ಧರ್ಮಸ್ಥಳ ಪ್ರಕರಣ | ಅಸ್ಥಿಪಂಜರ ಪತ್ತೆಗಾಗಿ ನಾಲ್ಕನೇ ಜಾಗದಲ್ಲಿ ಮುಂದುವರೆದ ಕಾರ್ಯಾಚರಣೆ

Date:

Advertisements

ಹಲವು ಮೃತದೇಹ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಇಂದು(ಜುಲೈ 30) ಮೂರನೇ ಸ್ಥಳವನ್ನು ಅಗೆಯಲಾಗಿದೆ. ಆದರೆ ಯಾವುದೇ ಅಸ್ಥಿಪಂಜರ ದೊರಕಿಲ್ಲ. ನೇತ್ರಾವತಿ ಸ್ನಾನಗುಡ್ಡದ ಪಕ್ಕದ ಬಂಗ್ಲೆ ಗುಡ್ಡದಲ್ಲಿನ ಕಾಡಿನೊಳಗೆ ಗುರುತಿಸಿದ ಜಾಗಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ದೂರುದಾರ ಗುರುತಿಸಿರುವ ಜಾಗಗಳ ಪೈಕಿ ಮೊದಲನೇ ಸ್ಥಳವನ್ನು ಅಗೆಯುವ ಕಾರ್ಯಾಚರಣೆ ನಿನ್ನೆ ನಡೆದಿತ್ತು. ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಒಂದು ಬಟ್ಟೆ ತುಂಡು ಹಾಗೂ ಒಂದು ಬ್ಯಾಗ್ ಪತ್ತೆಯಾಗಿತ್ತು. ಆದರೆ ಇದ್ಯಾವುದೂ ಸದ್ಯದ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳಾಗಿ ತೋರುವುದಿಲ್ಲ ಎಂದು ಉನ್ನತ ಮೂಲಗಳು ಈದಿನ ಡಾಟ್‌ ಕಾಂಗೆ ಖಚಿತಪಡಿಸಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಧರ್ಮಸ್ಥಳಕ್ಕೆ ಬಂದ ಬೇರೆ ಇತರೆ ಯಾತ್ರಿಕರ ವಸ್ತುಗಳು ಅವಾಗಿವೆ ಎಂದು ತಿಳಿದುಬಂದಿದೆ. ಗುರುತು ಮಾಡಲಾದ ನಾಲ್ಕನೇ ಜಾಗವನ್ನು ಈಗಾಗಲೇ ಅರ್ಧದಷ್ಟು ಅಗೆಯಲಾಗಿದೆ. ಇಂದು ಐದು ಅಥವಾ ಆರನೇ ಜಾಗವನ್ನು ಅಗೆಯುವುದು ಖಚಿತವಾಗಿದೆ. ಎಸ್ ಐಟಿ ಮುಖ್ಯಸ್ಥರಾದ ಪ್ರಣವ್ ಮೊಹಂತಿ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

Download Eedina App Android / iOS

X