ದಾಂಡೇಲಿ | ನಗರಸಭೆಯಿಂದ ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರ ವಿತರಣೆ; ಆರೋಗ್ಯ ರಕ್ಷಣೆಗೆ ಆದ್ಯತೆ

Date:

ದಾಂಡೇಲಿ: ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಸುರಕ್ಷತೆ ಹಾಗೂ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿರುವ ನಗರಸಭೆಯು ಅವರಿಗೆ ಸಮವಸ್ತ್ರ ಹಾಗೂ ಅಗತ್ಯ ಸುರಕ್ಷತಾ ಪರಿಕರಗಳನ್ನು ವಿತರಿಸಿದೆ‌.

- Advertisement -

ನಗರಸಭೆ ಪೌರಾಯುಕ್ತ ವಿವೇಕ ಬನ್ನೆ ಅವರ ನೇತೃತ್ವದಲ್ಲಿ ಆರೋಗ್ಯ ನಿರೀಕ್ಷಕ ವಿಲಾಸ ಕುಮಾರ ಅವರು ಪೌರ ಕಾರ್ಮಿಕರಿಗೆ ಸಮವಸ್ತ್ರ, ಕೈಗವಸು, ಮುಖಗವಸು, ಸುರಕ್ಷತಾ ಬೂಟು ಸೇರಿದಂತೆ ವಿವಿಧ ಸುರಕ್ಷತಾ ಸಾಮಗ್ರಿಗಳನ್ನು ವಿತರಿಸಿದರು. ಪ್ರತಿದಿನ ನಗರದ ವಿವಿಧ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರ ಕಾರ್ಮಿಕರು ಧೂಳು, ತ್ಯಾಜ್ಯ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಪರಿಸರದಲ್ಲಿ ಕೆಲಸ ನಿರ್ವಹಿಸಬೇಕಾಗಿರುವುದರಿಂದ, ಅವರ ಆರೋಗ್ಯದ ದೃಷ್ಟಿಯಿಂದ ಸುರಕ್ಷತಾ ಪರಿಕರಗಳ ಬಳಕೆ ಅತ್ಯಗತ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಈ ಸುದ್ದಿ ಓದಿದ್ದೀರಾ? ಸಚಿವರ ಹೆಜ್ಜೆ ಗುರುತು ಕಾಣದ ಉತ್ತರ ಕನ್ನಡ: ಆಡಳಿತದ ಅಂತರವೇ ಅಭಿವೃದ್ಧಿಗೆ ಅಡ್ಡಿ

ನಗರಸಭೆಯ ನಿರ್ದೇಶನದಂತೆ, ಇನ್ನು ಮುಂದೆ ಎಲ್ಲಾ ಪೌರ ಕಾರ್ಮಿಕರು ಸಮವಸ್ತ್ರ ಹಾಗೂ ಸುರಕ್ಷತಾ ಉಪಕರಣಗಳನ್ನು ಕಡ್ಡಾಯವಾಗಿ ಧರಿಸಿಕೊಂಡೇ ಕರ್ತವ್ಯ ನಿರ್ವಹಿಸಬೇಕು. ನಿಯಮ ಪಾಲಿಸದೆ ಕೆಲಸಕ್ಕೆ ಹಾಜರಾಗುವ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡುವುದಿಲ್ಲ. ಸುರಕ್ಷತಾ ಸಾಧನಗಳನ್ನು ಬಳಸದೆ ಕರ್ತವ್ಯಕ್ಕೆ ಬರುವ ಸಿಬ್ಬಂದಿಯನ್ನು ವಾಪಸ್ ಕಳುಹಿಸುವ ಕ್ರಮವನ್ನೂ ಅನುಸರಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

ನಗರಸಭೆಯ ಈ ಕ್ರಮವು ಪೌರ ಕಾರ್ಮಿಕರ ಆರೋಗ್ಯ ರಕ್ಷಣೆಗೆ ನೆರವಾಗುವುದರ ಜೊತೆಗೆ, ಸ್ವಚ್ಛತಾ ಕಾರ್ಯದಲ್ಲಿ ಶಿಸ್ತು, ವೃತ್ತಿಪರತೆ ಹಾಗೂ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪೌರ ಕಾರ್ಮಿಕರ ಕಲ್ಯಾಣಕ್ಕೆ ಆದ್ಯತೆ ನೀಡಿರುವ ನಗರಸಭೆಯ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...