ಬಳ್ಳಾರಿ ಜೈಲಿನಲ್ಲಿ ಶೌಚಕ್ಕೆ ಸರ್ಜಿಕಲ್ ಚೇರ್ ಕೇಳಿದ ನಟ ದರ್ಶನ್

Date:

Advertisements

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಆರೋಪದ ಬೆನ್ನಲ್ಲೇ ನಟ ದರ್ಶನ್‌ರನ್ನು ಇತ್ತೀಚೆಗೆ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಆದರೆ ಇಲ್ಲಿ ದರ್ಶನ್ ಈಗ ಶೌಚಕ್ಕಾಗಿ ಸರ್ಜಿಕಲ್ ಚೇರ್ ಕೇಳಿದ್ದಾರೆ ಎಂದು ವರದಿಯಾಗಿದೆ.

ನಟ ದರ್ಶನ್ ಅವರಿಗೆ ಬೆನ್ನು ನೋವು ಜೋರಾಗಿದ್ದು, ಇದರಿಂದಾಗಿ ಶೌಚಾಕ್ಕಾಗಿ ಸರ್ಜಿಕಲ್ ಚೇರ್ ಅನ್ನು ಕೇಳಿರುವುದಾಗಿ ಕಾರಾಗೃಹ ಇಲಾಖೆಯ ಉತ್ತರ ವಲಯ ಉಪಮಹಾನೀರೀಕ್ಷಿಕ ಟಿ.ಪಿ ಶೇಷ ತಿಳಿಸಿದ್ದಾರೆ.

ಇಲಾಖೆಯ ಸೂಚನೆಯಂತೆ ಬಳ್ಳಾರಿ ಜೈಲಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದ ಉಪಮಹಾನೀರೀಕ್ಷಿಕರು ದರ್ಶನ್ ಜೈಲಿನಲ್ಲಿ ಆಹಾರ ಸೇವನೆ ಮಾಡದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ

“ಜೈಲಿನಲ್ಲಿ ಇಂಡಿಯನ್ ಟಾಯ್ಲೆಟ್ ಇದ್ದು, ಬೆನ್ನೆಲುಬು ಸಮಸ್ಯೆ ಇರುವ ಕಾರಣ ಶೌಚಾಕ್ಕೆ ಕಷ್ಟವಾಗುತ್ತಿದೆ ಎಂದು ದರ್ಶನ್ ತಿಳಿಸಿದ್ದಾರೆ. ವೆಸ್ಟರ್ನ್ ಕಮೋಡ್ ವ್ಯವಸ್ಥೆ ಮಾಡಿ ಅಥವಾ ಸರ್ಜಿಕಲ್ ಚೇರ್ ಆದರೂ ನೀಡಿ ಎಂದು ದರ್ಶನ್ ಮನವಿ ಮಾಡಿದ್ದಾರೆ. ದರ್ಶನ್ ಟಿವಿ ಕೇಳಿದರೆ ನೀಡಲಾಗುತ್ತದೆ. ಇತರೆ ಕೈದಿಗಳಿಗೂ ಈ ವ್ಯವಸ್ಥೆಯಿದೆ” ಎಂದು ಶೇಷ ಹೇಳಿದರು.

“ದರ್ಶನ್ ಅವರನ್ನು ಜೈಲಿನಲ್ಲಿ ಹೇಗೆ ನೋಡಿಕೊಳ್ಳಬೇಕು ಎಂಬ ಬಗ್ಗೆ ನಿರ್ದೇಶನ ನೀಡಲಾಗಿದೆ. ಅವುಗಳ ಪಾಲನೆಯ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಕುಟುಂಬಸ್ಥರು ಮತ್ತು ವಕೀಲರನ್ನು ಬಿಟ್ಟು ಬೇರೆ ಯಾರಿಗೂ ದರ್ಶನ್ ಭೇಟಿಗೆ ಅವಕಾಶವಿಲ್ಲ. ರಾಜಕೀಯ ಒತ್ತಡಗಳಿಗೆ ನಾವು ಯಾವುದೇ ಕಾರಣಕ್ಕೂ ಮಣಿಯಲ್ಲ” ಎಂದು ದರ್ಶನ್ ಸ್ಪಷ್ಟಪಡಿಸಿದರು.

ಸದ್ಯ ಬಳ್ಳಾರಿ ಜೈಲಿನಲ್ಲಿ ಯಾವುದೇ ಮೊಬೈಲ್ ಜಾಮರ್‌ಗಳಿಲ್ಲ. ಆಧುನಿಕ ಜಾಮರ್ ಅಳವಡಿಸಲು ಕ್ರಮತೆಗೆದುಕೊಳ್ಳಲಾಗಿದೆ ಎಂದೂ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Ootta,ನೀರು , haagu ನಿದ್ರೆ, ಶೌಚಾಲಯ, eveilla ಮಾನವ na moola bootha hakk,
    Addanu ನೀಡುವುದು ಅಧಿಕಾರಿಗlaa ಧರ್ಮ ನಿಮ್ಮೆಲ್ಲರ rannu kai muggidhu ಕೀಳುತ್ತೇನೆ
    ಹಿಂಸೆ ಕೊಡಬೇಡಿ ಪ್ರಾಣಿಗಳಿಗೆ blue ಕ್ರಾಸ್ idei ,ಮನುಷ್ಯನಿಗೆ ಯಾವುದೇ thrass ಕೊಡಬೇಡಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X