ದಾಂಡೇಲಿ | ಅರಣ್ಯದ ನಿಜವಾದ ರಾಯಭಾರಿಗಳು ಸ್ಥಳೀಯರೇ: ಪರಿಸರ ಸಂರಕ್ಷಣೆಗೆ ನಟ ಗಣೇಶ್ ಕರೆ

Date:

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ವನ್ಯಜೀವಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಅರಣ್ಯ ಮತ್ತು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕರೆ ನೀಡಿದರು.

- Advertisement -

ನಗರದ ಹಾರ್ನ್‌ಬಿಲ್ ಸಭಾಭವನದಲ್ಲಿ ಆಯೋಜಿಸಲಾಗಿದ್ದ ವನ್ಯಜೀವಿ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ದಾಂಡೇಲಿಯ ಪ್ರಕೃತಿ ಸೌಂದರ್ಯ, ದಟ್ಟ ಅರಣ್ಯ ಹಾಗೂ ಜೀವ ವೈವಿಧ್ಯತೆ ತಮ್ಮನ್ನು ಆಕರ್ಷಿಸಿದೆ ಎಂದು ಹೇಳಿದರು. ಪ್ರಕೃತಿಯೊಂದಿಗೆ ಬೆಸೆದುಕೊಂಡು ಬದುಕುತ್ತಿರುವ ಇಲ್ಲಿನ ಜನರ ಜೀವನಶೈಲಿ ಇತರರಿಗೆ ಮಾದರಿಯಾಗಿದ್ದು, ಪರಿಸರದ ಬಗ್ಗೆ ಅವರಿಗಿರುವ ಕಾಳಜಿ ಶ್ಲಾಘನೀಯ ಎಂದು ತಿಳಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ನಾನು ಈ ಅಭಿಯಾನದ ರಾಯಭಾರಿಯಾಗಿ ಬಂದಿದ್ದೇನೆ. ಆದರೆ ಅರಣ್ಯದ ಮಹತ್ವ, ಅದರ ಸಂರಕ್ಷಣೆಯ ಅಗತ್ಯತೆ ಹಾಗೂ ವನ್ಯಜೀವಿಗಳ ಬಗ್ಗೆ ಇಲ್ಲಿನ ಜನರಿಗೆ ಹೆಚ್ಚಿನ ಅರಿವು ಇದೆ. ಆದ್ದರಿಂದ ಈ ಅರಣ್ಯದ ನಿಜವಾದ ರಾಯಭಾರಿಗಳು ನೀವೇ, ಎಂದು ಸ್ಥಳಿಯರಿಗೆ ಹೇಳಿದರು. ಅರಣ್ಯ ಸಂಪತ್ತಿನ ರಕ್ಷಣೆ ಕೇವಲ ಅರಣ್ಯ ಇಲಾಖೆಯ ಹೊಣೆಗಾರಿಕೆಯಾಗದೆ, ಸಮಾಜದ ಪ್ರತಿಯೊಬ್ಬರೂ ತಮ್ಮ ಪಾಲಿನ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ ಎಂದು ಗಣೇಶ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ

ಪರಿಸರ ಸಮತೋಲನ ಕಾಪಾಡಲು ಜನರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ವಿಶೇಷವಾಗಿ ಯುವ ಪೀಳಿಗೆಗೆ ಬಾಲ್ಯದಿಂದಲೇ ಪರಿಸರ ಪ್ರಜ್ಞೆ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅವರು, ಪ್ರಕೃತಿಯ ಮೇಲಿನ ಪ್ರೀತಿ ಹಾಗೂ ಸಂರಕ್ಷಣೆಯ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು. ಇದೇ ವೇಳೆ ಅರಣ್ಯ ಸಂಪತ್ತಿನ ರಕ್ಷಣೆಗೆ ಶ್ರಮಿಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದರು.

ಗ್ರಾಮ ಮಟ್ಟದಲ್ಲಿ ಅರಣ್ಯ ಸಂರಕ್ಷಣೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ಜೋಯಿಡಾ ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತಿಗೆ ‘ಅತ್ಯುತ್ತಮ ಅರಣ್ಯ ಸ್ನೇಹಿ ಗ್ರಾಮ ಪಂಚಾಯತ್’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ವಿಶೇಷ ಕ್ಷಣವಾಗಿ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಗಣೇಶ್, ತಮ್ಮ ಜನಪ್ರಿಯ ‘ಮುಂಗಾರು ಮಳೆ’ ಚಿತ್ರದ ಅನಿಸುತ್ತಿದೆ ಯಾಕೋ ಇಂದು ಹಾಡನ್ನು ಹಾಡಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...