ದಾವಣಗೆರೆ | ಪೇಮೆಂಟ್ ಸೀಟು ಮಾರಾಟ ನಿಲ್ಲಿಸಿ-ಯುಬಿಡಿಟಿ ಉಳಿಸಿ’ ಘೋಷದಡಿ ಅ.16ರಂದು ಬಂದ್‌ಗೆ ಕರೆ

Date:

Advertisements

ಯುಬಿಡಿಟಿ ಹಳೆಯ ವಿದ್ಯಾರ್ಥಿಗಳ ಸಂಘದ ‘ಯುಬಿಡಿಟಿ ಉಳಿಸಿ ಚಳುವಳಿ’ಗೆ ಸರ್ಕಾರದ ಸಕಾರಾತ್ಮಕ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಘ ಮತ್ತು ಎಐಡಿಎಸ್‌ಒ ನೇತೃತ್ವದಲ್ಲಿ ಅಕ್ಟೋಬರ್ 16ರಂದು ದಾವಣಗೆರೆ ನಗರದ ಸ್ವಯಂಪ್ರೇರಿತ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ.

ʼಯುಬಿಡಿಟಿ ಉಳಿಸಿ ಪೇಮೆಂಟ್ ಕೋಟಾ ರದ್ದುಪಡಿಸಿ’ ಎಂಬ ಘೋಷಣೆಯಡಿ ದಾವಣಗೆರೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಯುಬಿಡಿಟಿಯಲ್ಲಿ ಪೇಮೆಂಟ್ ಕೋಟಾ ರದ್ದುಪಡಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಒಂದು ತಿಂಗಳಿಂದ ಚಳವಳಿ ನಡೆಸುತ್ತಿದ್ದರೂ ಕೂಡ ರಾಜ್ಯ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿಲ್ಲ. ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ.

ದಾವಣಗೆರೆ ಬಂದ್‌ಗೆ ಕರೆ

ಬಡ ವಿದ್ಯಾರ್ಥಿಗಳ ಪಾಲಿಗೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸೀಟುಗಳು ಆಶಾಕಿರಣವಾಗಿವೆ. ಬಡ ವಿದ್ಯಾರ್ಥಿಗಳಿಗೆ ಈಗಿರುವ ಎಂಜಿನಿಯರಿಂಗ್ ಶುಲ್ಕ ₹41,000ವನ್ನು ಭರಿಸುವುದೇ ಕಷ್ಟಸಾಧ್ಯ. ಬಡವರ ಪಾಲಿಗಿದ್ದ ಎಂಜಿನಿಯರಿಂಗ್ ಶಿಕ್ಷಣವನ್ನು ಕಿತ್ತುಕೊಳ್ಳುತ್ತಿರುವ ಸರ್ಕಾರದ ವ್ಯಾಪಾರಿ ದೋರಣೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲ ಜನರಿಂದ ಬಂದ್‌ಗೆ ಬೆಂಬಲ ವ್ಯಕ್ತವಾಗುತ್ತಿದೆ. ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಎಲ್ಲ ವ್ಯಾಪಾರಸ್ಥರ ಸಂಘಟನೆಗಳು, ಆಟೋ, ಬಸ್, ಲಾರಿ ಸೇರಿದಂತೆ ವಿವಿಧ ಸಾರಿಗೆ ಸಂಘಟನೆಗಳು, ಬೋಧಕ ಮತ್ತು ಬೋಧಕೇತರ ಶೈಕ್ಷಣಿಕ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ಮಹಿಳಾ ಸಂಘಟನೆಗಳು, ಯುವಜನ ಸಂಘಟನೆಗಳು, ವೈದ್ಯರ ಸಂಘಟನೆ ಸೇರಿದಂತೆ ನಗರದ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ದಾವಣಗೆರೆ ಹೆಮ್ಮೆಯ ಯುಬಿಡಿಟಿ ಉಳಿಸಲು ನಡೆಯುತ್ತಿರುವ ಬಂದ್ ಯಶಸ್ವಿಗೊಳಿಸಲು ತಯಾರಿ ನಡೆಸಿವೆ.

Advertisements

ಈ ಸುದ್ದಿ ಓದಿದ್ದೀರಾ? ಗೌರಿ ಲಂಕೇಶ್ ಹತ್ಯೆ ಪ್ರಕರಣ | ಜಾಮೀನಿನ ಮೇಲೆ ಹೊರಬಂದ ಆರೋಪಿಗಳಿಗೆ ಸಂಘಪರಿವಾರದಿಂದ ಸನ್ಮಾನ!

ಹಲವು ಸಂಘಟನೆಗಳ ಮುಖಂಡರ ಸಭೆ ಕರೆದು ಬಂದ್ ಯಶಸ್ವಿಗೊಳಿಸಲು ಪೂರ್ವಬಾವಿ ಸಭೆಯನ್ನು ಕೂಡ ನಡೆಸಲಾಗಿದೆ. ನಗರದ ಬಡಾವಣೆಗಳು, ಮುಖ್ಯ ರಸ್ತೆಗಳು, ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ವ್ಯಾಪಕ ಪ್ರಚಾರ ಕೂಡ ನಡೆಸಲಾಗುತ್ತಿದ್ದು, ಬಂದ್ ಯಶಸ್ವಿಗೊಳಿಸಲು ಕರೆ ನೀಡಲಾಗಿದೆ. ವಿವಿಧ ಕಡೆ ಭಿತ್ತಿ ಪತ್ರಗಳನ್ನು ಅಂಟಿಸಿ ಬಿರುಸಿನ ಪ್ರಚಾರ ಮಾಡಲಾಯಿತು.

ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ಹಾಗೂ ಜಿಲ್ಲಾ ಕಾರ್ಯದರ್ಶಿ ಸುಮನ್ ಟಿ ಎಸ್ ಸೇರಿದಂತೆ ಯುಬಿಡಿಟಿ ಉಳಿಸಿ ಹೋರಾಟ ಸಮಿತಿಯ ಸದಸ್ಯರಾದ ಅಭಿಷೇಕ್, ಆದರ್ಶ್, ರೋಹಿತ್, ಗೌತಮ್, ಶಿವಕುಮಾರ್ ಹಾಗೂ ಎಐಡಿಎಸ್‌ಒನ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X