ದಾವಣಗೆರೆ | ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ

Date:

Advertisements

ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ 1818 ಜನವರಿ 01ರಂದು 500 ಮಂದಿ ಮಹಾರ್ ಸೈನಿಕರು, 28,000 ಮಂದಿ ಪೇಶ್ವೆಗಳ ಶೋಷಣೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿ, ಯುದ್ಧ ಗೆದ್ದು ಬಂದ ಈ ನೆನಪನ್ನು ನಾವೆಲ್ಲ ಸ್ಮರಿಸಿಕೊಳ್ಳುವ ದಿನ ಇದಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಸ್ಮರಿಸಿದರು.

ದಾವಣಗೆರೆಯಲ್ಲಿ ದಸಂಸ ವತಿಯಿಂದ ಹಮ್ಮಿಕೊಂಡಿದ್ದ ಕೋರೆಗಾಂವ್‌ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಹಿರಿಯರು ಹಾಗೂ ಬಾಬಾ ಸಾಹೇಬರು ಕೋರೆಗಾಂವ್‌ ವಿಜಯೋತ್ಸವ ಆಚರಿಸುವ ಮೂಲಕ ನಮ್ಮೆಲ್ಲರಿಗೂ ಈ ಬಗ್ಗೆ ಹೆಮ್ಮೆ, ಅಭಿಮಾನ ಮೂಡಿಸಿದ್ದಾರೆ” ಎಂದರು.

Advertisements

ತಾಲೂಕು ಸಂಚಾಲಕ ಅಣಜಿ ಹನುಮಂತಪ್ಪ ಮಾತನಾಡಿ, “ನೂರಾರು ವರ್ಷಗಳ ಹಿಂದೆ ಅಸ್ಪೃಶ್ಯರ ಹಕ್ಕು ಪಡೆಯಲು ಹೋರಾಡಿ ಹುತಾತ್ಮರಾದ ಮತ್ತು ಯುದ್ಧ ಗೆದ್ದ ನಮ್ಮ ಹಿರಿಯರಿಗೆ ಗೌರವ ಸಮರ್ಪಣೆ ಮಾಡಲು ಹೆಮ್ಮೆಯಿಂದ ಈ ಆಚರಣೆ ಮಾಡಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕೇಬಲ್ ಹಾಕಲು ಕೆಪಿಟಿಸಿಎಲ್ ಅಗೆದ ರಸ್ತೆ ದುರಸ್ತಿಗೆ ಎಂಸಿಸಿ ಸೂಚನೆ

ಸಂಭ್ರಮಾಚರಣೆಯಲ್ಲಿ ಜಿಲ್ಲಾ ಮಹಿಳಾ ಸಂಚಾಲಕಿ ವಿಜಯಲಕ್ಷ್ಮೀ, ಜಿಲ್ಲಾ ಕಲಾ ಮಂಡಳಿ ಸದಸ್ಯ ದೊಡ್ಡಪ್ಪ ಅವರಗೋಳ್ಳ, ಜಿಲ್ಲಾ ಸಲಹಾ ಸಮಿತಿ ಸದಸ್ಯ ಗುಮ್ಮಾನೂರ್ ಹನುಮಂತಪ್ಪ, ತಾಲೂಕು ಸಂಘಟನಾ ಸಂಚಾಲಕರುಗಳಾದ ನಿಂಗಪ್ಪ ಅಣಜಿ, ಚಿತ್ತಾನಹಳ್ಳಿ ನಾಗರಾಜ್, ಹಾಲೇಶ್ ಕುಂದುವಾಡ, ನಗರ ಸಂಚಾಲಕ ಶಿವಶಂಕರ್ ಎಸ್ ಎಂ, ತಾಲೂಕು ಮಹಿಳಾ ಸಂಚಾಲಾಕಿ ಆರತಿ ಚಿತ್ತಾನಹಳ್ಳಿ ಹಾಗೂ ಹೋಬಳಿ ಸಂಚಾಲಕ ನಾಗರಾಜ್ ಹುಚ್ಚವ್ವನಹಳ್ಳಿ, ಹೋಬಳಿ ಸಂಘಟನಾ ಸಂಚಾಲಕ ತ್ಯಾಗರಾಜ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X