21ನೇ ಶತಮಾನದಲ್ಲೂ ಅಸ್ಪೃಶ್ಯತೆ ಆಚರಿಸಲಾಗುತ್ತದೆ ಎಂದರೆ ಸರ್ಕಾರಕ್ಕೆ ನಾಚಿಕೆಯಾಗಬೇಕು : ಶಿವಕುಮಾರ ಗೋಲಾ

Date:

Advertisements

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿ ಕೊಲೆ ಮಾಡಿದ ಘಟನೆಯನ್ನು ಖಂಡನೀಯ ಎಂದು ದಲಿತ ಸೇನೆ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ತಿಳಿಸಿದ್ದಾರೆ.

ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಯಮನೂರಪ್ಪ ಬಂಡಿಹಾಳನನ್ನು ಕ್ಷೌರಿಕ ಮುದುಕಪ್ಪ, ನೀನು ಹರಿಜನ ಇದ್ದೀಯಾ. ನಿನಗೆ ಕ್ಷೌರ ಮಾಡುವುದಿಲ್ಲ ಅಂತ ತಕರಾರು ಮಾಡಿ ಕೊನೆಗೆ ಕಟಿಂಗ್ ಮಾಡುವ ಕತ್ತರಿಯಿಂದ ಹೊಟ್ಟೆಗೆ ಬಲವಾಗಿ ತಿವಿದು ಕೊಲೆ ಮಾಡಿದ್ದಾನೆ. 21 ನೇ ಶತಮಾನದಲ್ಲೂ ಕೂಡ ಅಸ್ಪೃಶ್ಯತೆ ಆಚರಿಸಲಾಗುತ್ತದೆ ಎಂದರೆ ಸರಕಾರಕ್ಕೆ ನಾಚಿಕೆಯಾಗಬೇಕು ಎಂದು ತಿಳಿಸಿದರು.

ಈ ಘಟನೆಯ ನೇರ ಹೊಣೆ ಸರಕಾರ ಮತ್ತು ಅಧಿಕಾರಿಗಳದ್ದು. ಅಧಿಕಾರಿಗಳ ಬೇಜವಬ್ದಾರಿತನದಿಂದ ಇಂತಹ ಘಟನೆಗಳು ನಡೆಯುತ್ತಿವೆ. ಇದಕ್ಕೆ ಕೊಪ್ಪಳ ಜಿಲ್ಲೆಯ ಡಿ.ಸಿ.ಎಸ್.ಪಿ.ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರು, ಯಲಬುರ್ಗಾ ತಾಲೂಕಿನ ಶಾಸಕರು, ತಹಶೀಲ್ದಾರರು ನೇರ ಹೊಣೆ ಹೊರಬೇಕು. ಇವರೆಲ್ಲರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಬೇಕು. ನೊಂದ ಕುಟುಂಬಕ್ಕೆ ಪರಿಹಾರ ನೀಡಬೇಕು. ಕುಟುಂಬದಲ್ಲಿನ ಒಬ್ಬ ಸದಸ್ಯರಿಗೆ ಸರಕಾರಿ ನೌಕರಿ ನೀಡಬೇಕೆಂದು ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ಸರಕಾರಕ್ಕೆ ಆಗ್ರಹಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ರೀಲ್ಸ್ ಹುಚ್ಚು: ಬೈಕ್‌ನ ಮೂಲಕ ಯುವತಿಯರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದವ ಈಗ ಪೊಲೀಸರ ಅತಿಥಿ!

ಕೊಪ್ಪಳ ಜಿಲ್ಲೆಯಲ್ಲಿ ಹಲವು ಕಡೆಗಳಲ್ಲಿ ಅಸ್ಪೃಶ್ಯತೆ ಆಚರಿಸಲಾಗುತ್ತದೆ. ಇದನ್ನೂ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವ ಅಲ್ಲಿನ ಸರಕಾರಿ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಈ ಘಟನೆ ಬಗ್ಗೆ ವಿಚಾರ ಮಾಡಿ ದಲಿತ ಸೇನೆ ರಾಜ್ಯ ಅಧ್ಯಕ್ಷರಾದ ಹಣಮಂತ ಯಳಸಂಗಿ ಅವರ ನೇತೃತ್ವದಲ್ಲಿ ಕೊಲೆಯಾದ ಯಮನೂರಪ್ಪ ಕುಟುಂಬಕ್ಕೆ ಭೇಟಿಯಾಗಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಗೋಲಾ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X