ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ | ಹಾಳಾದ ಸರ್ವೀಸ್‌ ರಸ್ತೆ; ಮಣ್ಣು ಸುರಿದ ಅಧಿಕಾರಿಗಳು

Date:

  • ಒಂದೇ ಮಳೆಗೆ ಕೊಚ್ಚಿಹೋದ ಸರ್ವೀಸ್‌ ರಸ್ತೆ
  • ರಸ್ತೆ ದುರಸ್ತಿ ಕಾರ್ಯ ನಡೆಸುವಂತೆ ಆಗ್ರಹ

ಬೆಂಗಳೂರು–ಮೈಸೂರು ಹೆದ್ದಾರಿಯ ಸರ್ವೀಸ್‌ ರಸ್ತೆ ಒಂದೆಡೆ ಕೊಚ್ಚಿ ಹೋಗಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸರ್ವೀಸ್‌ ರಸ್ತೆಯನ್ನು ಸರಿಪಡಿಸುವ ಬದಲಿಗೆ ರಸ್ತೆ ಮೇಲೆ ಕಲ್ಲು–ಮಣ್ಣು ಸುರಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

“ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ರಾಮನಗರ–ಚನ್ನಪಟ್ಟಣ ಬೈಪಾಸ್‌ ರಸ್ತೆಯ ಬಿಳಗುಂಬ ಅಂಡರ್‌ಪಾಸ್‌ದಲ್ಲಿ (ನೇಟಸ್‌ ಶಾಲೆ ಸಮೀಪ) ಮಳೆ ನೀರು ನಿಲ್ಲುತ್ತದೆ. ಒಂದು ದಿನ ಸುರಿದ ಮಳೆಯ ರಭಸಕ್ಕೆ ಇಲ್ಲಿನ ಸರ್ವೀಸ್‌ ರಸ್ತೆಯು ಹತ್ತಾರು ಅಡಿಗಳವರೆಗೆ ಭಾಗಶಃ ಕೊಚ್ಚಿ ಹೋಗಿದೆ” ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಿತ್ತು ಹೋದ ಈ ರಸ್ತೆಯ ಫೋಟೊಗಳನ್ನು ಪ್ರಯಾಣಿಕರೊಬ್ಬರು ತಮ್ಮ ಫೇಸುಬುಕ್ ಖಾತೆಯಲ್ಲಿ ಜಿಪಿಎಸ್‌ ಲೊಕೇಶನ್‌ ಮಾಹಿತಿ ಸಹಿತ ಹಂಚಿಕೊಂಡಿದ್ದರು. ಈ ಫೋಟೊಗಳು ಜಾಲತಾಣದಲ್ಲಿ ಹರಿದಾಡಿದ್ದವು. ಎಚ್ಚೆತ್ತ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಳಾಗಿದ್ದ ರಸ್ತೆಗೆ ಬೆಳ್ಳಂಬೆಳಿಗ್ಗೆ ಮಣ್ಣು ಸುರಿದು ಮುಚ್ಚಿದ್ದಾರೆ. ಅಲ್ಲಿಂದ ಸ್ವಲ್ಪ ದೂರದಲ್ಲಿಯೇ ರಸ್ತೆ ಇನ್ನಷ್ಟು ಹಾಳಾಗಿದ್ದು, ಅದನ್ನು ಸರಿಪಡಿಸುವ ಗೋಜಿಗೆ ಹೋಗಿಲ್ಲ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದಾರೆ.

“ರಸ್ತೆ ಹಾಳಾಗಿರುವ ಮಾಹಿತಿ ಸಿಕ್ಕ ಬಳಿಕ ಅಧಿಕಾರಿಗಳು ಸೂಕ್ತವಾಗಿ ರಸ್ತೆ ದುರಸ್ತಿ ಕಾರ್ಯ ಮಾಡಬೇಕಿತ್ತು. ಆದರೆ, ರಸ್ತೆಗೆ ಮಣ್ಣು ಸುರಿದಿದ್ದಾರೆ. ಮತ್ತೊಂದು ಮಳೆ ಸುರಿದರೆ ಅದೂ ಕೊಚ್ಚಿ ಹೋಗುತ್ತದೆ. ಇದರಿಂದ ವಾಹನ ಸವಾರರಿಗೆ ಇನ್ನಷ್ಟು ತೊಂದರೆ ಉಂಟಾಗುತ್ತದೆ. ಹಾಗಾಗಿ ಎಲ್ಲೆಲ್ಲಿ ಸರ್ವೀಸ್ ರಸ್ತೆ ಹಾಳಾಗಿದೆ ಎಂಬುದನ್ನು ಗುರುತಿಸಿ ರಸ್ತೆ ದುರಸ್ತಿ ಮಾಡುವ ಕೆಲಸ ನಡೆಯಬೇಕು” ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಜಿಲ್ಲಾಸ್ಪತ್ರೆಯಲ್ಲಿ ಮಂಗಗಳ ಕಾಟ, ರೋಗಿಗಳು ಹೈರಾಣು

ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯವಾಗಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳ ಕೊರತೆ...

ಗದಗ | ಕಲಬುರಗಿಯಲ್ಲಿ ರಾಜ್ಯ ಮಟ್ಟದ ವಿದ್ಯಾರ್ಥಿನಿಯರ ಸಮಾವೇಶ

ಶಿಕ್ಷಣದ ಹಕ್ಕಿಗಾಗಿ, ಖಾಸಗೀಕರಣ ವಿರೋಧಿಸಿ ವಿದ್ಯಾರ್ಥಿನಿಯರಿಗೆ ಸಮಾನ ಗುಣಮಟ್ಟದ ಶಿಕ್ಷಣ ಹಾಗೂ...

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿ ಮಹಿಳೆಯರ ಧರಣಿ

ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ...

ಬೆಳಗಾವಿ | ಅಧಿವೇಶನದಲ್ಲಿ ಭಾಗವಹಿಸುವವರಿಗೆ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಡಿ.4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸುವವರಿಗೆ ವಸತಿ,...