ರಾಯಚೂರು | ಜಿಟಿ ಜಿಟಿ ಮಳೆ; ಮುಂದುವರೆದ ದಸಂಸ ಧರಣಿ

Date:

Advertisements

ನಗರದ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ರಿಮ್ಸ್)ಯ ಬೋಧಕ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಜಿಟಿ ಜಿಟಿ ಮಳೆಯ ನಡುವೆಯೂ 5ನೇ ದಿನಕ್ಕೆ ಮುಂದುವರೆದಿದೆ.

ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಮೂಲಸೌಕರ್ಯದ ಕೊರತೆ ಹಾಗೂ ವೈದ್ಯರ ಕರ್ತವ್ಯ ನಿರ್ವಹಣೆಯಲ್ಲಿನ ಲೋಪದಿಂದಾಗಿ ಒಳ ಹಾಗೂ ಹೊರ ರೋಗಿಗಳಿಗೆ ಸರಿಯಾದ ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ ಎಂದು ಆರೋಪಿಸಿ ರಿಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪುರ ಅವರನ್ನು ಅಮಾನತುಗೊಳಿಸುವಂತೆ ಧರಣಿ ನಡೆಯುತ್ತಿದೆ.

“ರಿಮ್ಸ್ ಆಸ್ಪತ್ರೆಯು ಬಡವರಿಗೆ ವರದಾನವಾಗಬೇಕಿತ್ತು. ಆದರೆ ಇಲ್ಲಿನ ಮುಖ್ಯಸ್ಥ ಡಾ. ಬಸವರಾಜ ಪೀರಾಪುರ ಸಮರ್ಥವಾಗಿ ಆಡಳಿತ ನಡೆಸಲು ವಿಫಲರಾಗಿದ್ದು, ಅಗತ್ಯ ಸೌಲಭ್ಯ ದೊರೆಯುತ್ತಿಲ್ಲ. ಆಸ್ಪತ್ರೆಯಲ್ಲಿ ಔಷಧಿಗಳ ದೊಡ್ಡ ಉಗ್ರಾಣವಿದ್ದರೂ ರೋಗಿಗಳಿಗೆ ಅಗತ್ಯ ಔಷಧಿ ನೀಡದೆ, ಹೊರೆಗಿನ ಖಾಸಗಿ ಔಷಧಿ ಅಂಗಡಿಗಳಲ್ಲಿ ತೆಗೆದುಕೊಳ್ಳುವಂತೆ ವೈದ್ಯರು ಚೀಟಿ ಬರೆಯುತ್ತಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ದೊಡ್ಡ ಲಾಭಿ, ಮೆಡಿಕಲ್ ಮಾಫಿಯಾ ನಡೆಯುತ್ತಿದೆ” ಎಂದು ಪ್ರತಿಭಟನಾನಿರತ ಸಂಘದ ಜಿಲ್ಲಾ ಘಟಕದ ಸಂಚಾಲಕ ಎನ್. ನರಸಿಂಹಲು ಆರೋಪಿಸಿದರು.

Advertisements

“ನಗರ ಶಾಸಕ ಡಾ. ಶಿವರಾಜ ಪಾಟೀಲರು ವೈದ್ಯ ವೃತ್ತಿಯಿಂದ ಬಂದಿದ್ದಾರೆ. ಮೂರು ಬಾರಿ ಶಾಸಕರಾದರೂ ರಿಮ್ಸ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಸುಧಾರಣೆ ಮಾಡುತ್ತಿಲ್ಲ. ಬಡ ರೋಗಿಗಳ ಪಾಲಿಗೆ ಸಂಜೀವಿನಿಯಾಗಬೇಕಿರುವ ರಿಮ್ಸ್ ಆಸ್ಪತ್ರೆಯು ಅವ್ಯಸ್ಥೆಯ ಆಗರವಾಗಿದೆ. ಪ್ರತಿಯೊಂದಕ್ಕೂ ಖಾಸಗಿ ಪ್ರಯೋಗಾಲಯ ಮಾಡಿಸಲಾಗುತ್ತಿದೆ. ರಿಮ್ಸ್ ಆಸ್ಪತ್ರೆಯಲ್ಲಿನ ವೈದ್ಯರು ಬೆಳಿಗ್ಗೆ ಹಾಗೂ ಸಂಜೆ ಒಮ್ಮೆ ಬಯೋಮೆಟ್ರಿಕ್‌ ಹಾಜರಾತಿ ಹಾಕಿ ಕೇವಲ ಒಂದೆರಡು ತಾಸು ಕೆಲಸ ಮಾಡುತ್ತಿದ್ದಾರೆ. ಉಳಿದ ಸಮಯ ತಮ್ಮ ಖಾಸಗಿ ಕ್ಲಿನಿಕ್‌ಗಳಲ್ಲಿ ಇರುತ್ತಾರೆ. ಶಾಸಕರು ಖಾಸಗಿ ಆಸ್ಪತ್ರೆಗಳ ಮಾಲೀಕರ ಪರವಾಗಿದ್ದಾರೆ. ಬಡವರ ಮೇಲೆ ಕಾಳಜಿಯಿಲ್ಲ” ಎಂದು ದೂರಿದರು.

“ಈ ಕುರಿತು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಶಕ್ತಿ ಯೋಜನೆ ಫಲ; ಘಾಟಿ ಸುಬ್ರಹ್ಮಣ್ಯ ಹುಂಡಿಯಲ್ಲಿ ₹55 ಲಕ್ಷ ಸಂಗ್ರಹ

“ರಿಮ್ಸ್ ಬೋಧಕ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸಲು ಮತ್ತು ಒಳರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ಧೋರಣೆಯಡಿ ಕರ್ತವ್ಯಲೋಪ ಎಸಗಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ರಿಮ್ಸ್ ಡೀನ್ ಡಾ.ಬಸವರಾಜ ಪಿರಾಪುರ, ರಿಮ್ಸ್ ಆಡಳಿತ ಅಧಿಕಾರಿ ಡಾ.ಹಂಪಣ್ಣ ಸಜ್ಜನ್ ಮತ್ತು ಮೆಡಿಕಲ್ ಸೂಪರಡೆಂಟ್ ಭಾಸ್ಕರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ವೈದ್ಯಕೀಯ ಕಾಯ್ದೆಯಡಿಯಲ್ಲಿ ಅವರ ವಿರುದ್ಧ ಕಾನೂನ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಜಿಲ್ಲಾ ಸಮಿತಿಯ ಮುಖಂಡ ಡಿಂಗ್ರಿ ನರಸಪ್ಪ, ನೀಲಕಂಠ, ಎಲ್ ವಿ ಸುರೇಶ, ಹನುಮೇಶ ಅರೋಲಿ, ಜಿ ನರಸಿಂಹ ಕುರ್ಡಿ, ಫಕ್ರುದ್ದೀನ್ ಅಲಿ ಅಹ್ಮದ್, ಪ್ರದೀಪ, ತಿಕ್ಕಯ್ಯ, ವಿಜಯ ಕುಮಾರ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X