ದಾವಣಗೆರೆ | ಚಾರ್ಜ್‌ಶೀಟ್‌ನಿಂದ ಹೆಸರು ಕೈಬಿಡಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ಐ

Date:

ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ದೂರುದಾರನ ತಾಯಿ ಮತ್ತು ಪತ್ನಿಯ ಹೆಸರನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲು ಲಂಚ ಸ್ವೀಕರಿಸುವಾಗ ಎಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನೆಡೆದಿದೆ.

- Advertisement -

ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್ಐ ಈರಣ್ಣ ₹50,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿಗೆ ಒಳಗಾದ ಪೊಲೀಸ್ ಅಧಿಕಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಲೋಕಾಯುಕ್ತ ದೂರುದಾರ ಮಣಿಕಂಠ ಆಚಾರ್ಯ ಮತ್ತು ಅವರ ತಾಯಿ ಭಾಗಮ್ಮ ಆಚಾರ್ಯ ಮತ್ತು ಪತ್ನಿ ಅರ್ಚನ ಆಚಾರ್ಯ ಅವರ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದಾಖಲಾದ ಪ್ರಕರಣದಲ್ಲಿ ದೂರುದಾರನ ತಾಯಿ ಮತ್ತು ಪತ್ನಿಯ ಹೆಸರನ್ನು ಚಾರ್ಜ್ ಶೀಟ್‌ನಿಂದ ಕೈಬಿಡಲು ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್‌ಐ ಈರಣ್ಣ 1,00,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.

ಮುಂಗಡವಾಗಿ ₹50,000 ನೀಡಲು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲಂಚದ ಹಣ ನೀಡಿ ಕೆಲಸ ಮಾಡಿಸಿಕೊಳ್ಳಲು ಇಷ್ಟವಿಲ್ಲದ ದೂರುದಾರ ಈ ಬಗ್ಗೆ ದಾವಣಗೆರೆ ಲೋಕಾಯುಕ್ತ ಕಚೇರಿಗೆ ಗಣಕೀಕೃತ ದೂರು ದಾಖಲಿಸಿದ್ದರು.

ಆರೋಪಿತ ಎಎಸ್ಐ ವಿರುದ್ಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ದೂರಿನ ಬಗ್ಗೆ ಮೊಕದ್ದಮೆ ಪಿಸಿ ಆಕ್ಟ್-1988(ತಿದ್ದುಪಡಿ ಕಾಯ್ದೆ-2018) ರೀತ್ಯ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಕ್ರಮ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ದೂರುದಾರರಿಂದ ಆರೋಪಿತರು ₹50,000 ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ ಎಸ್ ಕೌಲಾಪೂರೆ ಮಾರ್ಗದರ್ಶನದಲ್ಲಿ, ಉಪಾಧೀಕ್ಷಕಿ ಕಲಾವತಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಮಧುಸೂದನ್ ಸಿ ಪ್ರಭು ಬಸೂರು, ಸರಳ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಜ್ಞಾನಕ್ಕೆ ಅಂತ್ಯವಿದೆ, ಜ್ಞಾನವೆಂಬುದು ಅಮರ: ಬಸವ ಹರಳಯ್ಯ ಶ್ರೀ

“ಕಾರ್ಯಾಚರಣೆಯಲ್ಲಿ ₹50,000 ನಗದು ಮತ್ತು ಎಎಸ್ಐ ಈರಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...