ಎರಡು ದಿನಗಳ ಹಿಂದೆ ಮೂಡಬಿದ್ರೆಯ ಆಳ್ವಾಸ್ ಪಿ.ಯು ಕಾಲೇಜಿನ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಮನೋಜ್ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಎಸ್ಎಸ್ಯುಐ ಆಗ್ರಹಿಸಿದೆ.
ಗದಗ ಜಿಲ್ಲೆಯ ವಿದ್ಯಾರ್ಥಿ ಮನೋಜ್, ಆಳ್ವಾಸ್ ಪಿ.ಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು. ಕಾಲೇಜಿನ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಮೂಡಬಿದಿರೆ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿತ್ತು.
ಬುಧವಾರ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಹಾಗೂ ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರನ್ನು ಭೇಟಿ ಮಾಡಿದ ಎನ್ಎಸ್ಯುಐ ನಿಯೋಗವು ವಿದ್ಯಾರ್ಥಿ ಮನೋಜ್ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿಜ ಮನವಿ ಸಲ್ಲಿಸಿದೆ.
ನಿಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಶ್ರವಣ್ ಆಳ್ವ, ಚಿರಾಗ್ ಪೂಜಾರಿ, ರಫೀಜ್, ಓಂಶ್ರೀ ಪೂಜಾರಿ, ರೋಂಷ್ಠನ್, ಸೋಹನ್, ಕ್ರಿಷ್ಠನ್, ಸಾಹಿಲ್ ಮಂಚಿಲ, ಮಕ್ವಿನ್ ಉಪಸ್ಥಿತರಿದ್ದರು.