ಮಂಗಳೂರು | ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮಕ್ಕೆ ಸಿಎಂ ಗೈರು, ಕಾದು ಕುಳಿತ ಜನರಿಗೆ ತೀವ್ರ ಬೇಸರ

Date:

Advertisements

ಮಂಗಳೂರು ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದು, ಕಾರ್ಯಕ್ರಮದ ಆಯೋಜಕರು ಮತ್ತು ಮಂಗಳೂರು ಜನರಿಗೆ ತೀವ್ರ ಬೇಸರ ತರಿಸಿದೆ.

ಸಿದ್ದರಾಮಯ್ಯ ಅವರ ಬರುವಿಕೆಗಾಗಿ ಮೂರು ಗಂಟೆಗೂ ಹೆಚ್ಚು ಸಮಯ ಕಾದುಕುಳಿತಿದ್ದ ನೂರಾರು ಜನರು ಮತ್ತು ಪತ್ರಕರ್ತರು ಕೊನೆಗೆ ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಹಿಡಿಶಾಪ ಹಾಕಿ ವಾಪಾಸ್ ತೆರಳಿದ್ದಾರೆ.

ಸಿದ್ದರಾಮಯ್ಯ ಶುಕ್ರವಾರ ಮಂಗಳೂರು ಪ್ರವಾಸದಲಿದ್ದರು. ಮಧ್ಯಾಹ್ನ 1 ಗಂಟೆಗೆ ಮೇರಿಹಿಲ್‌ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಂಗಳೂರು ಪ್ರಾದೇಶಿಕ ಕೇಂದ್ರ ಕಚೇರಿ ಕಟ್ಟಡದ ಶಿಲಾನ್ಯಾಸ ನೆರವೇರಿಸಿದ ಸಿಎಂ ಬಳಿಕ ಪುರಭವನದಲ್ಲಿ ಆಯೋಜನೆಯಾಗಿದ್ದ ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದರೆ, ಆ ಕಾರ್ಯಕ್ರಮಕ್ಕೆ ಸಿಎಂ ಗೈರು ಹಾಜರಾದರು. ಅಧಿಕೃತ ಸರ್ಕಾರಿ ಕಾರ್ಯಕ್ರಮಕ್ಕೆ ಗೈರುಹಾಜರಾದ ಸಿಎಂ‌ ಸಿದ್ದರಾಮಯ್ಯ ವಿಧಾನ‌ ಪರಿಷತ್ ಸದಸ್ಯ ಐವನ್ ಡಿಸೋಜಾ ಮತ್ತು ಸ್ಪೀಕರ್ ಯು.ಟಿ ಖಾದರ್ ಅವರ ನಿವಾಸದಲ್ಲಿ ಕಾಲ ಕಳೆದರು.

Advertisements

ಪ್ರಾಮುಖ್ಯತೆಯ ಬಹುಸಂಸ್ಕೃತಿ ಉತ್ಸವಕ್ಕೆ ಗೈರಾಗಿದ್ದು ಕಾರ್ಯಕ್ರಮದ ಆಯೋಜಕರು ಮತ್ತು ನೆರದಿದ್ದ ನೂರಾರು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕೋಮುಸೂಕ್ಷ್ಮ ಪ್ರದೇಶದಲ್ಲಿ‌ ಸಮಾಜ ಮತ್ತು ಸಮುದಾಯಗಳ ನಡುವೆ ನಂಬಿಕೆ ವಿಶ್ವಾಸ ಸೌಹಾರ್ದತೆ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮವು ಸಿಎಂ‌ ಸಿದ್ದರಾಮಯ್ಯನವರಿಗೆ ಮುಖ್ಯವಾಗಬೇಕಿತ್ತು. ವಿಧಾನ ಪರಿಷತ್ ಸದಸ್ಯ ಮತ್ತು ಸ್ಪೀಕರ್ ಮನೆಯಲ್ಲಿ ಕಾಲಹರಣ ಮಾಡುವ ಬದಲು ಬಹುಸಂಸ್ಕೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕಿತ್ತು ಎಂಬ ಮಾತುಗಳು ಕೇಳಿಬಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ.ಕ | ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗೆ ಹಿನ್ನಡೆ; ‘ಕೈ’ ಪಾಳಯಕ್ಕೆ ದಕ್ಕಿದ ಅಧಿಕಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯತ್...

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ  85044  ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ...

ದ.ಕ. | ಲಾರ್ವಾ ತಾಣಗಳು ಕಂಡುಬಂದರೆ ದಂಡ: ಮನಪಾ ಆಯುಕ್ತರ ಸೂಚನೆ

ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ...

ಮಂಗಳೂರು | ಪಿಎಂ ಸ್ವನಿಧಿ ಸಾಲ ಯೋಜನೆ ಮುಂದುವರಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ...

Download Eedina App Android / iOS

X