ಮೇ ಸಾಹಿತ್ಯ ಮೇಳ | ದಲಿತ ಚಳವಳಿ ನಾಯಕ ಎನ್ ವೆಂಕಟೇಶ್ ಸೇರಿ ಹಲವರಿಗೆ ಪ್ರಶಸ್ತಿ

Date:

Advertisements

ಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ನಿರಂತರವಾಗಿ ನಡೆದು ಬರುತ್ತಿರುವ ‘ಮೇ ಸಾಹಿತ್ಯ ಮೇಳ’ವು ಈ ವರ್ಷ ಮೇ 27 ಮತ್ತು 28ರಂದು ವಿಜಯಪುರದಲ್ಲಿ ನಡೆಯಲಿದೆ. ಸಾಹಿತ್ಯ ಮೇಳದಲ್ಲಿ ‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.

ಸಾಹಿತ್ಯ ಮೇಳದಲ್ಲಿ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಸಾಮಾಜಿಕ ಕಾರ್ಯಕರ್ತರಿಗೆ ನಾನಾ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ ಎಂದೂ ತಿಳಿಸಿದ್ದಾರೆ.

ಈ ಬಾರಿಯ ಮೇ ಸಾಹಿತ್ಯ ಮೇಳದಲ್ಲಿ ದಲಿತ ಚಳವಳಿಯ ಹಿರಿಯ ಜೀವಿ ಎನ್ ವೆಂಕಟೇಶ್ ಅವರಿಗೆ ‘ಬಂಡ್ರಿ ನರಸಪ್ಪ ಸಮಾಜವಾದಿ ಶ್ರಮಜೀವಿ ಪ್ರಶಸ್ತಿ’, ರಂಗಚಟುವಟಿಕೆಯಲ್ಲಿ ಸಕ್ರಿಯರಾಗಿ ಬಹುದೊಡ್ಡ ಚಳವಳಿ ಕಟ್ಟಿರುವ ಸಿ. ಬಸವಲಿಂಗಯ್ಯ ಅವರಿಗೆ ‘ಪಂಚಪ್ಪ ಸಮುದಾಯ ಮಾರ್ಗಿ ಪ್ರಶಸ್ತಿ’, ರೈತ ಚಳವಳಿಗಾಗಿ ಬದುಕನ್ನೇ ಮುಡುಪಿಟ್ಟವರ ಜೆ.ಎಂ ವೀರಸಂಗಯ್ಯ ಅವರಿಗೆ ‘ಸಂಶಿ ನಿಂಗಪ್ಪ ರೈತಚೇತನ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತದೆ.

Advertisements

ಗಿಟ್ಟಿಗಿತ್ತಿ ಎಂದೇ ಕರೆಯಿಸಿಕೊಳ್ಳುವ, ಕಥೆ, ಕಾವ್ಯ ಹಾಗೂ ಇತರ ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ಮಾಲತಿ ಪಟ್ಟಣಶೆಟ್ಟಿ ಅವರಿಗೆ ‘ನವಲಕಲ್ಲ ಬೃಹನ್ಮಠ ಶಾಂತವೀರಮ್ಮ ಮಹಾತಾಯಿ ಕಥಾ ಪ್ರಶಸ್ತಿ’, ಬಿದರ ಭಿನ್ನಹ ಹಸ್ತ ಪ್ರತಿ ರಚಿಸಿದ ಭಾಗ್ಯಜ್ಯೋತಿ ಹಿರೇಮಠ ಅವರಿಗೆ ‘ವಿಭಾ ಸಾಹಿತ್ಯ ಪ್ರಶಸ್ತಿ’ ನೀಡಲಾಗುತ್ತದೆ. ಎಲ್ಲರಿಗೂ ಶ್ರೇಷ್ಠ ಕಥೆಗಾರ ಕೇಶವ ಮಳಗಿ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಸಾಹಿತ್ಯ ಮೇಳದ ಆಯೋಜಕರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ತಮ್ಮ ಮೊದಲ ಮತವನ್ನೇ ಮಾರಿಕೊಂಡ ಯುವಜನರು!

ಮೇ ಸಾಹಿತ್ಯ ಮೇಳದಲ್ಲಿ ಮೂಡ್ನಾಕೂಡು ಚಿನ್ನಸ್ವಾಮಿ, ನಟರಾಜ ಬೂದಾಳು, ಕುಂ ವೀರಭದ್ರಪ್ಪ, ಬಾಲಗುರುಮೂರ್ತಿ, ಕೃಷ್ಣಮೂರ್ತಿ ಚಮರಂ, ಬಿ. ಎಂ ಹನೀಫ್, ಶೈಲಜಾ ಹಿರೇಮಠ, ರಂಗನಾಥ ಕಂಟನಕುಂಟೆ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X