ಮಂಗಳೂರು: ಟಿಂಟ್‌ ಅಳವಡಿಸಿದ್ದ 223 ಕಾರಿನ ಮಾಲಕರಿಗೆ 1,11,500 ರೂ. ದಂಡ

Date:

Advertisements

ಮಂಗಳೂರು ಪೊಲೀಸ್‌ ಕಮಿಷನರ್‍‌ ವ್ಯಾಪ್ತಿಯಲ್ಲಿ ಜೂನ್‌ 2 ಮತ್ತು 3ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಗ್ಲಾಸ್‌ಗಳಿಗೆ ಟಿಂಟ್ ಸ್ಟಿಕ್ಕರ್‍‌‌ ಅಳವಡಿಸಿದ್ದ 223 ಕಾರುಗಳ ಮೇಲೆ ಪ್ರಕರಣ ದಾಖಲಿಸಿ 1,11,500 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್‌ ಪ್ರಕಟನೆ ತಿಳಿಸಿದೆ.

ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಂಗಳೂರು ಸಂಚಾರಿ ಪೊಲೀಸ್‌ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್‌ ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಕಾರಿನ ಗ್ಲಾಸ್‌ ಗಳಿಗೆ ಟಿಂಟ್‌ ಸ್ಟಿಕ್ಕರ್‍‌ ಅಳವಡಿಸಿದ ಮಾಲಕರು ಮತ್ತು ಚಾಲಕರಿಗೆ ದಂಡ ವಿಧಿಸಿದ್ದಾರೆ. ಒಟ್ಟು 223 ಕಾರುಗಳ ಚಾಲಕ ಮಾಲಕರಿಗೆ 1,11,500 ರೂಪಾಯಿ ದಂಡ ವಿಧಿಸಲಾಗಿದೆ. ಗ್ಲಾಸ್‌ಗೆ ಟಿಂಟ್‌ ಅಳವಡಿಸಿದ ಕಾರಿನ ಚಾಲಕರಿಂದಲೇ ಟಿಂಟ್‌ ತೆಗೆಸಿ ಇನ್ನು ಮುಂದೆ ಕಾರಿಗೆ ಟಿಂಟ್‌ ಅಳವಡಿಸದಂತೆ ಸೂಚನೆ ನೀಡಲಾಗಿದೆ.

ಅಲ್ಲದೆ ಮಂಗಳೂರು ಕಮಿಷನರ್‍‌ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರು ಶೋ ರೂಂ, ಕಾರಿನ ಬಿಡಿಭಾಗಗಳ ಅಂಗಡಿಗಳು, ಗ್ಯಾರೇಜ್‌, ಸ್ಟಿಕರ್ ಅಂಗಡಿಗಳ ಮಾಲಕರ ಸಭೆಯನ್ನು ಜೂನ್‌ 3ರಂದು ಪೊಲೀಸ್‌ ಆಯುಕ್ತರ ಕಚೇರಿ ಮತ್ತು ಸ್ಥಳೀಯ ಪೊಲೀಸ್‌ ಠಾಣೆಗಳಲ್ಲಿ ಕರೆಯಲಾಗಿದೆ. ಅಪರಾಧ ಕೃತ್ಯ ನಡೆಸಲು ಆರೋಪಿಗಳು ಕಾರಿಗೆ ಟಿಂಟ್‌ ಅಳವಡಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿಗೆ ಬರುವ ಯಾವುದೇ ವಾಹನಗಳಿಗೆ ಟಿಂಟ್‌ ಅಳವಡಿಸದಂತೆ ಸಭೆಯಲ್ಲಿ ಅಂಗಡಿಗಳ ಮಾಲಕರಿಗೆ ಸೂಚನೆ ನೀಡಲಾಗಿದೆ ಎಂದು ಪೊಲೀಸ್‌ ಪ್ರಕಟನೆ ತಿಳಿಸಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ  85044  ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ...

ದ.ಕ. | ಲಾರ್ವಾ ತಾಣಗಳು ಕಂಡುಬಂದರೆ ದಂಡ: ಮನಪಾ ಆಯುಕ್ತರ ಸೂಚನೆ

ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ...

ಮಂಗಳೂರು | ಪಿಎಂ ಸ್ವನಿಧಿ ಸಾಲ ಯೋಜನೆ ಮುಂದುವರಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ...

ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಹಿನ್ನೆಲೆಯಲ್ಲಿ...

Download Eedina App Android / iOS

X