿಶ್ವಾಸಗಳನ್ನು ಹೊರಹೊಮ್ಮಿದೆ” ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಸುನಿಲ್ ಕುಮಾರ್ ಬಜಲ್, ಡೋಲ್ಫಿ ಡಿ’ಸೋಜಾ, ಅಲ್ವಿನ್ ಡಿಸೋಜ, ಅಬ್ದುಲ್ ಮುನೀರ್, ಸ್ಟಾನಿ ಡಿ ಕುನ್ನಾ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

ಉಜಿರೆ ಖಾಸಗಿ ಆಸ್ಪತ್ರೆ ಮುಂಭಾಗ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್...

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಯಾವ ವಾರ್ಡಿನಲ್ಲಿ ಯಾರಿಗೆ ಎಷ್ಟು ಮತ? ಇಲ್ಲಿದೆ ಸಂಪೂರ್ಣ ವಿವರ

ಕಡಬ ಪಟ್ಟಣ ಪಂಚಾಯತ್‌ನ 13 ವಾರ್ಡ್‌ಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು...

ಪುತ್ತೂರು | ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆ ಮಗು, ಆರೋಪಿಯ ಡಿಎನ್ಎ ಪರೀಕ್ಷೆ

ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ...

ದ.ಕ | ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗೆ ಹಿನ್ನಡೆ; ‘ಕೈ’ ಪಾಳಯಕ್ಕೆ ದಕ್ಕಿದ ಅಧಿಕಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯತ್...

Download Eedina App Android / iOS

X