ಬೆಂ. ಗ್ರಾಮಾಂತರ | ಕೊಲೆಯಾದ ಸ್ಥಿತಿಯಲ್ಲಿ ದಲಿತ ಬಾಲಕಿ ಮೃತದೇಹ ಪತ್ತೆ; ಸವರ್ಣೀಯನ ಮೇಲೆ ಶಂಕೆ

Date:

Advertisements

ದಲಿತ ಬಾಲಕಿಯೊಬ್ಬಳ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ. ಆಕೆಯನ್ನು ಚುಡಾಯಿಸುತ್ತಿದ್ದವನೇ ಕೊಲೆ ಮಾಡಿರಬಹುದು ಎಂದು ಅನುಮಾನಿಸಲಾಗಿದೆ. ಸದ್ಯ, ಶಂಕಿತನೂ ಕತ್ತುಕೊಯ್ದುಕೊಂಡು ಆಸ್ಪತ್ರೆ ಸೇರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

20 ದಿನಗಳ ಹಿಂದೆ ದಲಿತ ಬಾಲಕಿ ಶಾಲೆಗೆ ತೆರಳುತ್ತಿದ್ದಾಗ, ಸವರ್ಣೀಯ ಸಮುದಾಯದ ನಿತಿನ್ ಎಂಬಾತ ಚುಡಾಯಿಸಿದ್ದ. ಆತನನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಕೂಡ ಮಾಡಿದ್ದ. ಘಟನೆ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ, ಮಾಲೂರು ಪೊಲೀಸ್‌ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು.

ಆದರೆ, ಗ್ರಾಮದ ಹಿರಿಯ ಮುಖಂಡರು ಎರಡು ಕುಟುಂಬಗಳ ನಡುವೆ ರಾಜೀ-ಸಂದಾನ ನಡೆಸಿದ್ದರು. ರಾಜಿ ಪಂಚಾಯತಿ ನಡೆದ ಕೆಲವೇ ದಿನಗಳಲ್ಲಿ ಬಾಲಕಿ ನಾಪತ್ತೆಯಾಗಿದ್ದಳು. ಗುರುವಾರ ಆಕೆಯ ಮೃತದೇಹ ಪತ್ತೆಯಾಗಿದೆ.

Advertisements

ಅನುಗೊಂಡನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರಿಗೆ ದೂರು ನೀಡಿದ್ದರಿಂದ ಮತ್ತು ರಾಜಿ ಪಂಚಾಯತಿಯಿಂದ ತನಗೆ ಅವಮಾನವಾಗಿದ್ದಕ್ಕೆ, ಪ್ರಬಲ ಜಾತಿಯ ನಿತಿನ್ ಎಂಬಾತನೇ ಕೊಲೆ ಮಾಡಿಬಹುದು ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಸಂಬಂಧ ಈದಿನ.ಕಾಮ್ ಜೊತೆ ಮಾತನಾಡಿದ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ, “ಗುರುವಾರ ಬಾಲಕಿಯ ಮೃತದೇಹ ಪತ್ತೆಯಾಗಿದೆ. ನಿತಿನ್ ಎಂಬಾತನೇ ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಆತನೂ ಕತ್ತುಕೊಯ್ದುಕೊಂಡಿದ್ದಾನೆ. ಆತ ಕೋಮಾ ಸ್ಥಿತಿಯಲ್ಲಿದ್ದಾನೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ” ಎಂದು ತಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X