ಬೀದರ್‌ | ಮೂಢ ಸಂಪ್ರದಾಯ ತಡೆಗೆ ದಲಿತ ಪ್ಯಾಂಥರ್‌ ಸಂಘಟನೆ ಆಗ್ರಹ

Date:

Advertisements

ಹುಮನಾಬಾದ್‌ ತಾಲ್ಲೂಕಿನಲ್ಲಿ ʼಕಾರ್ಯʼ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಮೂಢ ಸಂಪ್ರದಾಯ ಆಚರಣೆ ತಡೆಯುವಂತೆ ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ಆಗ್ರಹಿಸಿದೆ.

ಈ ಕುರಿತು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಪದಾಧಿಕಾರಿಗಳು ಶುಕ್ರವಾರ ಹುಮನಾಬಾದ್‌ ತಹಸೀಲ್ದಾರ್‌ ಅಂಜುಮ್‌ ತಬಸುಮ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಸಂಘಟನೆಯ ತಾಲ್ಲೂಕಾಧ್ಯಕ್ಷ ಗಣಪತಿ ಅಷ್ಟೂರೆ ಮಾತನಾಡಿ, ʼತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮೂಢ ಸಂಪ್ರದಾಯ ಆಚರಣೆ ಮಾಡುವ ಮೂಲಕ ಪ್ರಾಣಿಗಳನ್ನು ಬಲಿ ಕೊಟ್ಟು ಮತ್ತೆ ಅನಿಷ್ಟ ಪದ್ಧತಿಗಳ ಅಸ್ತಿತ್ವಕ್ಕೆ ತರುತ್ತಿರುವುದು ಖಂಡನಿಯವಾಗಿದ್ದು, ಇವುಗಳ ಕಡಿವಾಣಕ್ಕೆ ತಾಲ್ಲೂಕು ಆಡಳಿತ ಅಗತ್ಯ ಕ್ರಮ ಕೈಗೊಂಡು ಸಂಪೂರ್ಣ ಬಂದ್‌ ಮಾಡಿಸಬೇಕು. ಇಲ್ಲದಿದ್ದರೆ ತಾಲ್ಲೂಕು ಆಡಳಿತ ವಿರುದ್ಧ ರಸ್ತೆ ತಡೆದು ಉಗ್ರ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಔರಾದ್ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಬಿ.ಎಂ.ಅಮರವಾಡಿ ನೇಮಕ

ಸಂಘಟನೆ ಜಿಲ್ಲಾಧ್ಯಕ್ಷ ವೈಜಿನಾಥ ಸಿಂಧೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಕುಮಾರ ಭೋಲಾ, ಜಿಲ್ಲಾ ಉಪಾಧ್ಯಕ್ಷ ಶಿವಾನಂದ ಕಟ್ಟಿಮನಿ ಸೇರಿದಂತೆ ಪ್ರಮುಖರಾದ ಶಿವಕುಮಾರ ಸಾಗರ್, ಸಿದ್ದಾರ್ಥ ಜಾನವೀರ್, ಆನಂತ ಮಾಳಗೆ, ವಿಶಾಲ ಸಿಂಧನಕೇರಾ, ಗೌತಮ ಜಾನವೀರ್, ವಿಠಲ್ ಶಿವನಾಯಕ, ಸಿದ್ಧಾರ್ಥ ಡಾಂಗೆ, ರಾಹುಲ್ ಚಿಟಗುಪ್ಪಕರ್, ಅರ್ಜುನ್ ಡಾಂಗೆ, ಮನೋಜ ಜಾನವೀರ್, ಯುವರಾಜ ಐಹೊಳೆ, ಆಕಾಶ ಸಿಂಧೆ, ಗೌತಮ ಮೊಳಕೇರಾ, ಸಾಗರ ಬೋತಗಿಕ್, ರಾಹುಲ್ ಬೋತಗಿಕರ್, ಅಜಯ ವಳಖಿಂಡಿಕರ್, ಆದರ್ಶ ಅಷ್ಟೋರೆ, ದಶರಥ ದಂಡೆಕರ್ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X