ಮಡಿಕೇರಿ | ಸಿಎಂ ಸಿದ್ದರಾಮಯ್ಯಗೆ ‘ದಲಿತ ರತ್ನ’ ಪ್ರಶಸ್ತಿ

Date:

  • ಜೂನ್‌ ಎರಡನೇ ವಾರದಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ
  • ಬಿಜೆಪಿಯ ದಲಿತ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್‌ಗೆ ಬೆಂಬಲ

ಜೂನ್ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ‘ದಲಿತ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ದಸಂಸ) ಕೊಡಗು ಜಿಲ್ಲಾ ಸಂಚಾಲಕ ಎಚ್‌ ಎಲ್ ದಿವಾಕರ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಿಂದೆಯೇ ಪ್ರಶಸ್ತಿ ನೀಡಿಬೇಕು ಎಂದುಕೊಂಡಿದ್ದರೂ ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಜೂನ್ ಎರಡನೇ ವಾರದಲ್ಲಿ ಕಾರ್ಯಕ್ರಮ ನಿಗದಿ ಮಾಡಲಾಗುವುದು. ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲು ಯತ್ನಿಸಲಾಗುವುದು” ಎಂದು ತಿಳಿಸಿದ್ದಾರೆ.

“ಕಾರ್ಯಕ್ರಮದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಈ ಕಾರ್ಯಕ್ರಮಕ್ಕೆ ಅಂದಾಜು ಎಂಟು ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ. ನಗರದಲ್ಲಿ ಅಂದು ಬೃಹತ್‌ ಮೆರವಣಿಗೆ ಮಾಡಲಾಗುವುದು” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜಕೀಯ ರಹಿತವಾದ ದಲಿತ ಸಂಘರ್ಷ ಸಮಿತಿಯು ಬಿಜೆಪಿ ಸರ್ಕಾರದ ದಲಿತ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡಿತು. ಇದರಿಂದಾಗಿಯೇ ಕಾಂಗ್ರೆಸ್‌ ಅಭೂತಪೂರ್ವ ಬಹುಮತ ಪಡೆಯಿತು. ಇದು ದಲಿತರನ್ನು ನಿರ್ಲಕ್ಷಿಸುವವರಿಗೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾವಣೆ : ಬೊಮ್ಮಾಯಿ

“ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಮಿತಿಯ ಕಾರ್ಯಕರ್ತರು ಬಹುವಾಗಿ ಶ್ರಮಿಸಿದ್ದಾರೆ. ಇವರಿಂದ ಅಭಿವೃದ್ಧಿ ಕಾರ್ಯಗಳು ಆಗುತ್ತವೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲೂಕು ಘಟಕದ ಸಂಚಾಲಕ ದೀಪಕ್ ಪೊನ್ನಪ್ಪ, ನಗರ ಸಂಘಟನಾ ಸಂಚಾಲಕ ಪಿ ಎಂ ಲೋಕನಾಥ್, ನಗರ ಸಂಚಾಲಕ ಸಿದ್ದೇಶ್ವರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಕುರಿತು ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ವಿರುದ್ಧ ಎಫ್‌ಐಆರ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದ...

ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕಾ ಹೇಳಿಕೆ ನೀಡಿದ...

ಬೆಂಗಳೂರು | ಸಂಬಳ ಕೊಡದ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಹಾಕಿದ ಸಿಬ್ಬಂದಿ

ಬೆಂಗಳೂರಿನ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್‌ಗೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು,...

ಗದಗ | ಗುಳೆ ತಪ್ಪಿಸಲು ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ ಪ್ರಾರಂಭ: ವಿ.ಎಸ್ ಸಜ್ಜನ

ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ. ಅದನ್ನು ತಪ್ಪಿಸಲು...