ಮಂಗಳೂರು | 60 ‘ಮಹೇಶ್‌’ ಬಸ್‌ಗಳ ಮಾಲೀಕ ಪ್ರಕಾಶ್ ಆತ್ಮಹತ್ಯೆ

Date:

Advertisements

ಕರಾವಳಿ ಭಾಗದಲ್ಲಿ ಸುಮಾರು 60 ಬಸ್‌ಗಳ ಮಾಲೀಕರಾಗಿದ್ದ ಉದ್ಯಮಿ ಪ್ರಕಾಶ್ ಶೇಖ(42) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಮಂಗಳೂರು ನಗರದ ಕದ್ರಿ ಕಂಬಳ ಸಮೀಪದ ಅಪಾರ್ಟ್‌ಮೆಂಟ್‌ನ ಕೊಠಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ‘ಮಹೇಶ್ ಮೋಟಾರ್ಸ್‌’ಗೆ ಸೇರಿದ ಅನೇಕ ಸಿಟಿ ಬಸ್ ಮತ್ತು ಜಿಲ್ಲಾ ಬಸ್‌ಗಳು ಪ್ರತಿದಿನವೂ ಸಂಚರಿಸುತ್ತಿದ್ದು, ಜನಪ್ರಿಯವಾಗಿದೆ.

Advertisements
prakash shetty

ಮಧ್ಯಾಹ್ನ ಊಟ ಮಾಡಿ ಕೊಠಡಿಗೆ ತೆರಳಿದ್ದರು
ಇಂದು ಮಧ್ಯಾಹ್ನ ಮನೆಯಲ್ಲಿದ್ದ ಪ್ರಕಾಶ್ ಅವರು, ಊಟ ಮಾಡಿದ ಬಳಿಕ ಕೊಠಡಿಗೆ ತೆರಳಿದ್ದರು. ಮಲಗಿರಬಹುದೆಂದು ಸಂಜೆ ಮನೆ ಮಂದಿ ಎಬ್ಬಿಸಲು ಹೊರಟಾಗ ಕೊಠಡಿಯ ಬಾಗಿಲು ತೆಗೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಘಟನೆ ಸಂಬಂಧ ಕದ್ರಿ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

mahesh bus

ಬೆಚ್ಚಿ ಬೀಳಿಸಿದ ಸುದ್ದಿ
60 ಬಸ್‌ಗಳ ಮಾಲೀಕರಾಗಿರುವ ಹಿನ್ನೆಲೆಯಲ್ಲಿ ಉದ್ಯಮದ ವಿಚಾರದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲದಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ನಿನ್ನೆ ಸಂಜೆ ತನ್ನ ಆಪ್ತ ಸ್ನೇಹಿತರೊಡನೆ ಹೊರಗಡೆ ಸುತ್ತಾಡಿದ್ದ ಪ್ರಕಾಶ್ ಅವರು, ಈ ರೀತಿ ಆತ್ಮಹತ್ಯೆಗೆ ಶರಣಾಗಿರುವುದು ಕರಾವಳಿಗರನ್ನು ಅದರಲ್ಲೂ ಖಾಸಗಿ ಬಸ್‌ ಸಿಬ್ಬಂದಿಗಳನ್ನು ಬೆಚ್ಚಿ ಬೀಳಿಸಿದೆ. ಮಾನಸಿಕ ಒತ್ತಡಕ್ಕೆ ಸಿಲುಕಿ ಈ ರೀತಿ ಮಾಡಿಕೊಂಡಿದ್ದಾರೆಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಮೃತರು ತಂದೆ ಜಯರಾಮ್ ಶೇಖ, ಪತ್ನಿ, ಮಗಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X