ಯಾದಗಿರಿ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಶಾಸಕರ ಬಂಧನಕ್ಕೆ ಆಗ್ರಹಿಸಿ ದಸಂಸ ಪ್ರತಿಭಟನೆ

Date:

ಯಾದಗಿರಿ ನಗರದ ದಕ್ಷ ಹಾಗೂ ನಿಷ್ಠಾವಂತ ಪೊಲೀಸ್ ಇನ್ಸಪೆಕ್ಟರ್ ಪರಶುರಾಮ್ ಅವರ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಈವರೆಗೆ ಬಂಧಿಸದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದದ ಮುಖಂಡರು ಪ್ರತಿಭಟನೆ ನಡೆಸಿದರು.

- Advertisement -

“30 ಲಕ್ಷ ರೂ. ಲಂಚದ ಬೇಡಿಕೆ ಕಾರಣರಾದವರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದ್ದರೂ ಬಂಧಿಸಿಲ್ಲ. ಇದು ಖಂಡನೀಯ. ಈ ಪ್ರಕರಣದ ಅಮೂಲಾಗ್ರ ತನಿಖೆಗೆ ಸಿಬಿಐಗೆ ಒಪ್ಪಿಸಿ ಆರೋಪಿಗಳನ್ನು ತಕ್ಷಣ ಬಂಧಿಸಿ ಶಿಕ್ಷಿಸಬೇಕು” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ದಸಂಸ ಜಿಲ್ಲಾಧ್ಯಕ್ಷ ಶರಣು ಎಸ್. ನಾಟೇಕರ್, “ಪಿಎಸ್‌ಐ ಪರಶುರಾಮ್ ಇವರ ಸಾವಿಗೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹಾಗೂ ಅವರ ಪುತ್ರ ಪಂಪಣಗೌಡ ಕಾರಣರಾಗಿದ್ದು, 30 ಲಕ್ಷ ರೂ. ಬೇಡಿಕೆ ಇಟ್ಟಿದ್ದರಿಂದ ಅವರು ಹೌಹಾರಿ ಒತ್ತಡಕ್ಕೂಳಗಾಗಿ, ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ. ವಿನಾಕಾರಣ ಏಕಾಏಕಿ ವರ್ಗಾವಣೆ ಮಾಡಿದ್ದರಿಂದ ಅದನ್ನು ರದ್ದು ಮಾಡಲು 30 ಲಕ್ಷ ರೂ ಬೇಡಿಕೆ ಇಟ್ಟಿದ್ದರಿಂದ ಈ ಘಟನೆ ನಡೆದಿದೆ” ಎಂದು ತಿಳಿಸಿದರು.

ಯಾದಗಿರಿ1 2

“ದಕ್ಷ ಅಧಿಕಾರಿಯಾಗಿದ್ದ ಪರಶುರಾಮ್ ಅವರು ಯಾದಗಿರಿ ಠಾಣೆಗೆ ವರ್ಗವಾಗಿ ಬಂದ ಮೇಲೆ ನಗರದಲ್ಲಿ ಅಕ್ರಮಗಳನ್ನು ಮಟ್ಟಹಾಕಿ ಭ್ರಷ್ಟರಿಗೆ ಸಿಂಹಸ್ವಪ್ನರಾಗಿ ಕೆಲಸ ಮಾಡಿ ನಗರದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬಂದಿದ್ದರು. ಯಾವುದೇ ರಾಜಕೀಯ ಮಾಡದೇ ಯಾರ ಪಕ್ಷಪಾತವನ್ನೂ ಮಾಡದೇ ನ್ಯಾಯ ಪಕ್ಷಪಾತಿಯಾಗಿ ಕೆಲಸ ಮಾಡಿ ಶ್ರೀಸಾಮಾನ್ಯರಿಂದ ಸೈ ಎನಿಸಿಕೊಂಡ ದಕ್ಷ ಅಧಿಕಾರಿಯಾಗಿದ್ದರು” ಎಂದು ಶರಣು ಎಸ್. ನಾಟೇಕರ್ ತಿಳಿಸಿದರು.

“ಅವರ ಮರಣದಿಂದಾಗಿ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದರೆ ತಕ್ಷಣ ಆರೋಪಿಗಳನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಇಲ್ಲವಾದಲ್ಲಿ ಯಾದಗಿರಿ ನಗರ ಬಂದ್ ಮಾಡಿ ಉಗ್ರ ಹೋರಾಟ ರೂಪಿಸಲಾಗುವುದು” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಚ್ಚರಿಕೆ ನೀಡಿದೆ.

ಪ್ರತಿಭಟನೆಯಲ್ಲಿ ಭೀಮರಾಯ ಸಿಂಧಿಗೇರಿ, ಶಿವಶಂಕರ ಹೊಸಮನಿ, ಶಿವಶರಣಪ್ಪ ವಾಡಿ, ಭೀಮರಾಯ್ ಕಾಗಿ, ಖಂಡಪ್ಪ ಸಾಹುಕಾರ, ಮಾದೇವಪ್ಪ ಗುರುಸುಣಿಸಿ, ಮಲ್ಲಪ್ಪ ಲಂಡನಕರ್, ಸಿದ್ರಾಮ್ ಭಂಡಾರಿ, ಶರಣಪ್ಪ ಮಮ್ಮದರ್, ಮಾರುತಿ,
ಮಹಮ್ಮದ್ ಸಲೀಮ್, ಪವಿತ್ರ, ಸುರೇಖಾ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...