ದಕ್ಷಿಣ ಕನ್ನಡ | ವಿದ್ಯುತ್‌ ಖಾಸಗೀಕರಣ – ಆದಾನಿ ಜೇಬು ತುಂಬಿಸುವ ಹುನ್ನಾರ: ಸಿಐಟಿಯು

Date:

ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ಅಪಾಯದ ಮುನ್ಸೂಚನೆಯಾಗಿದೆ. ಇದು ಅದಾನಿ ಮತ್ತು ಟಾಟಾ ಕಂಪನಿಯ ಜೇಜು ತುಂಬಿಸುವ ವ್ಯವಸ್ಥೆಯಾಗಿದೆ ಎಂದು ಸಿಐಟಿಯು ಮುಖಂಡ ಸುನಿಲ್‌ಕುಮಾರ್ ಬಜಾಲ್ ಆರೋಪಿಸಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಂಘಟನೆಗಳ ಜಂಟಿ ವೇದಿಕೆ (ಜೆಸಿಟಿಯು), ವಿವಿಧ ರೈತ ಸಂಘಟನೆಗಳ ಒಕ್ಕೂಟ (ಎಸ್‌ಕೆಎಂ) ಹಾಗೂ ವಿದ್ಯಾರ್ಥಿ, ಯುವಜನ, ಮಹಿಳಾ, ದಲಿತ, ಆದಿವಾಸಿ ಹಾಗೂ ಜನಪರ ಸಂಘಟನೆಗಳ ವೇದಿಕೆಯಿಂದ ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ಬಿಜೈಯ ಮೆಸ್ಕಾಂ ಪ್ರಧಾನ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

“ಕಳೆದ ಒಂಭತ್ತು ವರ್ಷಗಳಿಂದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿರುವ ಕೇಂದ್ರ ಸರ್ಕಾರ 2023ರ ವಿದ್ಯುತ್ ಕಾಯ್ದೆಯ ಮೂಲಕ ಸರ್ಕಾರದ ಹಿಡಿತವನ್ನು ಸಡಿಲಗೊಳಿಸಿದೆ. ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಂಡರೆ ಬಳಕೆದಾರರ ಮೇಲೆ ದಬ್ಬಾಳಿಕೆ, ಮಾನಸಿಕ ಹಿಂಸೆ ಉಂಟಾಗುತ್ತದೆ” ಎಂದು ಸುನಿಲ್ ಕುಮಾರ್ ಬಜಾಲ್ ತಿಳಿಸಿದರು.

“2025ರ ಏಪ್ರಿಲ್‌ನಿಂದ ಎಲ್ಲ ಬಳಕೆದಾರರು ಪ್ರೀಪೇಯ್ಡ್‌ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸಬೇಕಾಗುತ್ತದೆ. ಪ್ರತಿ ಮೀಟರ್‌ಗೆ ₹8,000ದಂತೆ ದೇಶದ 26 ಕೋಟಿ ವಿದ್ಯುತ್ ಗ್ರಾಹಕರ ಮೂಲಕ ₹2,08,0000 ಕೋಟಿ ಹಣವನ್ನು ಮೀಟರ್ ಅಳವಡಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಖಾಸಾ ದೋಸ್ತಿಗಳಾದ ಅದಾನಿ ಮತ್ತು ಟಾಟಾ ಕಂಪನಿಯ ಜೇಬು ತುಂಬಿಸುವ ಹುನ್ನಾರ ಇದಾಗಿದೆ. ಇದರಿಂದ ವಿದ್ಯುತ್ ದರ ಏರಿಕೆಯಾಗಲಿದೆ” ಎಂದು ಹೇಳಿದರು.

“ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸದಂತೆ ವಿಶ್ವಸಂಸ್ಥೆ ಈಗಾಗಲೇ ಎಚ್ಚರಿಕೆ ನೀಡಿದ್ದರೂ ಅದನ್ನು ಮೀರಿ ಭಾರತದಲ್ಲಿ ಈ ವ್ಯವಸ್ಥೆಗೆ ಮುಂದಾಗುತ್ತಿರುವುದು ಅಪಾಯದ ಮುನ್ಸೂಚನೆಯಾಗಿದೆ. ಈ ಬಗ್ಗೆ ಧ್ವನಿ ಎತ್ತುವುದು ಅಗತ್ಯವಾಗಿದೆ” ಎಂದರು.

