ಮಂಗಳೂರು | ಮಾತೃಭಾಷೆ-ಸಂಸ್ಕೃತಿ ಹೆಣ್ಮಕ್ಕಳಿಗೆ ಮಾನಸಿಕ ಶಕ್ತಿ ನೀಡುತ್ತದೆ : ಉಮರ್ ಯು.ಎಚ್

Date:

ಹೆಣ್ಮಕ್ಕಳು ಜೀವನದಲ್ಲಿ ಶಿಕ್ಷಣ, ಮದುವೆ ಹಾಗೂ ಮಾತೃತ್ವ ಎಂಬ ಮೂರು ಪ್ರಮುಖ ಹಂತಗಳನ್ನು ಹಾದು ಹೋಗುತ್ತಾರೆ. ಮದುವೆ ಮತ್ತು ಮಾತೃತ್ವದ ಹಂತಗಳಲ್ಲಿ ಅನೇಕ ಮಹಿಳೆಯರು ಮಾನಸಿಕವಾಗಿ ಕುಗ್ಗುವ ಸಾಧ್ಯತೆಗಳಿರುತ್ತವೆ. ಆದರೆ ಮಾತೃಭಾಷೆ ಹಾಗೂ ಸಂಸ್ಕೃತಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡಿರುವ ಮಹಿಳೆಯರ ಮನೋಬಲ ಯಾವುದೇ ಸವಾಲುಗಳನ್ನು ಎದುರಿಸುವಷ್ಟು ದೃಢವಾಗಿರುತ್ತದೆ ಎಂದು ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಅಭಿಪ್ರಾಯಪಟ್ಟರು.

- Advertisement -

ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಬುಧವಾರ ನಗರದ ಅಡ್ಯಾರಿನ ಬರಕ ಇಂಟರ್‌ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜಿನ ಸಹಯೋಗದಲ್ಲಿ ಪದವಿ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ ಬ್ಯಾರಿ ಸಾಹಿತ್ಯ ಕಮ್ಮಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಜೀವನದ ಪ್ರತಿಯೊಂದು ಹಂತದಲ್ಲೂ ಮಹಿಳೆಯರು ಆತ್ಮವಿಶ್ವಾಸ, ಭಾಷೆ ಮತ್ತು ಸಂಸ್ಕೃತಿಯೊಂದಿಗೆ ಬೆಳೆದಾಗ ಸಮಾಜದಲ್ಲಿ ಉತ್ತಮ ನಾಯಕತ್ವವನ್ನು ವಹಿಸಲು ಸಾಧ್ಯವಾಗುತ್ತದೆ. ಮಾತೃಭಾಷೆಯೊಂದಿಗೆ ಬೆಸೆದುಕೊಂಡಿರುವ ಸಂಸ್ಕಾರ ಮತ್ತು ಮೌಲ್ಯಗಳು ಜೀವನದ ಸವಾಲುಗಳನ್ನು ಎದುರಿಸಲು ಅಗತ್ಯವಾದ ಮಾನಸಿಕ ಸ್ಥೈರ್ಯವನ್ನು ನೀಡುತ್ತವೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬ್ಯಾರಿ ಅಕಾಡಮಿಯ ಮಾಜಿ ಸದಸ್ಯೆ ಆಯಿಶಾ ಯು.ಕೆ. ಭಾಗವಹಿಸಿ ವಿದ್ಯಾರ್ಥಿನಿಯರಿಗೆ ಸಾಹಿತ್ಯ ಮತ್ತು ಭಾಷೆಯ ಮಹತ್ವದ ಕುರಿತು ಉಪನ್ಯಾಸ ನೀಡಿದರು.

ಅತಿಥಿಗಳಾಗಿ ಬರಕ ಇಂಟರ್‌ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲ ಬಿ.ಎಸ್. ಶರಪುದ್ದೀನ್ ಹಾಗೂ ಉಪಪ್ರಾಂಶುಪಾಲೆ ನಸ್ರೀನ್ ಉಪಸ್ಥಿತರಿದ್ದರು.

ಬ್ಯಾರಿ ಅಕಾಡಮಿಯ ಸದಸ್ಯೆ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕಿ ಶಮೀರಾ ಜಹಾನ್ ಸ್ವಾಗತಿಸಿದರು. ಅಕಾಡಮಿಯ ಸದಸ್ಯೆ ಸಾರಾ ಅಲಿ ಪರ್ಲಡ್ಕ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಮಶೂರ ಮತ್ತು ತಂಡ ಸ್ತುತಿಗೀತೆ ಹಾಡಿದರು. ಸಫಾ ಕಿರಾಅತ್ ಪಠಿಸಿದರು. ಶಿಫ್ನ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...