ಬೆಂಗಳೂರು ಕಾಲ್ತುಳಿತ: ಉಪ್ಪಿನಂಗಡಿ ಇಳಂತಿಲ ಮೂಲದ ವಿದ್ಯಾರ್ಥಿನಿ ಮೃತ್ಯು

Date:

Advertisements

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಆ ಪೈಕಿ ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ.

ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ ಪುತ್ರಿ ಚಿನ್ನಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ. ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಚಿನ್ಮಯಿ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನಪ್ಪಿದ್ದಾರೆ.

ಬೆಂಗಳೂರಿನ ಕನಕಪುರ ರಸ್ತೆಯ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಚಿನ್ಮಯಿ ಶೆಟ್ಟಿ ಅವರು ಅತ್ಯುತ್ತಮ ಯಕ್ಷಗಾನ ಕಲಾವಿದೆಯೂ ಆಗಿದ್ದರು. ಇವರು ಬೆಂಗಳೂರಿನ ಯಕ್ಷತರಂಗ ತಂಡದ ವಿದ್ಯಾರ್ಥಿನಿಯಾಗಿದ್ದರು. ಅಲ್ಲದೆ ಉತ್ತಮ ಬಾಸ್ಕೆಟ್‌ ಬಾಲ್‌ ಕ್ರೀಡಾಪಟು ಕೂಡಾ ಆಗಿದ್ದರು. ಚಿನ್ಮಯಿ ಶೆಟ್ಟಿಯವರ ತಂದೆ ಕರುಣಾಕರ ಶೆಟ್ಟಿಯವರು ಮೂಲತ: ಸೋಮವಾರಪೇಟೆ ನಿವಾಸಿಯಾಗಿದ್ದು ಕೆಲ ವರ್ಷಗಳ ಹಿಂದೆ ಇಳಂತಿಲದಲ್ಲಿ ಜಾಗ ಖರೀದಿಸಿ ಮನೆ ಮಾಡಿದ್ದರು.

Advertisements

ಬೆಂಗಳೂರುನಲ್ಲಿ ಉದ್ಯಮಿಯಾಗಿರುವ ಕರುಣಾಕರ ಶೆಟ್ಟಿಯವರು ಕುಟುಂಬದೊಂದಿಗೆ ಬೆಂಗಳೂರುನಲ್ಲಿಯೇ ವಾಸ್ತವ್ಯವಿದ್ದು ಅಂಡೆತ್ತಡ್ಕದಲ್ಲಿ ಅವರ ತಾಯಿ ಮತ್ತು ಮಗಳ ಮಗ ವಾಸ್ತವ್ಯವಿದ್ದಾರೆ. ವಿಷಯ ತಿಳಿದು ಅವರು ಬೆಂಗಳೂರುಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಮಂಗಳೂರು | ಭೂಮಾಲೀಕತ್ವದ ಇತಿಹಾಸ ತಿಳಿದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಲಕ್ಷಾಂತರ ಮಂದಿ ಭೂರಹಿತರು ಭೂಮಾಲೀಕರಾಗಲು ಕಾರಣರಾದ ಭೂಸುಧಾರಣೆ ಕಾನೂನು ಮತ್ತು ಅಂದಿನ...

Download Eedina App Android / iOS

X