ಎಐಟಿಯುಸಿಯ ಎಚ್‌ ಪಿ ರಾವ್ ಮಾತನಾಡಿ, “ಸರ್ಕಾರಿ ಸಂಸ್ಥೆಗಳ ಖಾಸಗೀಕರಣವನ್ನು ನಾವು ವಿರೋಧಿಸುತ್ತಾ ಬಂದಿದ್ದರೂ ಕೇಂದ್ರ ಸರ್ಕಾರ ಮಾತ್ರ ಈ ಬಗ್ಗೆ ಕ್ಯಾರೇೆ ಎನ್ನುತ್ತಿಲ್ಲ. ಜನರನ್ನು ಖಾಸಗಿಯವರ ಗುಲಾಮರನ್ನಾಗಿ ಮಾಡುವ ಕಾರ್ಯದ ಬಗ್ಗೆ ನಾವು ಎಚ್ಚೆತ್ತುಕೊಳ್ಳಬೇಕು” ಎಂದು  ಹೇಳಿದರು.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಯೋಜನೆ ಪ್ರಸ್ತಾಪಾಸಿ ಮಾತನಾಡಿ, “ಈ ಯೋಜನೆಯಡಿ ಚೆನ್ನೈನ ಸರ್ಕಾರಿ ಸಂಸ್ಥೆಯಲ್ಲಿ ಖಾಸಗಿಯವರು ಬೋಗಿಗಳನ್ನು ತಯಾರಿಸಲು ಅವಕಾಶ ನೀಡಲಾಗುತ್ತಿದೆ. ಸರ್ಕಾರದ ಸಂಸ್ಥೆಯ ಜತೆಗೆ ವಿದ್ಯುತ್, ನೀರು ಎಲ್ಲವನ್ನೂ ಬಳಸಿ ಅಲ್ಲಿ ಬೋಗಿಗಳನ್ನು ತಯಾರಿಸಿ ಸರ್ಕಾರಕ್ಕೆ ಮಾರಾಟ ಮಾಡಿ ನಿರ್ವಹಣೆ ಮಾಡುವ ಕಾರ್ಯ ಖಾಸಗಿಯವರಿಗೆ ಒಪ್ಪಿಸಿ ಅವರಿಗೆ ಲಾಭ ಮಾಡಿಸುವ ತಂತ್ರಗಾರಿಕೆ ಇದಾಗಿದ್ದು, ಇದೀಗ ಜೀವನದ ಬಹು ಮುಖ್ಯವಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವುದು ಆತಂಕಕಾರಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಜಿಲ್ಲಾ ಉಸ್ತುವಾರಿ ಸಚಿವ ಯಾರೆಂಬುದೇ ನನಗೆ ಗೊತ್ತಿಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

ದಲಿತ ಸಂಘಟನೆಯ ಮುಖಂಡ ಎಂ ದೇವದಾಸ್ ಮಾತನಾಡಿ, “ಈಸ್ಟ್ ಇಂಡಿಯಾ ಕಂಪನಿಯ ಮೂಲಕ ಬ್ರಿಟಿಷರು ಭಾರತದ ಸಂಪತ್ತನ್ನು ಕೊಳ್ಳೆ ಹೊಡೆದು ಇಂಗ್ಲೆಂಡ್‌ಗೆ ಸಾಗಿಸಿದ್ದರು. ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಂದ ಬಳಿಕ ದೇಶದ ಸಂಪತ್ತನ್ನು ಅಂಬಾನಿ, ಅದಾನಿಗಳಿಗೆ ಮಾರಾಟ ಮಾಡುವ ಕಾರ್ಯ ನಡೆಯುತ್ತಿದೆ. ಹಾಗಾಗಿ ದೇಶದ ಸಂಪತ್ತನ್ನು ಉಳಿಸಲು ಈ ಖಾಸಗೀಕರಣದ ಹೋರಾಟ ಅನಿವಾರ್ಯ” ಎಂದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರುಗಳಾದ ಸೀತಾರಾಂ ಬೇರಿಂಜ, ವಿ ಕುಕ್ಯಾನ್, ಶೇಖರ್, ನಾಗೇಶ್ ಕೋಟ್ಯಾನ್, ಭಾರತಿ ಬೋಳಾರ್, ಸುಹಾನ್ ಆಳ್ವ, ಮಂಜಪ್ಪ ಪುತ್ರನ್, ಪ್ರಮೀಳಾ ದೇವಾಡಿಗ, ಅಶುಂತ ಡಿಸೋಜಾ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...